AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England Test Series: ತಂಡಕ್ಕೆ ಮರಳಿದ ಉಮೇಶ ಯಾದವ್, ಶಾರ್ದುಲ್ ಠಾಕೂರ್​ಗೆ ಕೊಕ್

ವೇಗದ ಬೌಲರ್ ಶಾರ್ದುಲ್ ಠಾಕೂರ್ ಸ್ಥಾನದಲ್ಲಿ ಆಸ್ಟ್ರೇಲಿಯಾದಲ್ಲಿ ಗಾಯಗೊಂಡು ಸರಣಿ ಮಧ್ಯಭಾಗದಲ್ಲೇ ಸ್ವದೇಶಕ್ಕೆ ಮರಳಿದ್ದ ಉಮೇಶ ಯಾದವ್​ರನ್ನು ಬಿಸಿಸಿಐ ಭಾರತ ತಂಡಕ್ಕೆ ಆಯ್ಕೆ ಮಾಡಿದೆ.

India vs England Test Series: ತಂಡಕ್ಕೆ ಮರಳಿದ ಉಮೇಶ ಯಾದವ್, ಶಾರ್ದುಲ್ ಠಾಕೂರ್​ಗೆ ಕೊಕ್
ಉಮೇಶ್ ಯಾದವ್
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 17, 2021 | 6:15 PM

Share

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್​ನಲ್ಲಿ 317 ರನ್​ಗಳ ಆಧಿಕಾರಯುತ ಜಯ ಗಳಿಸಿದ ಭಾರತೀಯ ತಂಡದಲ್ಲಿ ಅಹಮದಾಬಾದ್​ನಲ್ಲಿ ನಡೆಯುವ ಮೂರನೇ ಮತ್ತು ನಾಲ್ಕನೇ ಟೆಸ್ಟ್​ ಪಂದ್ಯಗಳಿಗೆ ಕೇವಲ ಒಂದು ಬದಲಾವಣೆಯನ್ನು ಮಾಡಲಾಗಿದೆ. ಕೊನೆಯೆರಡು ಟೆಸ್ಟ್​ಗಳಿಗೆ ತಂಡವನ್ನು ಪ್ರಕಟಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಯ್ಕೆ ಸಮಿತಿಯು ವೇಗದ ಬೌಲರ್ ಶಾರ್ದುಲ್ ಠಾಕೂರ್ ಸ್ಥಾನದಲ್ಲಿ ಆಸ್ಟ್ರೇಲಿಯಾದಲ್ಲಿ ಗಾಯಗೊಂಡು ಸರಣಿ ಮಧ್ಯಭಾಗದಲ್ಲೇ ಸ್ವದೇಶಕ್ಕೆ ಮರಳಿದ್ದ ಉಮೇಶ ಯಾದವ್​ರನ್ನು ಆಯ್ಕೆ ಮಾಡಿದೆ. ಮೂರು ಮತ್ತು ನಾಲ್ಕನೇ ಟೆಸ್ಟ್​ ಪಂದ್ಯಗಳೆರಡೂ ಅಹಮದಾಬಾದಿನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಫೆಬ್ರುವರಿ 20 ರಿಂದ ಆರಂಭವಾಗಲಿರುವ ವಿಜಯ ಹಜಾರೆ ಟ್ರೋಫಿಯಲ್ಲಿ ಅಡಲು ಸಾಧ್ಯವಾಗುವಂತೆ ಠಾಕೂರ್​ ಅವರನ್ನು ಭಾರತೀಯ ಟೀಮಿನಿಂದ ಬಿಡುಗಡೆ ಮಾಡಲಾಗಿದೆ.

‘ಅಂತಿಮ ಫಿಟ್ನೆಸ್ ಟೆಸ್ಟ್ ಆದ ನಂತರ ಉಮೇಶ್ ಯಾದವ್ ಟೀಮನ್ನು ಅಹಮದಾಬಾದಿನಲ್ಲಿ ಸೇರಿಕೊಳ್ಳಲಿದ್ದಾರೆ. ಶಾರ್ದುಲ್ ಠಾಕೂರ್ ಅವರನ್ನು ಟೀಮಿನಿಂದ ಬಿಡುಗಡೆ ಮಾಡಲಾಗಿದೆ. ಅವರು ವಿಜಯ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಆಡಬಹುದಾಗಿದೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Team India

ಎರಡನೇ ಟೆಸ್ಟ್ ಗೆದ್ದ ಟೀಮ್ ಇಂಡಿಯಾ​

ಯಾದವ್​ರಂತೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯಗೊಂ.ಡು ಭಾರತಕ್ಕೆ ಹಿಂತಿರುಗಿದ ಮೊಹಮ್ಮದ್ ಶಮಿ ಅಥವಾ ನವದೀಪ್ ಸೈನಿಯನ್ನು ಭಾರತೀಯ ಟೀಮಿಗೆ ಆಯ್ಕೆ ಮಾಡಬಹುದೆಂದು ನಿರೀಕ್ಷಿಸಿಲಾಗಿತ್ತು. ಅದರೆ ಅವರಿಬ್ಬರೂ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂಬ ವದಂತಿಗಳಿವೆ. ಅವರಿಬ್ಬರಂತೆ ಮೂರು ಮತ್ತು ನಾಲ್ಕನೇ ಟೆಸ್ಟ್​ಗಳಿಗೆ ಅವಕಾಶ ಮಿಸ್ ಮಾಡಿಕೊಂಡಿರುವ ಮತ್ತೊಬ್ಬ ನತದೃಷ್ಟ ಆಟಗಾರನೆಂದರೆ ಆಲ್​ರೌಂಡರ್ ರವೀಂದ್ರ ಜಡೇಜಾ.

ಇದನ್ನೂ ಓದಿ: India vs England | ಟೀಂ ಇಂಡಿಯಾಕ್ಕೆ ಆಘಾತ, ಇಂಜುರಿಯಿಂದ ಚೇತರಿಸಿಕೊಳ್ಳದ ಜಡೇಜಾ ಇಂಗ್ಲೆಂಡ್ ಟೆಸ್ಟ್​ ಸರಣಿಯಿಂದ ಔಟ್..!

ಅಹಮದಾಬಾದ್​ ಟೆಸ್ಟ್​ಗಳಿಗೆ ಭಾರತದ ತಂಡ ಇಂತಿದೆ.

ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್​ವಾಲ್, ಶುಭ್ಮನ್​ ಗಿಲ್, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಮಹಮ್ಮದ್​ ಸಿರಾಜ್.

ಬುಧವಾರದಂದು ಸಭೆ ಸೇರಿದ ಆಯ್ಕೆ ಸಮಿತಿಯು ಐವರು ನೆಟ್ ಬೌಲರ್​ಗಳನ್ನು ಹಾಗೂ ಇಬ್ಬರು ಸ್ಟ್ಯಾಂಡ್​ಬೈ ಅಟಗಾರರನ್ನೂ ಹೆಸರಿಸಿತು.

ನೆಟ್ ಬೌಲರ್​ಗಳು: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್

ಸ್ಟ್ಯಾಂಡ್ ಬೈ ಆಟಗಾರರು: ಕೆಎಸ್ ಭರತ್, ರಾಹುಲ್ ಚಹರ್

Published On - 5:12 pm, Wed, 17 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್