AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್

WTC Final: ಪಂದ್ಯದ ಕೊನೆಯ ದಿನದಂದು ಭಾರತ ತಂಡವು ಉತ್ತಮ ಜೊತೆಯಾಟ ಆಡುವಲ್ಲಿ ವಿಫಲವಾಯ್ತು. ಅದಕ್ಕಾಗಿಯೇ ತಂಡ ಸೋಲನುಭವಿಸಬೇಕಾಯಿತು.

WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್
ಪೃಥ್ವಿಶಂಕರ
|

Updated on: Jun 27, 2021 | 6:11 PM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡ ನಿರೀಕ್ಷೆಯಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಮತ್ತು ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್‌ಗಳ ಸೋಲು ಅನುಭವಿಸಿತು. ಭಾರತದ ಮಾಜಿ ನಾಯಕ ಮತ್ತು ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್, ಪಂದ್ಯದ ಕೊನೆಯ ದಿನದಂದು ಭಾರತ ತಂಡವು ಉತ್ತಮ ಜೊತೆಯಾಟ ಆಡುವಲ್ಲಿ ವಿಫಲವಾಯ್ತು. ಅದಕ್ಕಾಗಿಯೇ ತಂಡ ಸೋಲನುಭವಿಸಬೇಕಾಯಿತು. ಭಾರತವು ಕೊನೆಯ ದಿನವನ್ನು ಎರಡು ವಿಕೆಟ್‌ಗಳ ನಷ್ಟಕ್ಕೆ 64 ರನ್‌ಗಳೊಂದಿಗೆ ಪ್ರಾರಂಭಿಸಿತು ಆದರೆ ಶೀಘ್ರದಲ್ಲೇ ಇಡೀ ತಂಡವು 170 ರನ್‌ಗಳಿಗೆ ಆಲೌಟ್ ಆಗಿತ್ತು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.

ವಿಕೆಟ್‌ ಬೇಗಬೇಗ ಬಿದ್ದವು ಆರಂಭದಲ್ಲಿ ಭಾರತ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡ ನಂತರ ಅಜಿಂಕ್ಯ ರಹಾನೆ ಕಳಪೆ ರೀತಿಯಲ್ಲಿ ಔಟ್ ಆದರು. ಆಗ ಭಾರತದ ಬ್ಯಾಟ್ಸ್‌ಮನ್‌ಗಳು ವಿಕೆಟ್‌ಗಳನ್ನು ಉಳಿಸಿಕೊಳ್ಳುವ ಅಗತ್ಯವಿತ್ತು ಎಂದು ಸಚಿನ್ ಹೇಳಿದ್ದಾರೆ. ಮೊದಲ 10-12 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದಿರುವುದು ಬಹಳ ಮುಖ್ಯ, ಆದರೆ ಇಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಯಿತು. ಇದರ ಫಲವಾಗಿ ಅವರು ಕೊಹ್ಲಿ-ಪೂಜಾರ ವಿಕೆಟ್‌ಗಳನ್ನು ಪಡೆದರು. ರಹಾನೆ ಸಹ ಹೊರಬಂದರು, ಇದು ಭಾರತದ ಮೇಲೆ ಒತ್ತಡ ಹೇರಿತು. ಇದರಿಂದ ಉಳಿದ ಬ್ಯಾಟ್ಸ್​ಮನ್​ಗಳು ಬಹುಬೇಗನೇ ವಿಕೆಟ್ ಒಪ್ಪಿಸಿದರು.

ಪಂತ್ ಪ್ರಯತ್ನಕ್ಕೆ ಶ್ಲಾಘನೆ ಪಂತ್ ಕೆಲವು ಹೊಡೆತಗಳನ್ನು ಆಡಿ ರನ್ ಗಳಿಸಲು ಪ್ರಯತ್ನಿಸಿದ್ದನ್ನು ಸಚಿನ್ ಮೆಚ್ಚಿಕೊಂಡಿದ್ದಾರೆ. ಪಂತ್ ಕೆಲವು ಅದ್ಭುತ ಶಾಟ್​ಗಳನ್ನು ಹೊಡೆಯುವ ಮೂಲಕ ವಾತಾವರಣವನ್ನು ಬದಲಾಯಿಸಲು ಪ್ರಯತ್ನಿಸಿದರು. ನಮ್ಮ ಬೌಲರ್‌ಗಳು ಕೂಡ ಇನ್ನೂ ಕೆಲವು ಓವರ್‌ಗಳನ್ನು ಆಡಬಹುದಿತ್ತು. ಆದರೆ ಭಾರತದ ಬೌಲರ್​ಗಳು ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತ ಬಂದರು. ಇದರಿಂದಾಗಿ ಪಂದ್ಯವನ್ನು 10-15 ಓವರ್‌ಗಳಲ್ಲಿ ನಿರ್ಧರಿಸಲಾಯಿತು. ನಮ್ಮ ಕಡೆಯಿಂದ ಉತ್ತಮ ಜೊತೆಯಾಟ ಇದ್ದಿದ್ದರೆ, ನಾವು ಅವರ ಮೇಲೆ ಒತ್ತಡ ಹೇರಬಹುದಿತ್ತು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು