AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಪಂದ್ಯದ ಬಳಿಕ ನಡೆದ ಸಂಭ್ರಮಾಚರಣೆಯ ಫೋಟೋವನ್ನು ಶುಭ್​ಮನ್ ಗಿಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಇರಲಿಲ್ಲ.

ಝಾಹಿರ್ ಯೂಸುಫ್
|

Updated on: Mar 14, 2026 | 12:54 PM

Share
ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾವನ್ನು ಅಭಿನಂದಿಸಿ ಶುಭ್​​ಮನ್ ಗಿಲ್ (Shubman Gill) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಭಾರತ ತಂಡದ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಇರಲಿಲ್ಲ.

ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾವನ್ನು ಅಭಿನಂದಿಸಿ ಶುಭ್​​ಮನ್ ಗಿಲ್ (Shubman Gill) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಭಾರತ ತಂಡದ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಇರಲಿಲ್ಲ.

1 / 6
ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ ಸಂಜು ಸ್ಯಾಮ್ಸನ್ ಅವರನ್ನು ಫೋಟೋದಿಂದ ಎಡಿಟ್ ಮಾಡಿ ತೆಗೆದುಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದರು.

ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ ಸಂಜು ಸ್ಯಾಮ್ಸನ್ ಅವರನ್ನು ಫೋಟೋದಿಂದ ಎಡಿಟ್ ಮಾಡಿ ತೆಗೆದುಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದರು.

2 / 6
ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಜಸ್​ಪ್ರೀತ್ ಬುಮ್ರಾ ಅವರ ಹಿಂಬದಿಯಲ್ಲಿ ನಿಂತಿರುವುದು ಕಾಣುತ್ತಿತ್ತು. ಹೀಗಾಗಿಯೇ ಶುಭ್​ಮನ್ ಗಿಲ್ ಉದ್ದೇಶಪೂರ್ವಕವಾಗಿಯೇ ಸಂಜು ಸ್ಯಾಮ್ಸನ್ ಅವರ ಫೋಟೋವನ್ನು ಎಡಿಟ್ ಮಾಡಿ ಹಂಚಿಕೊಂಡಿದ್ದಾರೆ ಆರೋಪಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಜಸ್​ಪ್ರೀತ್ ಬುಮ್ರಾ ಅವರ ಹಿಂಬದಿಯಲ್ಲಿ ನಿಂತಿರುವುದು ಕಾಣುತ್ತಿತ್ತು. ಹೀಗಾಗಿಯೇ ಶುಭ್​ಮನ್ ಗಿಲ್ ಉದ್ದೇಶಪೂರ್ವಕವಾಗಿಯೇ ಸಂಜು ಸ್ಯಾಮ್ಸನ್ ಅವರ ಫೋಟೋವನ್ನು ಎಡಿಟ್ ಮಾಡಿ ಹಂಚಿಕೊಂಡಿದ್ದಾರೆ ಆರೋಪಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

3 / 6
ಈ ಬಗ್ಗೆ ಫ್ಯಾಕ್ಟ್-ಚೆಕ್ ಮಾಡಿದಾಗ ಗಿಲ್ ಹಂಚಿಕೊಂಡದ್ದು ಮತ್ತು ಅಭಿಮಾನಿಗಳು ಹೋಲಿಸುತ್ತಿದ್ದದ್ದು ಎರಡು ಬೇರೆ ಬೇರೆ ಫೋಟೋಗಳು. ಇವುಗಳನ್ನು ಕೆಲವು ಸೆಕೆಂಡುಗಳ ಅಂತರದಲ್ಲಿ ತೆಗೆಯಲಾಗಿದೆ. ಅಂದರೆ ಶುಭ್​ಮನ್ ಗಿಲ್ ಹಂಚಿಕೊಂಡ ಫೋಟೋದಲ್ಲಿ ಸ್ಯಾಮ್ಸನ್ ಕಾಣಿಸುತ್ತಿಲ್ಲ ಎಂಬುದೇ ನಿಜ. ಇದೇ ಫೋಟೋವನ್ನು ಬಿಸಿಸಿಐ ಕೂಡ ಹಂಚಿಕೊಂಡಿದೆ.

ಈ ಬಗ್ಗೆ ಫ್ಯಾಕ್ಟ್-ಚೆಕ್ ಮಾಡಿದಾಗ ಗಿಲ್ ಹಂಚಿಕೊಂಡದ್ದು ಮತ್ತು ಅಭಿಮಾನಿಗಳು ಹೋಲಿಸುತ್ತಿದ್ದದ್ದು ಎರಡು ಬೇರೆ ಬೇರೆ ಫೋಟೋಗಳು. ಇವುಗಳನ್ನು ಕೆಲವು ಸೆಕೆಂಡುಗಳ ಅಂತರದಲ್ಲಿ ತೆಗೆಯಲಾಗಿದೆ. ಅಂದರೆ ಶುಭ್​ಮನ್ ಗಿಲ್ ಹಂಚಿಕೊಂಡ ಫೋಟೋದಲ್ಲಿ ಸ್ಯಾಮ್ಸನ್ ಕಾಣಿಸುತ್ತಿಲ್ಲ ಎಂಬುದೇ ನಿಜ. ಇದೇ ಫೋಟೋವನ್ನು ಬಿಸಿಸಿಐ ಕೂಡ ಹಂಚಿಕೊಂಡಿದೆ.

4 / 6
ಅಷ್ಟೇ ಅಲ್ಲದೆ ಶುಭ್​ಮನ್ ಗಿಲ್ ಹಂಚಿಕೊಂಡ ಅದೇ ಫೋಟೋವನ್ನು ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಕೂಡ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ನಿರ್ದಿಷ್ಟ ಫ್ರೇಮ್‌ನಲ್ಲಿ ಸ್ಯಾಮ್ಸನ್ ಅವರ ಸ್ಥಾನವು ಕ್ಯಾಮೆರಾಕ್ಕೆ ಸರಿಯಾಗಿ ಕಾಣಿಸುತ್ತಿರಲಿಲ್ಲ ಅಷ್ಟೇ.

Dube

5 / 6
ಇದಾಗ್ಯೂ ಶುಭ್​ಮನ್ ಗಿಲ್ ವಿರುದ್ಧ ಇಂತಹದೊಂದು ಆರೋಪ ಮೂಡಿಬರಲು ಮುಖ್ಯ ಕಾರಣ, ಇಬ್ಬರ ನಡುವಣ ಪೈಪೋಟಿ. ಅಂದರೆ ಟೀಮ್ ಇಂಡಿಯಾದ ಆರಂಭಿಕನ ಸ್ಥಾನಕ್ಕಾಗಿ ಶುಭ್​ಮನ್ ಗಿಲ್ ಹಾಗೂ ಸಂಜು ಸ್ಯಾಮ್ಸನ್ ನಡುವೆ ಪೈಪೋಟಿಯಿದ್ದು, ಹೀಗಾಗಿ ಈ ಫೋಟೋ ಹಂಚಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗಿದೆ.

ಇದಾಗ್ಯೂ ಶುಭ್​ಮನ್ ಗಿಲ್ ವಿರುದ್ಧ ಇಂತಹದೊಂದು ಆರೋಪ ಮೂಡಿಬರಲು ಮುಖ್ಯ ಕಾರಣ, ಇಬ್ಬರ ನಡುವಣ ಪೈಪೋಟಿ. ಅಂದರೆ ಟೀಮ್ ಇಂಡಿಯಾದ ಆರಂಭಿಕನ ಸ್ಥಾನಕ್ಕಾಗಿ ಶುಭ್​ಮನ್ ಗಿಲ್ ಹಾಗೂ ಸಂಜು ಸ್ಯಾಮ್ಸನ್ ನಡುವೆ ಪೈಪೋಟಿಯಿದ್ದು, ಹೀಗಾಗಿ ಈ ಫೋಟೋ ಹಂಚಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗಿದೆ.

6 / 6
Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?