AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷದ ನನ್ನ ಮಗನನ್ನು ನನ್ನೊಟ್ಟಿಗೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ

ತಾನು ಒಂದು ತಿಂಗಳು ವಿದೇಶದಲ್ಲಿರಬೇಕಾಗಿರುವುದರಿಂದ ಎರಡು ವರ್ಷದ ಮಗುವನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಸಾನಿಯಾ ಹೇಳಿದ್ದಾರೆ.

ಎರಡು ವರ್ಷದ ನನ್ನ ಮಗನನ್ನು ನನ್ನೊಟ್ಟಿಗೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ
ಮಗನೊಂದಿಗೆ ಸಾನಿಯಾ ಮಿರ್ಜಾ
ಪೃಥ್ವಿಶಂಕರ
| Updated By: Skanda|

Updated on: May 20, 2021 | 8:12 AM

Share

ಜೂನ್ 6 ರಂದು ನಾಟಿಂಗ್ಹ್ಯಾಮ್ ಓಪನ್ ಪಂದ್ಯಾವಳಿಯಲ್ಲಿ ಸಾನಿಯಾ ಭಾಗವಹಿಸಲಿದ್ದು, ಜೂನ್ 14 ರಂದು ಬರ್ಮಿಂಗ್ಹ್ಯಾಮ್ ಓಪನ್, ಜೂನ್ 20 ರಂದು ಈಸ್ಟ್ಬೋರ್ನ್ ಓಪನ್ ಮತ್ತು ಜೂನ್ 28 ರಂದು ವಿಂಬಲ್ಡನ್ ಗ್ರ್ಯಾಂಡ್ ಸ್ಲ್ಯಾಮ್​ನಲ್ಲಿ ಭಾಗವಹಿಸಲಿದ್ದಾರೆ. ನಾಟಿಂಗ್ಹ್ಯಾಮ್ಗೆ ಪ್ರಯಾಣಿಸಲು ಸಾನಿಯಾ ಅವರಿಗೆ ವೀಸಾ ನೀಡಲಾಗಿದ್ದರೂ, ಭಾರತೀಯ ಪ್ರಯಾಣಿಕರ ಮೇಲಿನ ಪ್ರಯಾಣದ ನಿರ್ಬಂಧದಿಂದಾಗಿ ಅವರ ಮಗ ಮತ್ತು ಅವರ ಉಸ್ತುವಾರಿ ಯುಕೆ ವೀಸಾಗಳನ್ನು ಪಡೆಯಲು ಸಾಧ್ಯವಾಗಿಲ್ಲ.

ಕ್ರೀಡಾ ಸಚಿವಾಲಯದ ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್ (ಟಾಪ್ಸ್) ನ ಭಾಗವಾಗಿರುವ ಸಾನಿಯಾ, ತನ್ನ ಮಗ ಮತ್ತು ಅವರ ಉಸ್ತುವಾರಿ ವೀಸಾವನ್ನು ಪಡೆದುಕೊಳ್ಳುವ ಸಲುವಾಗಿ ಸಚಿವಾಲಯದ ಸಹಾಯಕ್ಕಾಗಿ ಕೋರಿದ್ದಾರೆ. ತಾನು ಒಂದು ತಿಂಗಳು ವಿದೇಶದಲ್ಲಿರಬೇಕಾಗಿರುವುದರಿಂದ ಎರಡು ವರ್ಷದ ಮಗುವನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಸಾನಿಯಾ ಹೇಳಿದ್ದಾರೆ.

ಈ ಮನವಿಯನ್ನು ತಕ್ಷಣವೇ ಕ್ರೀಡಾ ಸಚಿವಾಲಯ ಕೈಗೆತ್ತಿಕೊಂಡಿದ್ದು, ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಮೂಲಕ ಯುಕೆಯಲ್ಲಿ ಈ ವಿಷಯವನ್ನು ಪರಿಶೀಲಿಸುವಂತೆ ಕೋರಿ ಎಂಇಎಗೆ ಈಗಾಗಲೇ ಪತ್ರ ಕಳುಹಿಸಲಾಗಿದೆ.

ಸಾನಿಯಾ ಅವರ ಈ ವಿನಂತಿಯನ್ನು ಸ್ವೀಕರಿಸಿದ್ದೇವೆ ಸಚಿವಾಲಯದ ಪ್ರಯತ್ನದ ಕುರಿತು ಮಾತನಾಡಿದ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಕಿರೆನ್ ರಿಜಿಜು, ನಾವು ಕೆಲವು ದಿನಗಳ ಹಿಂದೆಯೇ ಸಾನಿಯಾ ಅವರ ಈ ವಿನಂತಿಯನ್ನು ಸ್ವೀಕರಿಸಿದ್ದೇವೆ. ಹಾಗೂ ತಾಯಿಯಾಗಿ ಸಾನಿಯಾ ತಮ್ಮೊಂದಿಗೆ ಇಬ್ಬರನ್ನು ಕರೆದೊಯ್ಯಲು ಅವಕಾಶ ನೀಡುವುದು ಮುಖ್ಯ ಎಂದು ನಾನು ಭಾವಿಸಿದ್ದೇವೆ. ಅಲ್ಲದೆ 2 ವರ್ಷದ ಮಗನನ್ನು ತನ್ನ ಜೊತೆಯಲ್ಲೆ ಕರೆದುಕೊಂಡು ಹೋಗುವುದರಿಂದ ಸಾನಿಯಾ, ತನ್ನ ಮಗುವಿನ ಬಗ್ಗೆ ಚಿಂತೆ ಮಾಡದೆ ಮುಕ್ತ ಮನಸ್ಸಿನಿಂದ ಆಟದಲ್ಲಿ ಭಾಗವಹಿಸಬಹುದು.

ಹಾಗಾಗಿ ನಾನು ಈ ವಿನಂತಿಯನ್ನು ಅಂಗೀಕರಿಸಿದ್ದೇವೆ ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಎಂಇಎ ಜೊತೆ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕ್ರೀಡಾ ಸಚಿವಾಲಯದ ಪ್ರಯತ್ನವು ಯಾವಾಗಲೂ ನಮ್ಮ ಕ್ರೀಡಾಪಟುಗಳಿಗೆ ಅವಶ್ಯಕವಿರುವ ಎಲ್ಲವನ್ನು ಒದಗಿಸುವುದಾಗಿರುತ್ತದೆ. ಈ ಸಂದರ್ಭದಲ್ಲಿ ಯುಕೆ ಸರ್ಕಾರವು ಅರ್ಹತೆಯನ್ನು ನೋಡಿ ಮಗುವಿಗೆ ಸಾನಿಯಾ ಜೊತೆ ಪ್ರಯಾಣಿಸಲು ಅವಕಾಶ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾದ ಇಂಗ್ಲೆಂಡ್ ಪ್ರವಾಸವನ್ನು ರದ್ದುಗೊಳಿಸಿ, ಸಂಕಷ್ಟದಲ್ಲಿರುವ ಕ್ರೀಡಾಪಟುಗಳ ನೆರವಿಗೆ ಬನ್ನಿ;​ ಎಂಎಲ್​ಸಿ ಮೋಹನ್ ಕೊಂಡಜ್ಜಿ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ