AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಾದ ಸ್ಟಾರ್​ ಆಟಗಾರ: ಐಪಿಎಲ್​ ಹರಾಜಿನಿಂದ ಅರ್ಧಕ್ಕೆ ಹೊರನಡೆದ ಇಂಗ್ಲೆಂಡ್​ ವೇಗಿ

Seamer Mark Wood: ಸೀಮರ್​ ಇತ್ತೀಚಗಷ್ಟೇ ತಂದೆ ಆಗಿದ್ದರು. ಹೀಗಾಗಿ, ಕುಟುಂಬದ ಜತೆ ಮತ್ತಷ್ಟು ಸಮಯ ಕಳೆಯಲು ಅವರು ಬಯಸಿದ್ದಾರೆ.

ಅಪ್ಪನಾದ ಸ್ಟಾರ್​ ಆಟಗಾರ: ಐಪಿಎಲ್​ ಹರಾಜಿನಿಂದ ಅರ್ಧಕ್ಕೆ ಹೊರನಡೆದ ಇಂಗ್ಲೆಂಡ್​ ವೇಗಿ
ಸೀಮರ್​ ಮಾರ್ಕ್​ ವುಡ್
ರಾಜೇಶ್ ದುಗ್ಗುಮನೆ
|

Updated on:Feb 18, 2021 | 6:37 PM

Share

ಐಪಿಎಲ್​ 2021 ಹರಾಜು ಪ್ರಕ್ರಿಯೆ ಆರಂಭವಾಗಿದೆ. ಕ್ರಿಸ್​ ಮಾರಿಸ್​ ಅತ್ಯಂತ ಹೆಚ್ಚು ಬೆಲೆಗೆ ಅಂದರೆ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮಧ್ಯೆ, ಇಂಗ್ಲೆಂಡ್​ ವೇಗಿ ಸೀಮರ್​ ಮಾರ್ಕ್​ ವುಡ್​ ಹರಾಜು ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದಾರೆ. 31 ವರ್ಷದ ಸೀಮರ್​ ಮಾರ್ಕ್​ ಮೂಲ ಬೆಲೆ 2 ಕೋಟಿ ರೂಪಾಯಿ ಆಗಿತ್ತು. ಆದರೆ, ಕೊನೆಯ ಘಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿರುವ ಸೀಮರ್​, ಹರಾಜಿನಿಂದ ದೂರ ಉಳಿದಿದ್ದಾರೆ. ಸೀಮರ್​ ಇತ್ತೀಚಗಷ್ಟೇ ತಂದೆ ಆಗಿದ್ದರು. ಹೀಗಾಗಿ, ಕುಟುಂಬದ ಜತೆ ಮತ್ತಷ್ಟು ಸಮಯ ಕಳೆಯಲು ಅವರು ಬಯಸಿದ್ದಾರೆ. ಈ ಕಾರಣಕ್ಕೆ ಐಪಿಎಲ್​ ಆಡದಿರಲು ಅವರು ನಿರ್ಧರಿಸಿದ್ದಾರೆ.

ಸೀಮರ್​ ಭಾರತದ ವಿರುದ್ಧದ ಸರಣಿಗೆ ಇಂಗ್ಲೆಂಡ್​ ಪರ ಸೀಮರ್​ ಆಡಬೇಕಿತ್ತು. ಆದರೆ, ಅವರು ಟೆಸ್ಟ್​ ಸರಣಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಕೊನೆಯ ಎರಡು ಟೆಸ್ಟ್​​ನಲ್ಲಿ ವುಡ್​ ಇಂಗ್ಲೆಂಡ್​ ತಂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ದಾಖಲೆ ಬರೆದ ಕ್ರಿಸ್​ ಮಾರಿಸ್​..

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

ಕ್ರಿಸ್​ ಮೊರಿಸ್​ಗೆ ಮುಂಬೈ ಇಂಡಿಯನ್ಸ್​​ ಮೊದಲ ಬಾರಿಗೆ ಬಿಡ್​ ಮಾಡಿತ್ತು. ಆರ್​ಸಿಬಿ ಕೂಡ ಇಂದಿನ ಪಂದ್ಯದಲ್ಲಿ ಬಿಡ್​ ಮಾಡಿತ್ತು. ಆರ್​ಸಿಬಿ ಕ್ರಿಸ್​ ಮಾರಿಸ್​ಗೆ 12.75 ಕೋಟಿ ರೂಪಾಯಿವರೆಗೆ ಬಿಡ್​ ಮಾಡಿತ್ತು. ಮೊರಿಸ್​ ಅವರನ್ನು ಪಡೆಯಲು ಮುಂಬೈ ಇಂಡಿಯನ್ಸ್​ ಹಾಗೂ ರಾಜಸ್ಥಾನ ರಾಯಲ್ಸ್​ ನಡುವೆ ಭಾರೀ ಪೈಪೋಟಿ ನಡೆದಿತ್ತು. ಈ ಮಧ್ಯೆ ಪಂಜಾಬ್​ ಕೂಡ ಹರಾಜಿನಲ್ಲಿ ಸೇರಿಕೊಂಡು 16 ಕೋಟಿ ರೂಪಾಯಿ ಕೂಗಿತ್ತು. ಕೊನೆಗೆ ರಾಜಸ್ಥಾನ್​ ರಾಯಲ್ಸ್​ 16.25 ಕೋಟಿ ರೂಪಾಯಿಗೆ ಖರೀದಿಸಿತು.

ಇದನ್ನೂ ಓದಿ: IPL 2021 Auction: ಐಪಿಎಲ್ 2021 ಹರಾಜಿನಲ್ಲಿದ್ದಾರೆ 14 ಕನ್ನಡಿಗರು, ಕರ್ನಾಟಕದವರಿಗೆ ಆದ್ಯತೆ ಕೊಡುತ್ತಾ RCB

Published On - 5:21 pm, Thu, 18 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ