AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಈ ಸ್ಟಾರ್ ಬೌಲರ್​ಗೆ ಎಂದ ಅಖ್ತರ್

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ನೀವು ಬೌಲಿಂಗ್ ಮಾಡಲು ಅತ್ಯಂತ ಕಷ್ಟ ಪಟ್ಟ ಬ್ಯಾಟ್ಸ್​ಮನ್ ಯಾರು ಎಂದು ಕೇಳಿದ್ದರು. ಹೆಚ್ಚಿನವರು ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ ಅಥವಾ ರಿಕಿ ಪಾಂಟಿಂಗ್ ಹೆಸರನ್ನು ಗ್ರಹಿಸಿದ್ದರು. ಆದರೆ,

ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಈ ಸ್ಟಾರ್ ಬೌಲರ್​ಗೆ ಎಂದ ಅಖ್ತರ್
Shoaib Akhtar
TV9 Web
| Updated By: Vinay Bhat|

Updated on: Jul 13, 2021 | 11:58 AM

Share

ಪಾಕಿಸ್ತಾನ (Pakistan) ಕ್ರಿಕೆಟ್‌ ಕಂಡ ಶ್ರೇಷ್ಠ ವೇಗಿಗಳಲ್ಲಿ ಶೋಯೆಬ್‌ ಅಖ್ತರ್ (Shoaib Akhtar) ಪ್ರಮುಖರು. 90ರ ದಶಕದಲ್ಲಿ ಬ್ಯಾಟ್ಸ್​ಮನ್​ಗಳು ಇವರ ಬೌಲಿಂಗ್ ಕಂಡರೆ ಒಂದು ಕ್ಷಣ ಯೋಚಿಸುತ್ತಿದ್ದರು. ತಮ್ಮ ವೇಗದ ಬೌಲಿಂಗ್‌ನಿಂದ ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳನ್ನು ಕೆಡವಬಲ್ಲ ಸಾಮರ್ಥ್ಯ ಅವರಲ್ಲಿತ್ತು. ಲೈನ್‌ ಅಂಡ್‌ ಲೆನ್ತ್‌ ಮೂಲಕ ಅಖ್ತರ್ ಬೌನ್ಸರ್‌ ಹಾಕಿದರೆ ಬ್ಯಾಟ್ಸ್​ಮನ್ ಭಯ ಪಡುತ್ತಿದ್ದಿದ್ದು ಸುಳ್ಳಲ್ಲ. ಇಂತಹ ಅಪಾಯಕಾರಿ ಬೌಲರ್​ಗೂ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಓರ್ವ ಬೌಲರ್​ಗಂತೆ.

ಹೌದು, ಈ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡಿರುವ ಶೋಯೆಬ್, ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಶ್ರೀಲಂಕಾ ತಂಡ ಲೆಜೆಂಡ್ ಸ್ಪಿನ್ನರ್ ಮುತ್ತಯ್ಯ ಮುರಳೀಧರ್ ಅವರಿಗೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ನೀವು ಬೌಲಿಂಗ್ ಮಾಡಲು ಅತ್ಯಂತ ಕಷ್ಟ ಪಟ್ಟ ಬ್ಯಾಟ್ಸ್​ಮನ್ ಯಾರು ಎಂದು ಕೇಳಿದ್ದರು. ಹೆಚ್ಚಿನವರು ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ ಅಥವಾ ರಿಕಿ ಪಾಂಟಿಂಗ್ ಹೆಸರನ್ನು ಗ್ರಹಿಸಿದ್ದರು. ಆದರೆ, ಈ ಪ್ರಶ್ನೆಗೆ ಅಖ್ತರ್ ನೀಡಿದ ಉತ್ತರ ಅಭಿಮಾನಿಗಳಲ್ಲಿ ಅಚ್ಚರಿಗೆ ಕಾರಣವಾಯಿತು.

“ನಾನು ಬೌಲಿಂಗ್ ಮಾಡಿದ ಕಷ್ಟಪಟ್ಟ ಬ್ಯಾಟ್ಸ್​ಮನ್​ ಎಂದರೆ ಅದು ಮುತ್ತಯ್ಯ ಮುರಳೀಧರನ್. ನಿಜ ನಾನು ತಮಾಷೆ ಮಾಡುತ್ತಿಲ್ಲ. ಮುತರಳೀಧರನ್‌ ಅವರನ್ನು ಔಟ್ ಮಾಡಲು ಹಲವು ಬೌನ್ಸರ್‌ಗಳನ್ನು ಹಾಕಿದೆ. ಆದರೆ ಆ ವೇಳೆ ಅವರು ದಯವಿಟ್ಟು ಬೌನ್ಸರ್‌ಗಳನ್ನು ಹಾಕಬೇಡಿ, ನನಗೆ ಚೆಂಡು ಬಿದ್ದರೆ ನಾನು ಖಂಡಿತಾ ಸಾಯುತ್ತೇನೆ. ನನ್ನ ಹಾದಿಯಲ್ಲಿ ಬೌನ್ಸರ್‌ಗಳನ್ನು ಹಾಕಬೇಡಿ. ಪಿಚ್ ಬಾಲ್ ಹಾಕಿದರೆ ನಾನೇ ನಿನಗೆ ಕ್ಯಾಚ್ ನೀಡುತ್ತೇನೆಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

ಶೋಯೆಬ್‌ ಅಖ್ತರ್‌ ತಮ್ಮ ವೃತ್ತಿ ಜೀವನದಲ್ಲಿ 46 ಟೆಸ್ಟ್ ಪಂದ್ಯಗಳಾಡಿದ್ದು, 178 ವಿಕೆಟ್‌ಗಳನ್ನು ಪಡೆದಿದ್ದಾರೆ ಹಾಗೂ 163 ಏಕದಿನ ಪಂದ್ಯಗಳಿಂದ 247 ವಿಕೆಟ್‌ಗಳನ್ನು ಕಿತ್ತಿದ್ದಾರೆ. 15 ಟಿ-20 ಪಂದ್ಯಗಳಿಂದ 19 ವಿಕೆಟ್‌ಗಳನ್ನು ಸೇರಿಸಿಕೊಂಡಿದ್ದಾರೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ