AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶುಭ್​ಮನ್ ಗಿಲ್​ಗೆ ಗಾಯ; ಮೊದಲ ದಿನ ಕಣಕ್ಕಿಳಿಯದ ನಾಯಕ

India vs Sri Lanka practice match: ಭಾರತ ಹಾಗೂ ಶ್ರೀಲಂಕಾ ಇಲೆವೆನ್ ನಡುವಿನ ಅಭ್ಯಾಸ ಪಂದ್ಯದಲ್ಲಿ ಶುಭ್​ಮನ್ ಗಿಲ್ ಗಾಯಗೊಂಡಿದ್ದು, ಕನ್ನಡಿಗ ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸಿದ್ದಾರೆ. ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ಗಿಲ್, ಮೊದಲ ದಿನದ ಪಂದ್ಯದಿಂದ ಹೊರಗುಳಿದಿದ್ದಾರೆ. ಗಾಯ ಗಂಭೀರವಲ್ಲ ಎಂದು ಬಿಸಿಸಿಐ ತಿಳಿಸಿದ್ದು, ಮೊದಲ ಟೆಸ್ಟ್‌ಗೆ ಗಿಲ್ ಫಿಟ್ ಆಗುವ ಸಾಧ್ಯತೆ ಇದೆ. ಈ ಪಂದ್ಯ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ಆರಂಭವಾಗಿದೆ.

IND vs SL: ಶುಭ್​ಮನ್ ಗಿಲ್​ಗೆ ಗಾಯ; ಮೊದಲ ದಿನ ಕಣಕ್ಕಿಳಿಯದ ನಾಯಕ
Shubman Gill
ಪೃಥ್ವಿಶಂಕರ
|

Updated on:Aug 07, 2026 | 2:30 PM

Share

ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ (India vs Sri Lanka ) ನಡುವಿನ ಮೂರು ಪಂದ್ಯಗಳ ಅಭ್ಯಾಸ ಪಂದ್ಯ ಇಂದಿನಿಂದ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಇಲೆವೆನ್ ತಂಡ ಮೊದಲು ಬ್ಯಾಟಿಂಗ್‌ ಮಾಡತ್ತಿದೆ. ಇತ್ತ ಭಾರತ ತಂಡದಲ್ಲಿ ನಾಯಕನ ಬದಲಾವಣೆಯಾಗಿದ್ದು, ಈ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡವನ್ನು ಮುನ್ನಡೆಸುತ್ತಿದ್ದಾರೆ. ನಿಯಮಿತ ನಾಯಕ ಶುಭ್​ಮನ್ ಗಿಲ್ (Shubman Gill) ಅಭ್ಯಾಸದ ಸಮಯದಲ್ಲಿ ಬೆರಳಿಗೆ ಗಾಯ ಮಾಡಿಕೊಂಡ ಕಾರಣದಿಂದಾಗಿ ಅವರು ಮೊದಲ ಕಣಕ್ಕಿಳಿದಿಲ್ಲ. ಹೀಗಾಗಿ ಅವರ ಬದಲಿಗೆ ರಾಹುಲ್ ತಂಡದ ನಾಯಕತ್ವವಹಿಸಿದ್ದಾರೆ.

ಅಭ್ಯಾಸದ ವೇಳೆ ಗಾಯ

ಅಭ್ಯಾಸ ಪಂದ್ಯ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ಆಗಸ್ಟ್ 6 ರಂದು ತಂಡದೊಂದಿಗೆ ಬ್ಯಾಟಿಂಗ್‌ ಅಭ್ಯಾಸ ಮಾಡುವ ಸಮಯದಲ್ಲಿ ಶುಭ್​ಮನ್ ಗಿಲ್ ತಮ್ಮ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಕೂಡಲೇ ಮೈದಾನಕ್ಕೆ ಬಂದಿದ್ದ ಫಿಸಿಯೋ, ಅವರನ್ನು ಪರೀಕ್ಷಿಸಿ ಗಿಲ್ ಅವರ ಕೈಗೆ ಬ್ಯಾಂಡೆಜ್ ಸುತ್ತಿದ್ದರು. ಇದಾದ ಬಳಿಕ ಗಿಲ್ ತಮ್ಮ ಬ್ಯಾಟಿಂಗ್‌ ಅಭ್ಯಾಸವನ್ನು ಮುಂದುವರೆಸಿದ್ದರು. ಆದರೆ ಫಿಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಗಾಯಗೊಂಡಿರುವ ಕೈಗೆ ಚೆಂಡು ಮತ್ತೆ ಬಡಿದಿತ್ತು. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ಗಿಲ್ ತಮ್ಮ ಅಭ್ಯಾಸವನ್ನು ಮೊಟಕುಗೊಳಿಸಿದ್ದರು. ಆ ಸಮಯದಲ್ಲಿ ಗಿಲ್ ಅವರ ಗಾಯದ ತೀವ್ರತೆಯ ಬಗ್ಗೆ ಬಿಸಿಸಿಐ ಏನನ್ನೂ ಹೇಳಿರಲಿಲ್ಲ. ಆದರೀಗ ಅವರು ಅಭ್ಯಾಸ ಪಂದ್ಯದ ಮೊದಲ ದಿನದಂದು ತಂಡದೊಂದಿಗೆ ಕಣಕ್ಕಿಳಿದಿಲ್ಲ

ಮಾಹಿತಿ ನೀಡಿದ ಬಿಸಿಸಿಐ

ಶುಭ್​ಮನ್ ಗಿಲ್ ಅವರ ಗಾಯದ ಬಗ್ಗೆ ಬಿಸಿಸಿಐ ಮಾಹಿತಿ ಹಂಚಿಕೊಂಡಿದ್ದು, ಗುರುವಾರ ಅಭ್ಯಾಸದ ಸಮಯದಲ್ಲಿ ನಾಯಕ ಶುಭಮನ್ ಗಿಲ್ ಅವರ ಬಲಗೈ ಉಂಗುರದ ಬೆರಳಿಗೆ ಗಾಯವಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ, ಮೂರು ದಿನಗಳ ಅಭ್ಯಾಸ ಪಂದ್ಯದ ಮೊದಲ ದಿನದಂದು ಮೈದಾನಕ್ಕೆ ಇಳಿಯದಂತೆ ಅವರಿಗೆ ಸೂಚಿಸಲಾಗಿದೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಗಾಯ ಮತ್ತು ಚೇತರಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.

IND vs SL: ಅಭ್ಯಾಸ ಪಂದ್ಯಕ್ಕೂ ಮುನ್ನ ಕೈಗೆ ಗಾಯ ಮಾಡಿಕೊಂಡ ಶುಭ್​ಮನ್ ಗಿಲ್

ಮಾಹಿತಿ ಪ್ರಕಾರ, ಶುಭ್​ಮನ್ ಗಿಲ್ ಅವರ ಗಾಯ ತುಂಬಾ ಗಂಭೀರವಾಗಿಲ್ಲ. ಹೀಗಾಗಿ ಆಗಸ್ಟ್ 15 ರಂದು ಗಾಲೆಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೂ ಮೊದಲು ಅವರು ಸಂಪೂರ್ಣವಾಗಿ ಫಿಟ್ ಆಗುವ ಸಾಧ್ಯತೆಗಳಿವೆ. ಆದಾಗ್ಯೂ, ಅಭ್ಯಾಸ ಅವಧಿಗೆ ಆಡುವ ಹನ್ನೊಂದರ ಬಳಗವನ್ನು ಘೋಷಿಸದ ಕಾರಣ, ಗಿಲ್ ಟೀಂ ಇಂಡಿಯಾದ ಬ್ಯಾಟಿಂಗ್ ಸಮಯದಲ್ಲಿ ಮೈದಾನಕ್ಕೆ ಇಳಿಯಬಹುದು. ಆದಾಗ್ಯೂ, ಈ ನಿರ್ಧಾರವು ತಂಡದ ಆಡಳಿತ ಮಂಡಳಿಯ ಮೇಲೆ ಅವಲಂಬಿತವಾಗಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Fri, 7 August 26

Follow Us
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ
ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ