AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಬರುತ್ತಿದೆ ದಕ್ಷಿಣ ಆಫ್ರಿಕ

ಭಾರತೀಯರಿಗಿರುವಷ್ಟೇ ಕ್ರಿಕೆಟ್ ವ್ಯಾಮೋಹ ಪಾಕಿಸ್ತಾನದ ಜನರಲ್ಲೂ ಇದೆ. ಅಲ್ಲಿ ನೆಲೆಗೊಂಡಿರುವ ಉಗ್ರ ಸಂಘಟನೆಯೊಂದು ನಡೆಸಿದ ಭಯೋತ್ಪಾದಕ ಕೃತ್ಯ ಅಂತರರಾಷ್ಟ್ರೀಯ ಕ್ರಿಕೆಟನ್ನು ಒಂದು ದಶಕದವರೆಗೆ ನಿಲ್ಲಿಸಿಬಿಟ್ಟಿತ್ತು. ಆದರೆ, ಕಳೆದೊಂದು ವರ್ಷದಿಂದ ಪಾಕಿಸ್ತಾನದಲ್ಲಿ ಕ್ರಿಕೆಟ್ ಚಟುವಟಿಕೆಗಳು ಮತ್ತೆ ಆರಂಭವಾಗಿವೆ.

14 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಬರುತ್ತಿದೆ ದಕ್ಷಿಣ ಆಫ್ರಿಕ
ದಕ್ಷಿಣ ಆಫ್ರಿಕ ಕ್ರಿಕೆಟ್ ತಂಡ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Dec 10, 2020 | 6:15 PM

Share

ಹೆಚ್ಚು ಕಡಿಮೆ ಒಂದು ದಶಕದವರೆಗೆ ಭೀಕರ ಸ್ವರೂಪದ ಕ್ರಿಕೆಟ್ ಕ್ಷಾಮ ಎದುರಿಸಿದ ಪಾಕಿಸ್ತಾನದಲ್ಲಿ ಕ್ರಮೇಣ ಅಂತರರಾಷ್ಟ್ರೀಯ ಕ್ರಿಕೆಟ್​ ಚಟುವಟಿಕೆಗಳು ಗರಿಗೆದರಲಾರಂಭಿಸಿವೆ. ಸೆಪ್ಟೆಂಬರ್ 2019ರಿಂದ ಪ್ರಮುಖ ಕ್ರಿಕೆಟಿಂಗ್ ರಾಷ್ಟ್ರಗಳಲ್ಲದಿದ್ದರೂ ಟೆಸ್ಟ್ ಅಡುವ ಮಾನ್ಯತೆ ಪಡೆದಿರುವ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ಪಾಕಿಸ್ತಾನದ ಪ್ರವಾಸ ಕೈಗೊಂಡಿವೆ. ಈಗ ದಕ್ಷಿಣ ಆಫ್ರಿಕಾದ ಸರದಿ.

ಹೌದು, ಎರಡು ಟೆಸ್ಟ್ ಮತ್ತು ಮೂರು ಟಿ-20ಐ ಕ್ರಿಕೆಟ್ ಪಂದ್ಯಗಳ ಸರಣಿಯನ್ನಾಡಲು ದಕ್ಷಿಣ ಆಫ್ರಿಕ ತಂಡ ಮುಂದಿನ ತಿಂಗಳು ಅಂದರೆ ಜನವರಿ 2021 ರಲ್ಲಿ ಪಾಕಿಸ್ತಾನಕ್ಕೆ ಬರಲಿದೆ. ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ದೇಶಕ ಗ್ರೀಮ್ ಸ್ಮಿತ್ ಸದರಿ ವಿಷಯವನ್ನು ದೃಢೀಕರಿಸಿದ್ದಾರೆ. ಈ ಆಫ್ರಿಕನ್ ರಾಷ್ಟ್ರವು ಪಾಕ್ ಪ್ರವಾಸ ಮಾಡುತ್ತಿರುವುದು ಬರೋಬ್ಬರಿ 14 ವರ್ಷಗಳ ನಂತರ!

ಓದುಗರಿಗೆ ನೆನಪಿರಬಹುದು, 2009ರಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನದ ನಡುವೆ ಲಾಹೋರ್​ನಲ್ಲಿ ನಡೆಯುತ್ತಿದ್ದ ಟೆಸ್ಸ್ಟ್ ಪಂದ್ಯದ ಮೂರನೇ ದಿನ ಉಗ್ರಗಾಮಿಗಳು ಮೈದಾನದ ಮೇಲೆ ಗುಂಡಿನಮಳೆಗರೆದರು. ಆ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ 6 ಪೊಲೀಸರು, 2 ನಾಗರಿಕರು ಬಲಿಯಾದರಲ್ಲದೆ, ಶ್ರೀಲಂಕಾದ 6 ಆಟಗಾರರು, ಸಿಬ್ಬಂದಿ ವರ್ಗದ 2 ಮತ್ತು ಒಬ್ಬ ರಿಸರ್ವ್ ಅಂಪೈರ್ ಗಾಯಗೊಂಡಿದ್ದರು. ಹಲವಾರು ಉಗ್ರ ಸಂಘಟನೆಗಳಿಗೆ ಆಶ್ರಯ ಕಲ್ಪಿಸಿರುವ ಪಾಕಿಸ್ತಾನದಲ್ಲಿ ಅಂದಿನಿಂದ 2019 ರವರೆಗೆ ಅಂತರರಾಷ್ಡ್ರೀಯ ಕ್ರಿಕೆಟ್ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: ಭಾರತದಂಥ ಬೌಲಿಂಗ್ ಆಕ್ರಮಣ ನನ್ನ ಕ್ರಿಕೆಟ್ ಬದುಕಿನಲ್ಲಿ ನೋಡಿಲ್ಲ: ಟ್ರಾವಿಸ್ ಹೆಡ್

ಗ್ರೀಮ್ ಸ್ಮಿತ್, ಸಿಎಸ್​ಎ ನಿರ್ದೇಶಕ

ದಕ್ಷಿಣ ಅಫ್ರಿಕ ಮತ್ತು ಪಾಕ್ ನಡುವೆ ಮೊದಲ ಟೆಸ್ಟ್ ಪಂದ್ಯ ಜನವರಿ 26ರಿಂದ 30ರವರೆಗೆ ಕರಾಚಿಯಲ್ಲಿ ಮತ್ತು ಎರಡನೇ ಟೆಸ್ಟ್ ಪಂದ್ಯ ರಾವಲ್ಪಿಂಡಿಯಲ್ಲಿ ಫೆಬ್ರವರಿ 4ರಿಂದ 8ರವರೆಗೆ ನಡೆಯಲಿದೆ. ಈ ಟೆಸ್ಟ್​ಗಳು ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ನ ಭಾಗವಾಗಲಿವೆ. ಮೂರು ಟಿ20ಐ ಪಂದ್ಯಗಳು ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್​ನಲ್ಲಿ ನಡೆಯಲಿವೆ.

ದಕ್ಷಿಣ ಆಫ್ರಿಕ ಪ್ರವಾಸದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸ್ಮಿತ್, ‘ಹಲವಾರು ರಾಷ್ಟ್ರಗಳು ಪಾಕಿಸ್ತಾನ ಕ್ರಿಕೆಟ್ ಪ್ರವಾಸಕ್ಕೆ ಮುಂದೆ ಬರುತ್ತಿರುವುದು ಸಂತೋಷದ ಸಂಗತಿ. ಪಾಕಿಸ್ತಾನ ಅಪ್ಪಟ ಕ್ರಿಕೆಟ್-ವ್ಯಾಮೋಹದ ಹೆಮ್ಮೆಯ ರಾಷ್ಟ್ರವಾಗಿದೆ. ಮೂರು ವಾರಗಳ ಹಿಂದೆ, ದಕ್ಷಿಣ ಆಫ್ರಿಕಾದ ಭದ್ರತಾ ಪಡೆ ನಿಯೋಗವೊಂದು ಪಾಕಿಸ್ತಾನದಲ್ಲಿ ತಮ್ಮ ಆಟಗಾರರಿಗೆ ಒದಗಿಸಲಿರುವ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ಹೋದಾಗ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅವರಿಗೆ ನೀಡಿದ ಅತಿಥಿ ಸತ್ಕಾರ ಮತ್ತು ಭದ್ರತೆ ವ್ಯವಸ್ಥೆ ಕುರಿತು ತೋರಿದ ಪಾರದರ್ಶಕತೆಗಾಗಿ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.

ಬಾಬರ್ ಆಜಂ, ಪಾಕಿಸ್ತಾನ ಕ್ರಿಕೆಟ್​ ಟೀಮಿನ ನಾಯಕ

ಪಾಕ್ ಕ್ರಿಕೆಟ್ ಟೀಮಿನ ನಾಯಕ ಬಾಬರ್ ಆಜಂ ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ‘ಕಳೆದೊಂದು ದಶಕದಲ್ಲಿ ನಾವು ಕ್ರಿಕೆಟ್​ನಲ್ಲಿ ಸಾಧಿಸಿರುವ ಪ್ರಗತಿಯನ್ನು ವಿಶ್ವಕ್ಕೆ ತೋರಿಸಲು ನಮಗೀಗ ಒಳ್ಳೆಯ ಅವಕಾಶ’ ಎಂದು ಬಾಬರ್ ಹೇಳಿದ್ದಾರೆ.

ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಮೊದಲು ಇಂಗ್ಲೆಂಡ್ ಸಹ ಅಕ್ಟೋಬರ್, 2021 ರಲ್ಲಿ ಪಾಕಿಸ್ತಾನ ಪ್ರವಾಸ ಬೆಳೆಸಿ ಮೂರು ಟಿ20ಐ ಪಂದ್ಯಗಳನ್ನಾಡಲಿದೆ.

ಕ್ರಿಕೆಟ್​ಗೆ ಹಾರ್ದಿಕ್ ಪಾಂಡ್ಯರಂಥ ಸೂಪರ್ ಸ್ಟಾರ್​ಗಳ ಅವಶ್ಯಕತೆಯಿದೆ: ಶೇನ್ ವಾರ್ನ್

Published On - 4:42 pm, Thu, 10 December 20

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ