
ಲಾರ್ಡ್ಸ್ನಲ್ಲಿ ನಡೆದ ರೋಚಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್ನಲ್ಲಿ 387 ರನ್ಗಳಿಸಿದರೆ, ಟೀಮ್ ಇಂಡಿಯಾ ಕೂಡ 387 ರನ್ಗಳೊಂದಿಗೆ ಮೊದಲ ಇನಿಂಗ್ಸ್ ಅಂತ್ಯಗೊಳಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ಕಲೆಹಾಕಿದ್ದು 192 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 170 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಂಗ್ಲರ ಪಡೆ 22 ರನ್ಗಳ ಗೆಲುವು ದಾಖಲಿಸಿತು.
ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್, ಇಡೀ ತಂಡದ ಪ್ರಯತ್ನವನ್ನು ಶ್ಲಾಘಿಸಿದರು. ಐದು ದಿನಗಳ ಕಾಲ ಕಠಿಣ ಕ್ರಿಕೆಟ್ ಆಡಿದ ನಂತರ, ಪಂದ್ಯವು ಕೊನೆಯ ಸೆಷನ್ ಮತ್ತು ಕೊನೆಯ ವಿಕೆಟ್ ವರೆಗೆ ಸಾಗಿದ್ದು ಗ್ರೇಟ್. ತಂಡದ ಪ್ರಯತ್ನಗಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಇದಾಗ್ಯೂ ಈ ಗುರಿಯನ್ನು ಬೆನ್ನಟ್ಟುವ ವಿಶ್ವಾಸ ನನಗಿತ್ತು. ಆದರೆ ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್ಗಳ ವೈಫಲ್ಯವು ಟೀಮ್ ಇಂಡಿಯಾ ಸೋಲಿಗೆ ಕಾರಣವಾಯಿತು ಎಂದರು.
ಒಂದು ವೇಳೆ ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್ಗಳು ಕನಿಷ್ಠ 50 ರನ್ಗಳ ಜೊತೆಯಾಟವಾಡಿದ್ದರೆ, ಚೇಸಿಂಗ್ ತುಂಬಾ ಸುಲಭವಾಗುತ್ತಿತ್ತು. ಆದರೆ ಟಾಪ್ ಆರ್ಡರ್ಗಳ ವೈಫಲ್ಯದಿಂದಾಗಿ ಗುರಿ ತಲುಪಲು ವಿಫಲವಾದೆವು. ಇದಾಗ್ಯೂ ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಅವರ ಆಟದಿಂದ ನಾವು ಪಂದ್ಯ ಗೆಲ್ಲುವ ನಿರೀಕ್ಷೆಯಲ್ಲಿದ್ದೆವು. ಆದರೆ ನಮ್ಮ ಕೊನೆಯ ಎರಡು ವಿಕೆಟ್ಗಳು ಬೇಗನೆ ಬಿದ್ದವು.
ಈ ಸೋಲಿನ ಹೊರತಾಗಿಯೂ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆ ಇದೆ. ಅಲ್ಲದೆ ಸರಣಿಯ ಉಳಿದ ಪಂದ್ಯಗಳಲ್ಲಿ ಜಯ ಸಾಧಿಸುವ ವಿಶ್ವಾಸವಿದೆ ಎಂದು ಶುಭ್ಮನ್ ಗಿಲ್ ಹೇಳಿದ್ದಾರೆ. ಅದರಲ್ಲೂ ಮ್ಯಾಂಚೆಸ್ಟರ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಗಿಲ್, ಈ ಸರಣಿಯನ್ನು ನಾವು ಕೊನೆಯ ಪಂದ್ಯದತ್ತ ಕೊಂಡೊಯ್ಯಲಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್ ಮುಡಿಗೆ 13ನೇ ಟ್ರೋಫಿ
ಸದ್ಯ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 2 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಸರಣಿ ಗೆಲ್ಲುವ ಆಸೆಯನ್ನು ಜೀವಂತವರಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಜಯಗಳಿಸಲೇಬೇಕು. ಅದರಂತೆ ಮ್ಯಾಂಚೆಸ್ಟರ್ ಟೆಸ್ಟ್ನಲ್ಲಿ ಭಾರತ ತಂಡ ಆತಿಥೇಯರಿಗೆ 2ನೇ ಸೋಲುಣಿಸಲಿದ್ದಾರಾ ಕಾದು ನೋಡಬೇಕಿದೆ.