AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ
preethi shettigar
|

Updated on:Dec 04, 2020 | 6:01 PM

Share

ಕೊರೊನಾ ಪರೀಕ್ಷೆ ವೇಳೆ ಆಟಗಾರನೊಬ್ಬನಿಗೆ ಪಾಸಿಟಿವ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್​-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಲ್ಪಟ್ಟಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್​ ಮಂಡಳಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಪಂದ್ಯ ಭಾನುವಾರಕ್ಕೆ ಮುಂದೂಡಲ್ಪಟ್ಟಿದೆ.

ಎರಡೂ ತಂಡದ ಆಟಗಾರರ ಹಿತದೃಷ್ಟಿಯಿಂದ ನಾವು ಪಂದ್ಯವನ್ನು ಮುಂದೂಡುತ್ತಿದ್ದೇವೆ. ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಎರಡೂ ಕ್ರಿಕೆಟ್​ ಮಂಡಳಿ ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿವೆ. ಅಷ್ಟೇ ಅಲ್ಲ, ಎಲ್ಲ ಕ್ರಿಕೆಟ್​ ಆಟಗಾರರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಆಫ್ರಿಕಾ ನೆಲದಲ್ಲಿ ಇಂಗ್ಲೆಂಡ್ ಮೂರು ಪಂದ್ಯಗಳನ್ನು ಆಡಲಿದೆ. ಇಂದಿನಿಂದ ಪಂದ್ಯ ಆರಂಭಗೊಳ್ಳಬೇಕಿತ್ತು.

Published On - 5:54 pm, Fri, 4 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ