Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಾದ ಸ್ಟಾರ್​ ಆಟಗಾರ: ಐಪಿಎಲ್​ ಹರಾಜಿನಿಂದ ಅರ್ಧಕ್ಕೆ ಹೊರನಡೆದ ಇಂಗ್ಲೆಂಡ್​ ವೇಗಿ

Seamer Mark Wood: ಸೀಮರ್​ ಇತ್ತೀಚಗಷ್ಟೇ ತಂದೆ ಆಗಿದ್ದರು. ಹೀಗಾಗಿ, ಕುಟುಂಬದ ಜತೆ ಮತ್ತಷ್ಟು ಸಮಯ ಕಳೆಯಲು ಅವರು ಬಯಸಿದ್ದಾರೆ.

ಅಪ್ಪನಾದ ಸ್ಟಾರ್​ ಆಟಗಾರ: ಐಪಿಎಲ್​ ಹರಾಜಿನಿಂದ ಅರ್ಧಕ್ಕೆ ಹೊರನಡೆದ ಇಂಗ್ಲೆಂಡ್​ ವೇಗಿ
ಸೀಮರ್​ ಮಾರ್ಕ್​ ವುಡ್
Follow us
ರಾಜೇಶ್ ದುಗ್ಗುಮನೆ
|

Updated on:Feb 18, 2021 | 6:37 PM

ಐಪಿಎಲ್​ 2021 ಹರಾಜು ಪ್ರಕ್ರಿಯೆ ಆರಂಭವಾಗಿದೆ. ಕ್ರಿಸ್​ ಮಾರಿಸ್​ ಅತ್ಯಂತ ಹೆಚ್ಚು ಬೆಲೆಗೆ ಅಂದರೆ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮಧ್ಯೆ, ಇಂಗ್ಲೆಂಡ್​ ವೇಗಿ ಸೀಮರ್​ ಮಾರ್ಕ್​ ವುಡ್​ ಹರಾಜು ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದಾರೆ. 31 ವರ್ಷದ ಸೀಮರ್​ ಮಾರ್ಕ್​ ಮೂಲ ಬೆಲೆ 2 ಕೋಟಿ ರೂಪಾಯಿ ಆಗಿತ್ತು. ಆದರೆ, ಕೊನೆಯ ಘಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿರುವ ಸೀಮರ್​, ಹರಾಜಿನಿಂದ ದೂರ ಉಳಿದಿದ್ದಾರೆ. ಸೀಮರ್​ ಇತ್ತೀಚಗಷ್ಟೇ ತಂದೆ ಆಗಿದ್ದರು. ಹೀಗಾಗಿ, ಕುಟುಂಬದ ಜತೆ ಮತ್ತಷ್ಟು ಸಮಯ ಕಳೆಯಲು ಅವರು ಬಯಸಿದ್ದಾರೆ. ಈ ಕಾರಣಕ್ಕೆ ಐಪಿಎಲ್​ ಆಡದಿರಲು ಅವರು ನಿರ್ಧರಿಸಿದ್ದಾರೆ.

ಸೀಮರ್​ ಭಾರತದ ವಿರುದ್ಧದ ಸರಣಿಗೆ ಇಂಗ್ಲೆಂಡ್​ ಪರ ಸೀಮರ್​ ಆಡಬೇಕಿತ್ತು. ಆದರೆ, ಅವರು ಟೆಸ್ಟ್​ ಸರಣಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಕೊನೆಯ ಎರಡು ಟೆಸ್ಟ್​​ನಲ್ಲಿ ವುಡ್​ ಇಂಗ್ಲೆಂಡ್​ ತಂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ದಾಖಲೆ ಬರೆದ ಕ್ರಿಸ್​ ಮಾರಿಸ್​..

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

ಕ್ರಿಸ್​ ಮೊರಿಸ್​ಗೆ ಮುಂಬೈ ಇಂಡಿಯನ್ಸ್​​ ಮೊದಲ ಬಾರಿಗೆ ಬಿಡ್​ ಮಾಡಿತ್ತು. ಆರ್​ಸಿಬಿ ಕೂಡ ಇಂದಿನ ಪಂದ್ಯದಲ್ಲಿ ಬಿಡ್​ ಮಾಡಿತ್ತು. ಆರ್​ಸಿಬಿ ಕ್ರಿಸ್​ ಮಾರಿಸ್​ಗೆ 12.75 ಕೋಟಿ ರೂಪಾಯಿವರೆಗೆ ಬಿಡ್​ ಮಾಡಿತ್ತು. ಮೊರಿಸ್​ ಅವರನ್ನು ಪಡೆಯಲು ಮುಂಬೈ ಇಂಡಿಯನ್ಸ್​ ಹಾಗೂ ರಾಜಸ್ಥಾನ ರಾಯಲ್ಸ್​ ನಡುವೆ ಭಾರೀ ಪೈಪೋಟಿ ನಡೆದಿತ್ತು. ಈ ಮಧ್ಯೆ ಪಂಜಾಬ್​ ಕೂಡ ಹರಾಜಿನಲ್ಲಿ ಸೇರಿಕೊಂಡು 16 ಕೋಟಿ ರೂಪಾಯಿ ಕೂಗಿತ್ತು. ಕೊನೆಗೆ ರಾಜಸ್ಥಾನ್​ ರಾಯಲ್ಸ್​ 16.25 ಕೋಟಿ ರೂಪಾಯಿಗೆ ಖರೀದಿಸಿತು.

ಇದನ್ನೂ ಓದಿ: IPL 2021 Auction: ಐಪಿಎಲ್ 2021 ಹರಾಜಿನಲ್ಲಿದ್ದಾರೆ 14 ಕನ್ನಡಿಗರು, ಕರ್ನಾಟಕದವರಿಗೆ ಆದ್ಯತೆ ಕೊಡುತ್ತಾ RCB

Published On - 5:21 pm, Thu, 18 February 21

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು