AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ ಸೋಲಿಗೆ ಶುಭ್​ಮನ್ ಗಿಲ್ ದೂರಿದ್ದು ಯಾರನ್ನ?

India vs England 3rd Test: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 193 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 170 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಂಗ್ಲರ ಪಡೆ 22 ರನ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

IND vs ENG: ಭಾರತದ ಸೋಲಿಗೆ ಶುಭ್​ಮನ್ ಗಿಲ್ ದೂರಿದ್ದು ಯಾರನ್ನ?
Shubman Gill
ಝಾಹಿರ್ ಯೂಸುಫ್
|

Updated on: Jul 15, 2025 | 8:53 AM

Share

ಲಾರ್ಡ್ಸ್‌ನಲ್ಲಿ ನಡೆದ ರೋಚಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 387 ರನ್​ಗಳಿಸಿದರೆ, ಟೀಮ್ ಇಂಡಿಯಾ ಕೂಡ 387 ರನ್​ಗಳೊಂದಿಗೆ ಮೊದಲ ಇನಿಂಗ್ಸ್ ಅಂತ್ಯಗೊಳಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ಕಲೆಹಾಕಿದ್ದು 192 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 170 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಂಗ್ಲರ ಪಡೆ 22 ರನ್​ಗಳ ಗೆಲುವು ದಾಖಲಿಸಿತು.

ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್, ಇಡೀ ತಂಡದ ಪ್ರಯತ್ನವನ್ನು ಶ್ಲಾಘಿಸಿದರು.  ಐದು ದಿನಗಳ ಕಾಲ ಕಠಿಣ ಕ್ರಿಕೆಟ್ ಆಡಿದ ನಂತರ, ಪಂದ್ಯವು ಕೊನೆಯ ಸೆಷನ್ ಮತ್ತು ಕೊನೆಯ ವಿಕೆಟ್ ವರೆಗೆ ಸಾಗಿದ್ದು ಗ್ರೇಟ್. ತಂಡದ ಪ್ರಯತ್ನಗಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಇದಾಗ್ಯೂ ಈ ಗುರಿಯನ್ನು ಬೆನ್ನಟ್ಟುವ ವಿಶ್ವಾಸ ನನಗಿತ್ತು. ಆದರೆ ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯವು ಟೀಮ್ ಇಂಡಿಯಾ ಸೋಲಿಗೆ ಕಾರಣವಾಯಿತು ಎಂದರು.

ಒಂದು ವೇಳೆ ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಕನಿಷ್ಠ 50 ರನ್​ಗಳ ಜೊತೆಯಾಟವಾಡಿದ್ದರೆ, ಚೇಸಿಂಗ್ ತುಂಬಾ ಸುಲಭವಾಗುತ್ತಿತ್ತು. ಆದರೆ ಟಾಪ್ ಆರ್ಡರ್​​ಗಳ ವೈಫಲ್ಯದಿಂದಾಗಿ ಗುರಿ ತಲುಪಲು ವಿಫಲವಾದೆವು. ಇದಾಗ್ಯೂ ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಅವರ ಆಟದಿಂದ ನಾವು ಪಂದ್ಯ ಗೆಲ್ಲುವ ನಿರೀಕ್ಷೆಯಲ್ಲಿದ್ದೆವು.  ಆದರೆ ನಮ್ಮ ಕೊನೆಯ ಎರಡು ವಿಕೆಟ್​ಗಳು ಬೇಗನೆ ಬಿದ್ದವು.

ಈ ಸೋಲಿನ ಹೊರತಾಗಿಯೂ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆ ಇದೆ. ಅಲ್ಲದೆ ಸರಣಿಯ ಉಳಿದ ಪಂದ್ಯಗಳಲ್ಲಿ ಜಯ ಸಾಧಿಸುವ ವಿಶ್ವಾಸವಿದೆ ಎಂದು ಶುಭ್​ಮನ್ ಗಿಲ್ ಹೇಳಿದ್ದಾರೆ. ಅದರಲ್ಲೂ ಮ್ಯಾಂಚೆಸ್ಟರ್​ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಗಿಲ್, ಈ ಸರಣಿಯನ್ನು ನಾವು ಕೊನೆಯ ಪಂದ್ಯದತ್ತ ಕೊಂಡೊಯ್ಯಲಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

ಸದ್ಯ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಸರಣಿ ಗೆಲ್ಲುವ ಆಸೆಯನ್ನು ಜೀವಂತವರಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಜಯಗಳಿಸಲೇಬೇಕು. ಅದರಂತೆ ಮ್ಯಾಂಚೆಸ್ಟರ್​​ ಟೆಸ್ಟ್​ನಲ್ಲಿ ಭಾರತ ತಂಡ ಆತಿಥೇಯರಿಗೆ 2ನೇ ಸೋಲುಣಿಸಲಿದ್ದಾರಾ ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?