AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್​ ಅಯ್ಯರ್​ಗೆ ಏಪ್ರಿಲ್​ನಲ್ಲಿ ಶಸ್ತ್ರಚಿಕಿತ್ಸೆ, 5 ತಿಂಗಳು ಅವಧಿಗೆ ಕ್ರಿಕೆಟ್​ನಿಂದ ದೂರ!

ಮುಂದಿನ ತಿಂಗಳು ಆರಂಭವಾಗಲಿರುವ ಐಪಿಎಲ್​ನಲ್ಲಿ ಅಯ್ಯರ್ ಭಾಗವಹಿಸುವುದಿಲ್ಲ. ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊಸ ನಾಯಕ ಹೆಸರನ್ನು ಘೋಷಿಸಬೇಕಿದೆ. ಅವರು ಕೇವಲ ಐಪಿಎಲ್ ಮಾತ್ರವಲ್ಲ, ಮುಂದಿನ 5 ತಿಂಗಳು ಕಾಲ ಕ್ರಿಕೆಟ್​ ಮೈದಾನಕ್ಕಿಳಿಯಲಾರರು ಎಂದು ಮೂಲಗಳು ತಿಳಿಸಿವೆ

ಶ್ರೇಯಸ್​ ಅಯ್ಯರ್​ಗೆ ಏಪ್ರಿಲ್​ನಲ್ಲಿ ಶಸ್ತ್ರಚಿಕಿತ್ಸೆ, 5 ತಿಂಗಳು ಅವಧಿಗೆ ಕ್ರಿಕೆಟ್​ನಿಂದ ದೂರ!
ಶ್ರೇಯಸ್ ಅಯ್ಯರ್​ ಗಾಯಗೊಂಡ ಸಂದರ್ಭ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 29, 2021 | 11:21 PM

Share

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂಡಿಯನ್ ಪ್ರಿಮೀಯರ್ ಸೀಸನ್ 14 ಶುರುವಾಗುವ ಮೊದಲೇ ಭಾರಿ ಆಘಾತ ಎದುರಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲ ಅಂತರರಾಷ್ಟ್ರೀಯ ಪಂದ್ಯದಲ್ಲಿ ಫೀಲ್ಡ್ ಮಾಡುವಾಗ ಎಡಭುಜದ ಮೂಳೆಯನ್ನು ಡಿಸ್​ಲೊಕೇಟ್​ ಮಾಡಿಕೊಂಡ ಭಾರತದ ಮಧ್ಯಮ ಕ್ರಮಾಂಕದ ಆಟಗಾರ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಟೀಮಿನ ನಾಯಕ ಶ್ರೇಯಸ್ ಆಯ್ಯರ್ ಶಸ್ತ್ರಚಿಕಿತ್ಸೆಗೊಳಗಾಗಲಿದ್ದು, 5 ತಿಂಗಳು ಕಾಲ ಕ್ರಿಕೆಟ್​ನಿಂದ ದೂರವುಳಿಯಲಿದ್ದಾರೆ. ಅವರ ಚೇತರಿಸಿಕೊಳ್ಳಲೇ 5 ತಿಂಗಳು ಬೇಕಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮೂಲಗಳು ತಿಳಿಸಿವೆ.

ಇಂಗ್ಲೆಂಡ್ ಇನ್ನಿಂಗ್ಸ್​ನ 8ನೇ ಓವರ್​ನಲ್ಲಿ (ಶಾರ್ದುಲ್ ಠಾಕೂರ್ ಬೌಲರ್) ಅಯ್ಯರ್ ಗಾಯಗೊಂಡರು. ಟೀಮ್ ಇಂಡಿಯಾದ ಫಿಸಿಯೋಥೆರಪಿಸ್ಟ್,​ ಅಯ್ಯರ್​ಗೆ ಮೈದಾನದಲ್ಲೇ ಚಿಕಿತ್ಸೆ ಒದಗಿಸಿದರಾದರೂ ನೋವು ತಡೆದುಕೊಳ್ಳುವುದು ಅವರಿಗೆ ಸಾಧ್ಯವಾಗಿರಲಿಲ್ಲ. ಅವರನ್ನು ಕೂಡಲೇ ಸ್ಕ್ಯಾನಿಂಗ್ ಮಾಡಿಸಲು ಕರೆದೊಯ್ಯಲಾಯಿತು.

ಮುಂದಿನ ತಿಂಗಳು ಆರಂಭವಾಗಲಿರುವ ಐಪಿಎಲ್​ನಲ್ಲಿ ಅಯ್ಯರ್ ಭಾಗವಹಿಸುವುದಿಲ್ಲ. ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊಸ ನಾಯಕ ಹೆಸರನ್ನು ಘೋಷಿಸಬೇಕಿದೆ. ಅವರು ಕೇವಲ ಐಪಿಎಲ್ ಮಾತ್ರವಲ್ಲ, ಮುಂದಿನ 5 ತಿಂಗಳು ಕಾಲ ಕ್ರಿಕೆಟ್​ ಮೈದಾನಕ್ಕಿಳಿಯಲಾರರು ಎಂದು ಮೂಲಗಳು ತಿಳಿಸಿವೆ. ಸೆಪ್ಟಂಬರ್​ನಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗಳ ಮೊದಲು ಅವರ ಚೇತರಿಕೆ ಹಂತದ ಬಗ್ಗೆ ಪರಶೀಲಿಸಲಾಗುವುದು.

ಅಯ್ಯರ್ ಶಸ್ತ್ರಚಿಕಿತ್ಸೆ ಒಳಗಾಗಲಿರುವುದರಿಂದ ಐಪಿಎಲ್ ಮತ್ತು ಆಗಸ್ಟ್​ನಲ್ಲಿ ಭಾರತದ ಇಂಗ್ಲೆಂಡ್ ಪ್ರವಾಸವನ್ನು ತಪ್ಪಿಸಿಕೊಳ್ಳಲಿದ್ದಾರೆ. ಅವರ ಆಪರೇಶನ್ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ನಡೆಯಲಿದೆ, ಎಂದು ಮೂಲಗಳು ತಿಳಿಸಿವೆ. ಈ ಮೊದಲು ಅಯ್ಯರ್ ಐಪಿಎಲ್ 2021 ಮೊದಲಾರ್ಧ ಮಾತ್ರ ಅಡಲಾರರು ಅಂತ ಹೇಳಲಾಗಿತ್ತು.

ಹಾಗಾದರೆ, ಡೆಲ್ಲಿ ಕ್ಯಾಪಿಟಲ್ಸ್ ಟೀಮಿನ ನಾಯಕತ್ವ ಯಾರಿಗೆ ಒಲಿಯಲಿದೆ ಎಂಬ ಚರ್ಚೆಗಳು ಕ್ರಿಕೆಟ್ ವಲಯದಲ್ಲಿ ಶುರುವಾಗಿವೆ. ಅಯ್ಯರ್ ಕೇವಲ ಉತ್ತಮ ಬ್ಯಾಟ್ಸ್​ಮನ್ ಆಗಿರದೆ ಟೀಮನ್ನು ಅದ್ಭುತವಾಗಿ ಮುನ್ನಡೆಸಿದ್ದರು. ಮೂಲಗಳ ಪ್ರಕಾರ, ಶಿಖರ್ ಧವನ್ ಇಲ್ಲವೇ ರಿಷಭ್ ಪಂತ್ ಅವರಿಗೆ ನಾಯಕತ್ವದ ಹೊಣೆಗಾರಿಕೆಯನ್ನು ನೀಡುವ ಸಾಧ್ಯತೆಗಳಿವೆ. ಈ ಹಿಂದೆ ಐಪಿಎಲ್​ನ ಬೇರೆ ಬೇರೆ ತಂಡಗಳಿಗೆ ನಾಯಕರಾಗಿದ್ದ ರವಿಚಂದ್ರನ್ ಅಶ್ವಿನ್ ಮತ್ತು ಅಸ್ಟ್ರೇಲಿಯಾದ ಸ್ಟೀವ್ ಸ್ಮಿತ್​ ಅವರನ್ನು ಸಹ ನಾಯಕತ್ವಕ್ಕೆ ಪರಿಗಣಿಸಲಾಗುತ್ತಿದೆ ಎಂದು ಟೀಮಿನ ಮೂಲಗಳು ತಿಳಿಸಿವೆ.

ಕಳೆದ ಬಾರಿ ರನ್ನರ್ಸ್-ಅಪ್ ಆಗಿದ್ದ ಡೆಲ್ಲಿ ತಂಡ ಈ ಬಾರಿಯ ಅಭಿಯಾನವನ್ನು ಮೂರು ಬಾರಿ ಪ್ರಶಸ್ತಿ ಗೆದ್ದಿರುವ ಚೆನೈ ಸೂಪರ್ ಕಿಂಗ್ಸ್ ವಿರುದ್ಧ ಏಪ್ರಿಲ್ 10 ರಂದು ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆಯುವ ಪಂದ್ಯದೊಂದಿಗೆ ಆರಂಭಿಸಲಿದೆ.

ಅಯ್ಯರ್ ಅವರ ಗಾಯ ಮತ್ತು ಅಲಭ್ಯತೆ ಬಗ್ಗೆ ಮಾರ್ಚ್ 25ರಂದು ಟ್ವೀಟ್ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮಾಲೀಕರಲ್ಲಿ ಒಬ್ಬರಾಗಿರುವ ಪಾರ್ಥ ಜಿಂದಾಲ್, ‘ನಮ್ಮ ಕ್ಯಾಪ್ಟನ್ ಶ್ರೇಯಸ್​ ಅಯ್ಯರ್​ ಅವರಿಗೆ ಗಾಯವಾಗಿರುವ ಸಂಗತಿ ಕೇಳಿ ಆಘಾತಕಕ್ಕೊಳಗಾಗಿದ್ದೇನೆ, ಕ್ಯಾಪ್ಟನ್ ನೀವು ಎದೆಗುಂದಬಾರದು, ನೀವು ಮೇಗ ಗುಣಮುಖರಾಗುವ ನಿರೀಕ್ಷೆಯಿದೆ. ನೀವು ಮತ್ತಷ್ಟು ಸದೃಢರಾಗಿ ವಾಪಸ್ಸಾಗುವ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಟಿ20 ವಿಶ್ವಕಪ್​ನಲ್ಲಾಡುವ ಭಾರತೀಯ ತಂಡಕ್ಕೆ ನಿಮ್ಮ ಅವಶ್ಯಕತೆಯಿದೆ,’ ಎಂದಿದ್ದಾರೆ.

ಐಸಿಸಿ 2021 ಟಿ20 ವಿಶ್ವಕಪ್ ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲೇ ನಡೆಯಲಿದೆ.

ಇದನ್ನೂ ಓದಿ:India vs England: ಬದುಕಿನ ಉತ್ಕೃಷ್ಟ ಕ್ರಿಕೆಟ್​ ಸೀಸನ್: ಇಂಗ್ಲೆಂಡ್ ವಿರುದ್ಧ ಸರಣಿಗಳನ್ನು ಗೆದ್ದ ನಂತರ ಕೋಚ್ ರವಿಶಾಸ್ತ್ರಿ ಉದ್ಗಾರ

ಇದನ್ನೂ ಓದಿ: India vs England: ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್- ಶ್ರೇಯಸ್​ ಇಂಜುರಿ! ಅಯ್ಯರ್​ ಐಪಿಎಲ್​ ಆಡುವುದು ಡೌಟ್?

Published On - 11:19 pm, Mon, 29 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?