AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ಕಾಯುವಿಕೆಗೆ ಅಂತ್ಯ: ಚಿನ್ನದ ಪದಕಕ್ಕೆ ಮುತ್ತಿಟ್ಟ ಶರ್ಮಿಳಾ ಧಂಕರ್

Commonwealth Games 2026: ಗ್ಲ್ಯಾಸ್ಗೋ ಕಾಮನ್​ವೆಲ್ತ್​ ಕ್ರೀಡಾಕೂಟದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಮತ್ಯಾರೂ ಅಲ್ಲ, ಭಾರತದ ಪ್ಯಾರಾ ಅಥ್ಲೀಟ್ ಶರ್ಮಿಳಾ ಧಂಕರ್. ಸ್ಕಾಟ್‌ಲ್ಯಾಂಡ್‌ನಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಶಾಟ್‌ಪುಟ್ ಎಫ್‌57 ವಿಭಾಗದಲ್ಲಿ ಅಪ್ರತಿಮ ಪ್ರದರ್ಶನ ನೀಡಿದ 40 ವರ್ಷದ ಶರ್ಮಿಳಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

20 ವರ್ಷಗಳ ಕಾಯುವಿಕೆಗೆ ಅಂತ್ಯ: ಚಿನ್ನದ ಪದಕಕ್ಕೆ ಮುತ್ತಿಟ್ಟ ಶರ್ಮಿಳಾ ಧಂಕರ್
Sharmila DhankarImage Credit source: CWG
ಝಾಹಿರ್ ಯೂಸುಫ್
|

Updated on:Jul 28, 2026 | 12:57 PM

Share

ಭಾರತದ ಹೆಮ್ಮೆಯ ಪ್ಯಾರಾ ಅಥ್ಲೀಟ್ ಶರ್ಮಿಳಾ ಧಂಕರ್ ಅವರು ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿ ಹೊಸ ಇತಿಹಾಸ ಬರೆದಿದ್ದಾರೆ. ಮಹಿಳೆಯರ ಶಾಟ್‌ಪುಟ್ ಎಫ್‌57 ವಿಭಾಗದಲ್ಲಿ ಅಪ್ರತಿಮ ಪ್ರದರ್ಶನ ನೀಡಿದ 40 ವರ್ಷದ ಶರ್ಮಿಳಾ, ಭಾರತದ ಪರ ಕಾಮನ್‌ವೆಲ್ತ್ ಇತಿಹಾಸದಲ್ಲೇ ಮೊದಲ ಪ್ಯಾರಾ ಅಥ್ಲೆಟಿಕ್ಸ್ ಚಿನ್ನದ ಪದಕ ಗೆದ್ದ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ಸೋಮವಾರ ರಾತ್ರಿ ನಡೆದ ರೋಮಾಂಚಕ ಫೈನಲ್ ಪಂದ್ಯದಲ್ಲಿ ಶರ್ಮಿಳಾ  9.81 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಅಗ್ರಸ್ಥಾನ ಕಾಯ್ದುಕೊಂಡರು. ಈ ಅಗ್ರಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ.

ಡಬಲ್ ಧಮಾಕಾ:

ಇದೇ ಸ್ಪರ್ಧೆಯಲ್ಲಿ ಕನ್ನಡತಿ ಕೆ. ಶಿಲ್ಪಾ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ಅಂದರೆ ಒಂದೆಡೆ ಶರ್ಮಿಳಾ ಧಂಕರ್ ಚಿನ್ನದ ಪದಕವನ್ನು ಗೆದ್ದರೆ, ಮತ್ತೊಂದೆಡೆ ಶಿಲ್ಪಾ 7.26 ಮೀಟರ್ ದೂರ ಎಸೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡರು.

ಪಂದ್ಯದ ನಂತರ ನಡೆದ ತಾಂತ್ರಿಕ ಪರಿಶೀಲನೆಯಲ್ಲಿ ನೈಜೀರಿಯಾದ ಯುಚೇರಿಯಾ ಐಯಾಜಿ ಅವರ ಎಸೆತ ಅಸಿಂಧುಗೊಂಡ ಕಾರಣ, ನಾಲ್ಕನೇ ಸ್ಥಾನದಲ್ಲಿದ್ದ ಶಿಲ್ಪಾ ಅವರಿಗೆ ಕಂಚಿನ ಪದಕ ಒಲಿಯಿತು. ಇದರಿಂದಾಗಿ ಶಾಟ್​ ಪುಟ್​ ಪೋಡಿಯಂನಲ್ಲಿ ಇಬ್ಬರು ಭಾರತೀಯರು ಒಟ್ಟಿಗೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದರು.

20 ವರ್ಷಗಳ ಕಾಯುವಿಕೆಗೆ ಅಂತ್ಯ:

ಕಾಮನ್‌ವೆಲ್ತ್ ಗೇಮ್ಸ್ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತ ಪದಕ ಗೆದ್ದು ಬರೋಬ್ಬರಿ 20 ವರ್ಷಗಳೇ ಕಳೆದಿವೆ. ಕೊನೆಯದಾಗಿ 2006 ರಲ್ಲಿ ರಂಜಿತ್ ಕುಮಾರ್ ಜಯಶೀಲನ್ (ಡಿಸ್ಕಸ್ ಥ್ರೋ) ಕಂಚು ಗೆದ್ದಿದ್ದರು. ಈಗ ಶರ್ಮಿಳಾ ಆ ಬರವನ್ನು ನೀಗಿಸಿರುವುದಲ್ಲದೆ, ನೇರವಾಗಿ ಚಿನ್ನದ ಪದಕಕ್ಕೇ ಮುತ್ತಿಕ್ಕಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಅಂಗವೈಕಲ್ಯ ಮೆಟ್ಟಿ ನಿಂತ ಸಾಧಕಿ!

ಎಫ್‌57 (F57) ವಿಭಾಗವು ಕಾಲುಗಳ ದೌರ್ಬಲ್ಯ ಅಥವಾ ಮಾಂಸಖಂಡಗಳ ಶಕ್ತಿ ಕಡಿಮೆ ಇರುವ ಕ್ರೀಡಾಪಟುಗಳಿಗಾಗಿ ಮೀಸಲಾಗಿದೆ. ತಮಗೆ ಕೇವಲ ಎರಡು ವರ್ಷ ವಯಸ್ಸಾಗಿದ್ದಾಗ ಪೋಲಿಯೋ ಪೀಡಿತರಾಗಿ ಎಡಗಾಲಿನ ಸ್ವಾಧೀನ ಕಳೆದುಕೊಂಡ ಶರ್ಮಿಳಾ ಅವರ ಕ್ರೀಡಾ ಪಯಣ ಸುಲಭದ್ದಾಗಿರಲಿಲ್ಲ. ಆರ್ಥಿಕ ಸಂಕಷ್ಟ ಮತ್ತು ಕಠಿಣ ಸವಾಲುಗಳ ನಡುವೆಯೂ ಛಲ ಬಿಡದ ಅವರು, ಜಾಗತಿಕ ವೇದಿಕೆಯಲ್ಲಿ ಇಂದು ಭಾರತದ ಧ್ವಜವನ್ನು ಎತ್ತಿ ಹಿಡಿದಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಕಾಡಿದ ‘ಕ್ಯಾಚ್’ ಕಂಟಕ!

8ನೇ ಸ್ಥಾನದಲ್ಲಿ ಭಾರತ:

ಶರ್ಮಿಳಾ ಅವರ ಈ ಐತಿಹಾಸಿಕ ಚಿನ್ನದ ಪದಕದ ನೆರವಿನಿಂದ ಭಾರತವು ಗ್ಲ್ಯಾಸ್ಗೋ ಕ್ರೀಡಾಕೂಟದ 5ನೇ ದಿನದ ಮುಕ್ತಾಯಕ್ಕೆ ಒಟ್ಟು 10 ಪದಕಗಳನ್ನು (2 ಚಿನ್ನ, 5 ಬೆಳ್ಳಿ, 3 ಕಂಚು) ತನ್ನದಾಗಿಸಿಕೊಂಡು, ಒಟ್ಟಾರೆ ಪದಕಗಳ ಪಟ್ಟಿಯಲ್ಲಿ 8ನೇ ಸ್ಥಾನವನ್ನು ಅಲಂಕರಿಸಿದೆ.

ಭಾರತ ಗೆದ್ದಿರುವ ಪದಕಗಳ ಪಟ್ಟಿ ಇಲ್ಲಿದೆ (5ನೇ ದಿನದವರೆಗೆ):

ಕ್ರಮ ಸಂಖ್ಯೆ ಕ್ರೀಡಾಪಟುವಿನ ಹೆಸರು ಕ್ರೀಡೆ / ವಿಭಾಗ ಪದಕ
1 ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವೇಟ್‌ಲಿಫ್ಟಿಂಗ್ 🥇 ಚಿನ್ನ
2 ಶರ್ಮಿಳಾ ಧಂಕರ್ ಮಹಿಳೆಯರ ಶಾಟ್‌ಪುಟ್ F57 ಪ್ಯಾರಾ ಅಥ್ಲೆಟಿಕ್ಸ್ 🥇 ಚಿನ್ನ
3 ರಿಷಿಕಾಂತ ಸಿಂಗ್  ಪುರುಷರ 60 ಕೆಜಿ ವೇಟ್‌ಲಿಫ್ಟಿಂಗ್ 🥈 ಬೆಳ್ಳಿ
4 ಮುತ್ತುಪಾಂಡಿ ರಾಜ ಪುರುಷರ 65 ಕೆಜಿ ವೇಟ್‌ಲಿಫ್ಟಿಂಗ್ 🥈 ಬೆಳ್ಳಿ
5 ಜ್ಞಾನೇಶ್ವರಿ ಯಾದವ್ ಮಹಿಳೆಯರ 53 ಕೆಜಿ ವೇಟ್‌ಲಿಫ್ಟಿಂಗ್ 🥈 ಬೆಳ್ಳಿ
6 ವಲ್ಲೂರಿ ಅಜಯ್ ಬಾಬು ಪುರುಷರ 79 ಕೆಜಿ ವೇಟ್‌ಲಿಫ್ಟಿಂಗ್ 🥈 ಬೆಳ್ಳಿ
7 ಸರ್ವೇಶ್ ಕುಶಾರೆ ಪುರುಷರ ಹೈಜಂಪ್ (ಅಥ್ಲೆಟಿಕ್ಸ್) 🥈 ಬೆಳ್ಳಿ
8 ಝಂಡು ಕುಮಾರ್ ಪುರುಷರ ಹೆವಿವೈಟ್ ಪ್ಯಾರಾ ಪವರ್‌ಲಿಫ್ಟಿಂಗ್ 🥉 ಕಂಚು
9 ಬಿಂದ್ಯಾರಾಣಿ ದೇವಿ ಮಹಿಳೆಯರ 58 ಕೆಜಿ ವೇಟ್‌ಲಿಫ್ಟಿಂಗ್ 🥉 ಕಂಚು
10 ಶಿಲ್ಪಾ ಕೆ. ಶೈಲಾ ಮಹಿಳೆಯರ ಶಾಟ್‌ಪುಟ್ F57 ಪ್ಯಾರಾ ಅಥ್ಲೆಟಿಕ್ಸ್ 🥉 ಕಂಚು

Published On - 12:53 pm, Tue, 28 July 26

Follow Us
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ