AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲಿಯಮ್ಸನ್​ಗೆ ಹೆಣ್ಣು ಮಗು, ಇನ್ಸ್​ಸ್ಟಾಗ್ರಾಮ್​ನಲ್ಲಿ ಸಂತಸ ಹಂಚಿಕೊಂಡ ಕಿವೀಸ್ ನಾಯಕ

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬಹಳ ಕುತೂಹಲದೊಂದಿಗೆ ನಿರೀಕ್ಷಿಸುತ್ತಿದ್ದ ದಿನ ಬಂದು ಬಿಟ್ಟಿದೆ, ಅವರ ಪತ್ನಿ ಸಾರಾ ಹೆಣ್ಣುಮಗೊವೊಂದಕ್ಕೆ ಜನ್ಮ ನೀಡಿದ್ದಾರೆ.

ವಿಲಿಯಮ್ಸನ್​ಗೆ ಹೆಣ್ಣು ಮಗು, ಇನ್ಸ್​ಸ್ಟಾಗ್ರಾಮ್​ನಲ್ಲಿ ಸಂತಸ ಹಂಚಿಕೊಂಡ ಕಿವೀಸ್ ನಾಯಕ
ಕೇನ್ ವಿಲಿಯಮ್ಸನ್ ಮಗು
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 16, 2020 | 10:51 PM

Share

ನ್ಯೂಜಿಲೆಂಡ್ ಕ್ರಿಕೆಟ್ ಟೀಮಿನ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅವರ ಪತ್ನಿ ಸಾರಾ ವಿಲಿಯಮ್ಸನ್ ಅವರ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೌದು, ಸಾರಾ ಬುಧವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಶಿಶುವನ್ನು ತಮ್ಮ ಕೈಗಳಲ್ಲಿ ಎತ್ತಿಕೊಂಡಿರುವ ಚಿತ್ರವನ್ನು ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡುವ ಮೂಲಕ ವಿಲಿಯಮ್ಸನ್ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

‘‘ನಮ್ಮ ಕುಟುಂಬದಲ್ಲಿ ಒಂದು ಹೊಸ ಹೆಣ್ಣುಮಗುವನ್ನು ಸ್ವಾಗತಿಸಿರುವ ನಾವು ಆನಂದ ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದೇವೆ,’’ ಎಂಬ ಶೀರ್ಷಿಕೆಯನ್ನು ವಿಲಿಯಮ್ಸನ್ ತಮ್ಮ ಪೋಸ್ಟ್​ಗೆ ನೀಡಿದ್ದಾರೆ.

ಪತ್ನಿ ಸಾರಾಳೊಂದಿಗೆ ಕೇನ್ ವಿಲಿಯಮ್ಸನ್

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯಂತೆ ಹೆರಿಗೆ ಸಮಯದಲ್ಲಿ ಪತ್ನಿಯೊಂದಿಗೆ ಇರಬಯಸಿ, ವಿಲಿಯಮ್ಸನ್ ಸಹ ಪಿತೃತ್ವದ ರಜೆ ಕೋರಿದ್ದರು. ಈ ಕಾರಣ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿದ ಟಾಮ್ ಲಾಥಮ್ ತಮ್ಮ ತಂಡಕ್ಕೆ ಸುಲಭ ಜಯ ದೊರಕಿಸಿಕೊಟ್ಟರು.

Published On - 10:18 pm, Wed, 16 December 20

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ