AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಪಂದ್ಯದ ನಡುವೆ ಜಗಳಕ್ಕಿಳಿದ ಭಾರತ-ಪಾಕಿಸ್ತಾನ್ ಆಟಗಾರರು

SAFF Championship 2023: ಟೀಮ್ ಇಂಡಿಯಾ ಮ್ಯಾನೇಜರ್ ಸ್ಟಿಮ್ಯಾಕ್‌ ಅವರಿಗೆ ರೆಫರಿ ರೆಡ್ ಕಾರ್ಡ್ ನೀಡಿದರೆ, ಪಾಕಿಸ್ತಾನದ ಮ್ಯಾನೇಜರ್ ಶಹಜಾದ್ ಅನ್ವರ್‌ಗೆ ಹಳದಿ ಕಾರ್ಡ್ ನೀಡಿದರು.

India vs Pakistan: ಪಂದ್ಯದ ನಡುವೆ ಜಗಳಕ್ಕಿಳಿದ ಭಾರತ-ಪಾಕಿಸ್ತಾನ್ ಆಟಗಾರರು
India vs Pakistan
TV9 Web
| Edited By: |

Updated on:Jun 21, 2023 | 10:06 PM

Share

SAFF Championship 2023: ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ SAFF ಚಾಂಪಿಯನ್‌ಶಿಪ್ 2023 ಫುಟ್​ಬಾಲ್ ಪಂದ್ಯದ ವೇಳೆ ಭಾರತ-ಪಾಕಿಸ್ತಾನ್ (India vs Pakistan) ಆಟಗಾರರು ಜಗಳಕ್ಕಿಳಿದ ಘಟನೆ ನಡೆದಿದೆ. ಪಂದ್ಯದ ಮೊದಲಾರ್ಧದ ಕೊನೆಯ ನಿಮಿಷದಲ್ಲಿ ಈ ಘಟನೆ ನಡೆದಿದ್ದು, ಆ ಬಳಿಕ ಪರಿಸ್ಥಿತಿ ತಿಳಿಗೊಳಿಸಿ ಪಂದ್ಯವನ್ನು ಮುಂದುವರೆಸಲಾಯಿತು. ಪಂದ್ಯದ 44ನೇ ನಿಮಿಷದಲ್ಲಿ ಚೆಂಡು ಸೈಡ್ ಲೈನ್​ ದಾಟಿತು. ಈ ವೇಳೆ ಲೈನ್ ಅಂಪೈರ್ ನಿರ್ಧಾರಕ್ಕೂ ಮುನ್ನ ಪಾಕಿಸ್ತಾನ್ ಆಟಗಾರ ಅಬ್ದುಲ್ಲಾ ಇಕ್ಬಾಲ್ ಚೆಂಡನ್ನು ಥ್ರೋ ಇನ್ ಮಾಡಲು ಮುಂದಾದರು.

ಈ ವೇಳೆ ಅಲ್ಲೇ ಇದ್ದ ಭಾರತ ತಂಡದ ಮ್ಯಾನೇಜರ್ ಇಗೊರ್ ಸ್ಟಿಮ್ಯಾಕ್ ಪಾಕಿಸ್ತಾನಿ ಆಟಗಾರನ ಕೈಯಿಂದ ಚೆಂಡನ್ನು ಎಳೆದರು. ಇದರಿಂದ ಕುಪಿತಗೊಂಡ ಪಾಕ್ ತಂಡದ ಮ್ಯಾನೇಜರ್ ಹಾಗೂ ಆಟಗಾರರು ಭಾರತ ತಂಡದ ಕೋಚ್ ವಿರುದ್ಧ ಜಗಳಕ್ಕಿಳಿದರು. ಇದೇ ವೇಳೆ ಟೀಮ್ ಇಂಡಿಯಾ ಆಟಗಾರರ ಆಗಮನದೊಂದಿಗೆ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಯಿತು.

ತಕ್ಷಣವೇ  ರೆಫರಿಗಳು ಮಧ್ಯೆಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಅಲ್ಲದೆ ಟೀಮ್ ಇಂಡಿಯಾ ಮ್ಯಾನೇಜರ್ ಸ್ಟಿಮ್ಯಾಕ್‌ ಅವರಿಗೆ ರೆಫರಿ ರೆಡ್ ಕಾರ್ಡ್ ನೀಡಿದರೆ, ಪಾಕಿಸ್ತಾನದ ಮ್ಯಾನೇಜರ್ ಶಹಜಾದ್ ಅನ್ವರ್‌ಗೆ ಹಳದಿ ಕಾರ್ಡ್ ನೀಡಿದರು. ಇದಾಗ್ಯೂ ಭಾರತ ತಂಡವು ಪಂದ್ಯವನ್ನು 4-0 ಅಂತರದಿಂದ ಗೆದ್ದುಕೊಂಡಿದೆ.

Published On - 9:17 pm, Wed, 21 June 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ