AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲಿಯಮ್ಸನ್​ಗೆ ಹೆಣ್ಣು ಮಗು, ಇನ್ಸ್​ಸ್ಟಾಗ್ರಾಮ್​ನಲ್ಲಿ ಸಂತಸ ಹಂಚಿಕೊಂಡ ಕಿವೀಸ್ ನಾಯಕ

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬಹಳ ಕುತೂಹಲದೊಂದಿಗೆ ನಿರೀಕ್ಷಿಸುತ್ತಿದ್ದ ದಿನ ಬಂದು ಬಿಟ್ಟಿದೆ, ಅವರ ಪತ್ನಿ ಸಾರಾ ಹೆಣ್ಣುಮಗೊವೊಂದಕ್ಕೆ ಜನ್ಮ ನೀಡಿದ್ದಾರೆ.

ವಿಲಿಯಮ್ಸನ್​ಗೆ ಹೆಣ್ಣು ಮಗು, ಇನ್ಸ್​ಸ್ಟಾಗ್ರಾಮ್​ನಲ್ಲಿ ಸಂತಸ ಹಂಚಿಕೊಂಡ ಕಿವೀಸ್ ನಾಯಕ
ಕೇನ್ ವಿಲಿಯಮ್ಸನ್ ಮಗು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Dec 16, 2020 | 10:51 PM

Share

ನ್ಯೂಜಿಲೆಂಡ್ ಕ್ರಿಕೆಟ್ ಟೀಮಿನ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅವರ ಪತ್ನಿ ಸಾರಾ ವಿಲಿಯಮ್ಸನ್ ಅವರ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೌದು, ಸಾರಾ ಬುಧವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಶಿಶುವನ್ನು ತಮ್ಮ ಕೈಗಳಲ್ಲಿ ಎತ್ತಿಕೊಂಡಿರುವ ಚಿತ್ರವನ್ನು ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡುವ ಮೂಲಕ ವಿಲಿಯಮ್ಸನ್ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

‘‘ನಮ್ಮ ಕುಟುಂಬದಲ್ಲಿ ಒಂದು ಹೊಸ ಹೆಣ್ಣುಮಗುವನ್ನು ಸ್ವಾಗತಿಸಿರುವ ನಾವು ಆನಂದ ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದೇವೆ,’’ ಎಂಬ ಶೀರ್ಷಿಕೆಯನ್ನು ವಿಲಿಯಮ್ಸನ್ ತಮ್ಮ ಪೋಸ್ಟ್​ಗೆ ನೀಡಿದ್ದಾರೆ.

ಪತ್ನಿ ಸಾರಾಳೊಂದಿಗೆ ಕೇನ್ ವಿಲಿಯಮ್ಸನ್

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯಂತೆ ಹೆರಿಗೆ ಸಮಯದಲ್ಲಿ ಪತ್ನಿಯೊಂದಿಗೆ ಇರಬಯಸಿ, ವಿಲಿಯಮ್ಸನ್ ಸಹ ಪಿತೃತ್ವದ ರಜೆ ಕೋರಿದ್ದರು. ಈ ಕಾರಣ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿದ ಟಾಮ್ ಲಾಥಮ್ ತಮ್ಮ ತಂಡಕ್ಕೆ ಸುಲಭ ಜಯ ದೊರಕಿಸಿಕೊಟ್ಟರು.

Published On - 10:18 pm, Wed, 16 December 20

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ