AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಪಂದ್ಯದ ನಡುವೆ ಜಗಳಕ್ಕಿಳಿದ ಭಾರತ-ಪಾಕಿಸ್ತಾನ್ ಆಟಗಾರರು

SAFF Championship 2023: ಟೀಮ್ ಇಂಡಿಯಾ ಮ್ಯಾನೇಜರ್ ಸ್ಟಿಮ್ಯಾಕ್‌ ಅವರಿಗೆ ರೆಫರಿ ರೆಡ್ ಕಾರ್ಡ್ ನೀಡಿದರೆ, ಪಾಕಿಸ್ತಾನದ ಮ್ಯಾನೇಜರ್ ಶಹಜಾದ್ ಅನ್ವರ್‌ಗೆ ಹಳದಿ ಕಾರ್ಡ್ ನೀಡಿದರು.

India vs Pakistan: ಪಂದ್ಯದ ನಡುವೆ ಜಗಳಕ್ಕಿಳಿದ ಭಾರತ-ಪಾಕಿಸ್ತಾನ್ ಆಟಗಾರರು
India vs Pakistan
TV9 Web
| Edited By: |

Updated on:Jun 21, 2023 | 10:06 PM

Share

SAFF Championship 2023: ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ SAFF ಚಾಂಪಿಯನ್‌ಶಿಪ್ 2023 ಫುಟ್​ಬಾಲ್ ಪಂದ್ಯದ ವೇಳೆ ಭಾರತ-ಪಾಕಿಸ್ತಾನ್ (India vs Pakistan) ಆಟಗಾರರು ಜಗಳಕ್ಕಿಳಿದ ಘಟನೆ ನಡೆದಿದೆ. ಪಂದ್ಯದ ಮೊದಲಾರ್ಧದ ಕೊನೆಯ ನಿಮಿಷದಲ್ಲಿ ಈ ಘಟನೆ ನಡೆದಿದ್ದು, ಆ ಬಳಿಕ ಪರಿಸ್ಥಿತಿ ತಿಳಿಗೊಳಿಸಿ ಪಂದ್ಯವನ್ನು ಮುಂದುವರೆಸಲಾಯಿತು. ಪಂದ್ಯದ 44ನೇ ನಿಮಿಷದಲ್ಲಿ ಚೆಂಡು ಸೈಡ್ ಲೈನ್​ ದಾಟಿತು. ಈ ವೇಳೆ ಲೈನ್ ಅಂಪೈರ್ ನಿರ್ಧಾರಕ್ಕೂ ಮುನ್ನ ಪಾಕಿಸ್ತಾನ್ ಆಟಗಾರ ಅಬ್ದುಲ್ಲಾ ಇಕ್ಬಾಲ್ ಚೆಂಡನ್ನು ಥ್ರೋ ಇನ್ ಮಾಡಲು ಮುಂದಾದರು.

ಈ ವೇಳೆ ಅಲ್ಲೇ ಇದ್ದ ಭಾರತ ತಂಡದ ಮ್ಯಾನೇಜರ್ ಇಗೊರ್ ಸ್ಟಿಮ್ಯಾಕ್ ಪಾಕಿಸ್ತಾನಿ ಆಟಗಾರನ ಕೈಯಿಂದ ಚೆಂಡನ್ನು ಎಳೆದರು. ಇದರಿಂದ ಕುಪಿತಗೊಂಡ ಪಾಕ್ ತಂಡದ ಮ್ಯಾನೇಜರ್ ಹಾಗೂ ಆಟಗಾರರು ಭಾರತ ತಂಡದ ಕೋಚ್ ವಿರುದ್ಧ ಜಗಳಕ್ಕಿಳಿದರು. ಇದೇ ವೇಳೆ ಟೀಮ್ ಇಂಡಿಯಾ ಆಟಗಾರರ ಆಗಮನದೊಂದಿಗೆ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಯಿತು.

ತಕ್ಷಣವೇ  ರೆಫರಿಗಳು ಮಧ್ಯೆಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಅಲ್ಲದೆ ಟೀಮ್ ಇಂಡಿಯಾ ಮ್ಯಾನೇಜರ್ ಸ್ಟಿಮ್ಯಾಕ್‌ ಅವರಿಗೆ ರೆಫರಿ ರೆಡ್ ಕಾರ್ಡ್ ನೀಡಿದರೆ, ಪಾಕಿಸ್ತಾನದ ಮ್ಯಾನೇಜರ್ ಶಹಜಾದ್ ಅನ್ವರ್‌ಗೆ ಹಳದಿ ಕಾರ್ಡ್ ನೀಡಿದರು. ಇದಾಗ್ಯೂ ಭಾರತ ತಂಡವು ಪಂದ್ಯವನ್ನು 4-0 ಅಂತರದಿಂದ ಗೆದ್ದುಕೊಂಡಿದೆ.

Published On - 9:17 pm, Wed, 21 June 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ