AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷದ ನನ್ನ ಮಗನನ್ನು ನನ್ನೊಟ್ಟಿಗೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ

ತಾನು ಒಂದು ತಿಂಗಳು ವಿದೇಶದಲ್ಲಿರಬೇಕಾಗಿರುವುದರಿಂದ ಎರಡು ವರ್ಷದ ಮಗುವನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಸಾನಿಯಾ ಹೇಳಿದ್ದಾರೆ.

ಎರಡು ವರ್ಷದ ನನ್ನ ಮಗನನ್ನು ನನ್ನೊಟ್ಟಿಗೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ
ಮಗನೊಂದಿಗೆ ಸಾನಿಯಾ ಮಿರ್ಜಾ
ಪೃಥ್ವಿಶಂಕರ
| Edited By: |

Updated on: May 20, 2021 | 8:12 AM

Share

ಜೂನ್ 6 ರಂದು ನಾಟಿಂಗ್ಹ್ಯಾಮ್ ಓಪನ್ ಪಂದ್ಯಾವಳಿಯಲ್ಲಿ ಸಾನಿಯಾ ಭಾಗವಹಿಸಲಿದ್ದು, ಜೂನ್ 14 ರಂದು ಬರ್ಮಿಂಗ್ಹ್ಯಾಮ್ ಓಪನ್, ಜೂನ್ 20 ರಂದು ಈಸ್ಟ್ಬೋರ್ನ್ ಓಪನ್ ಮತ್ತು ಜೂನ್ 28 ರಂದು ವಿಂಬಲ್ಡನ್ ಗ್ರ್ಯಾಂಡ್ ಸ್ಲ್ಯಾಮ್​ನಲ್ಲಿ ಭಾಗವಹಿಸಲಿದ್ದಾರೆ. ನಾಟಿಂಗ್ಹ್ಯಾಮ್ಗೆ ಪ್ರಯಾಣಿಸಲು ಸಾನಿಯಾ ಅವರಿಗೆ ವೀಸಾ ನೀಡಲಾಗಿದ್ದರೂ, ಭಾರತೀಯ ಪ್ರಯಾಣಿಕರ ಮೇಲಿನ ಪ್ರಯಾಣದ ನಿರ್ಬಂಧದಿಂದಾಗಿ ಅವರ ಮಗ ಮತ್ತು ಅವರ ಉಸ್ತುವಾರಿ ಯುಕೆ ವೀಸಾಗಳನ್ನು ಪಡೆಯಲು ಸಾಧ್ಯವಾಗಿಲ್ಲ.

ಕ್ರೀಡಾ ಸಚಿವಾಲಯದ ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್ (ಟಾಪ್ಸ್) ನ ಭಾಗವಾಗಿರುವ ಸಾನಿಯಾ, ತನ್ನ ಮಗ ಮತ್ತು ಅವರ ಉಸ್ತುವಾರಿ ವೀಸಾವನ್ನು ಪಡೆದುಕೊಳ್ಳುವ ಸಲುವಾಗಿ ಸಚಿವಾಲಯದ ಸಹಾಯಕ್ಕಾಗಿ ಕೋರಿದ್ದಾರೆ. ತಾನು ಒಂದು ತಿಂಗಳು ವಿದೇಶದಲ್ಲಿರಬೇಕಾಗಿರುವುದರಿಂದ ಎರಡು ವರ್ಷದ ಮಗುವನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಸಾನಿಯಾ ಹೇಳಿದ್ದಾರೆ.

ಈ ಮನವಿಯನ್ನು ತಕ್ಷಣವೇ ಕ್ರೀಡಾ ಸಚಿವಾಲಯ ಕೈಗೆತ್ತಿಕೊಂಡಿದ್ದು, ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಮೂಲಕ ಯುಕೆಯಲ್ಲಿ ಈ ವಿಷಯವನ್ನು ಪರಿಶೀಲಿಸುವಂತೆ ಕೋರಿ ಎಂಇಎಗೆ ಈಗಾಗಲೇ ಪತ್ರ ಕಳುಹಿಸಲಾಗಿದೆ.

ಸಾನಿಯಾ ಅವರ ಈ ವಿನಂತಿಯನ್ನು ಸ್ವೀಕರಿಸಿದ್ದೇವೆ ಸಚಿವಾಲಯದ ಪ್ರಯತ್ನದ ಕುರಿತು ಮಾತನಾಡಿದ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಕಿರೆನ್ ರಿಜಿಜು, ನಾವು ಕೆಲವು ದಿನಗಳ ಹಿಂದೆಯೇ ಸಾನಿಯಾ ಅವರ ಈ ವಿನಂತಿಯನ್ನು ಸ್ವೀಕರಿಸಿದ್ದೇವೆ. ಹಾಗೂ ತಾಯಿಯಾಗಿ ಸಾನಿಯಾ ತಮ್ಮೊಂದಿಗೆ ಇಬ್ಬರನ್ನು ಕರೆದೊಯ್ಯಲು ಅವಕಾಶ ನೀಡುವುದು ಮುಖ್ಯ ಎಂದು ನಾನು ಭಾವಿಸಿದ್ದೇವೆ. ಅಲ್ಲದೆ 2 ವರ್ಷದ ಮಗನನ್ನು ತನ್ನ ಜೊತೆಯಲ್ಲೆ ಕರೆದುಕೊಂಡು ಹೋಗುವುದರಿಂದ ಸಾನಿಯಾ, ತನ್ನ ಮಗುವಿನ ಬಗ್ಗೆ ಚಿಂತೆ ಮಾಡದೆ ಮುಕ್ತ ಮನಸ್ಸಿನಿಂದ ಆಟದಲ್ಲಿ ಭಾಗವಹಿಸಬಹುದು.

ಹಾಗಾಗಿ ನಾನು ಈ ವಿನಂತಿಯನ್ನು ಅಂಗೀಕರಿಸಿದ್ದೇವೆ ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಎಂಇಎ ಜೊತೆ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕ್ರೀಡಾ ಸಚಿವಾಲಯದ ಪ್ರಯತ್ನವು ಯಾವಾಗಲೂ ನಮ್ಮ ಕ್ರೀಡಾಪಟುಗಳಿಗೆ ಅವಶ್ಯಕವಿರುವ ಎಲ್ಲವನ್ನು ಒದಗಿಸುವುದಾಗಿರುತ್ತದೆ. ಈ ಸಂದರ್ಭದಲ್ಲಿ ಯುಕೆ ಸರ್ಕಾರವು ಅರ್ಹತೆಯನ್ನು ನೋಡಿ ಮಗುವಿಗೆ ಸಾನಿಯಾ ಜೊತೆ ಪ್ರಯಾಣಿಸಲು ಅವಕಾಶ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾದ ಇಂಗ್ಲೆಂಡ್ ಪ್ರವಾಸವನ್ನು ರದ್ದುಗೊಳಿಸಿ, ಸಂಕಷ್ಟದಲ್ಲಿರುವ ಕ್ರೀಡಾಪಟುಗಳ ನೆರವಿಗೆ ಬನ್ನಿ;​ ಎಂಎಲ್​ಸಿ ಮೋಹನ್ ಕೊಂಡಜ್ಜಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ