AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಕೈತಪ್ಪಿ ಹೋಗಿದ್ದ ಪಂದ್ಯಕ್ಕೆ ಟರ್ನ್​ ನೀಡಿದ್ದು ಶಹಬಾಜ್​ ಮಾಡಿದ ಆ ಒಂದು ಓವರ್​!

17ನೇ ಓವರ್​ನಲ್ಲಿ ಶಹಬಾಜ್​ ಅಹ್ಮದ್​ ಅಟ್ಯಾಕ್​ಗೆ ಇಳಿದಿದ್ದರು. ಮೊದಲ ಬಾಲ್​ನಲ್ಲೇ ಜಾನಿ ಬೇರ್​ಸ್ಟೋ ಔಟ್​ ಆದರೆ, ನಂತರದ ಬಾಲ್​ನಲ್ಲಿ ಮನೀಶ್ ಪಾಂಡೆಯನ್ನು ಪೆವಿಲಿಯನ್​ಗೆ ಕಳುಹಿಸಿದರು.

SRH vs RCB: ಕೈತಪ್ಪಿ ಹೋಗಿದ್ದ ಪಂದ್ಯಕ್ಕೆ ಟರ್ನ್​ ನೀಡಿದ್ದು ಶಹಬಾಜ್​ ಮಾಡಿದ ಆ ಒಂದು ಓವರ್​!
ಶಹಬಾಜ್​ ಅಹ್ಮದ್​
ರಾಜೇಶ್ ದುಗ್ಗುಮನೆ
|

Updated on:Apr 14, 2021 | 11:40 PM

Share

ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಸುಲಭ ಮ್ಯಾಚ್​ ಅನ್ನು ಸೋಲುವ ಮೂಲಕ ಹೈದರಾಬಾದ್​ ಆರನೇ ಸ್ಥಾನಕ್ಕೆ ಕುಸಿದಿದೆ. ಕೈ ತಪ್ಪಿ ಹೋಗಿದ್ದ ಪಂದ್ಯಕ್ಕೆ ಟರ್ನ್ ನೀಡಿದ್ದು ಶಹಬಾಜ್​ ಅಹ್ಮದ್​ ಮಾಡಿದ ಆ ಒಂದು ಓವರ್. ಟಾಸ್​ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದಿದ್ದ ಆರ್​ಸಿಬಿ ಕಳಪೆ ಆರಂಭ ಕಂಡಿತ್ತು. ದೇವದತ್​ ಪಡಿಕ್ಕಲ್​ (11), ಶಹಬಾಜ್​ ಅಹ್ಮದ್ (14)​, ವಿರಾಟ್​ ಕೊಹ್ಲಿ (33) ರನ್​ಗಳಿಗೆ ಔಟ್​ ಆದರು. ನಂತರ ಬಂದ ಮ್ಯಾಕ್ಸ್​ವೆಲ್​ ಹೊರತುಪಡಿಸಿ ಯಾರೂ ಅಷ್ಟು ಉತ್ತಮವಾಗಿ ಬ್ಯಾಟ್ ಬೀಸಿಲ್ಲ. ಮ್ಯಾಕ್ಸ್​ವೆಲ್​ 41 ಬಾಲ್​​ಗಳಿಗೆ 59 ರನ್​ ಸಿಡಿಸಿ ತಂಡದ ಮೊತ್ತವನ್ನು 149ರನ್​ ಗಡಿ ಮುಟ್ಟಿಸಿದರು.

ಸಾಮಾನ್ಯ  ಗುರಿ ಬೆನ್ನು ಹತ್ತಿದ ಹೈದರಾಬಾದ್ ತಂಡಕ್ಕೆ ಆರಂಭಿಕ ಆಘಾತ ಉಂಟಾಗಿತ್ತು. ವೃದ್ಧಿಮಾನ್​ ಸಹಾ ಕೇವಲ ಒಂದು ರನ್​ಗೆ ಔಟ್​ ಆದರು. ನಂತರ ಜತೆಯಾದ ಡೇವಿಡ್​ ವಾರ್ನರ್​ ಹಾಗೂ ಮನೀಶ್​ ಪಾಂಡೆ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. 96 ರನ್​ಗಳಿಸಿ ಆಡುವಾಗ ವಾರ್ನರ್​ ಔಟ್​ ಆದರು. ನಂತರ ಆಗಿದ್ದು ಮಾತ್ರ ಮ್ಯಾಜಿಕ್​.

17ನೇ ಓವರ್​ನಲ್ಲಿ ಶಹಬಾಜ್​ ಅಹ್ಮದ್​ ಅಟ್ಯಾಕ್​ಗೆ ಇಳಿದರು. ಮೊದಲ ಬಾಲ್​ನಲ್ಲೇ ಜಾನಿ ಬೇರ್​ಸ್ಟೋ ಔಟ್​ ಆದರೆ, ನಂತರದ ಬಾಲ್​ನಲ್ಲಿ ಮನೀಶ್ ಪಾಂಡೆಯನ್ನು ಪೆವಿಲಿಯನ್​ಗೆ ಕಳುಹಿಸಿದರು. ಇದೇ ಓವರ್​ನ ಕೊನೆಯ ಬಾಲ್​ಗೆ ಅಬ್ದುಲ್​ ಸಮಾದ್ ಔಟ್​ ಆದರು. ಒಂದೇ ಓವರ್​ನಲ್ಲಿ ಮೂರು ವಿಕೆಟ್​ ಕೀಳುವ ಮೂಲಕ ಶಹಬಾಜ್​ ತಂಡದ ಗತಿಯನ್ನೇ ಬದಲಿಸಿ ಬಿಟ್ಟರು. ಅಂತಿಮವಾಗಿ ಆರ್​ಸಿಬಿ 6 ರನ್​ಗಳ ಗೆಲುವು ಕಂಡಿತು. ಆರ್​ಸಿಬಿ ಪರ ಹರ್ಷಲ್​ ಪಟೇಲ್​ 2, ಮೊಹ್ಮದ್​ ಸಿರಾಜ್​ 2 ಹಾಗೂ ಜೇಮಿಸನ್​ ಒಂದು ವಿಕೆಟ್​ ಕಿತ್ತಿದ್ದಾರೆ.

ಇದನ್ನೂ ಓದಿ: Virat Kohli: ಔಟ್​ ಆಗಿದ್ದಕ್ಕೆ ಕೊಹ್ಲಿ ರೌದ್ರರೂಪ ; ಪೆವಿಲಿಯನ್​ ಚೇರ್​ಗಳು ಚೆಲ್ಲಾಪಿಲ್ಲಿ, ವಿಡಿಯೋ ವೈರಲ್​

Published On - 11:34 pm, Wed, 14 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್