AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaviya Maran: ಹೈದರಾಬಾದ್ ಪಂದ್ಯದ ವೇಳೆ ಕ್ಯಾಮರಾ ಕಣ್ಣಿಗೆ ಬೀಳುವ ಈ ಸುಂದರಿ ಯಾರು?

ಈ ಮೊದಲು ಕೂಡ ಕವಿಯಾ ಸಾಕಷ್ಟು ಬಾರಿ ಹೈಲೈಟ್​ ಆಗಿದ್ದಾರೆ. 2021ರ ಐಪಿಎಲ್​ ಹರಾಜಿನ ವೇಳೆಯೂ ಕವಿಯಾ ಕ್ಯಾಮೆರಾ ಕಣ್ಣಿಗೆ ಬಿದ್ದು ಸಾಕಷ್ಟು ವೈರಲ್​ ಆಗಿದ್ದರು.

Kaviya Maran: ಹೈದರಾಬಾದ್ ಪಂದ್ಯದ ವೇಳೆ ಕ್ಯಾಮರಾ ಕಣ್ಣಿಗೆ ಬೀಳುವ ಈ ಸುಂದರಿ ಯಾರು?
ಎಸ್​ಆರ್​ಎಚ್​ನ ಕವಿಯಾ ಮಾರನ್
ರಾಜೇಶ್ ದುಗ್ಗುಮನೆ
| Edited By: |

Updated on:Apr 15, 2021 | 4:03 PM

Share

ಸನ್​ರೈಸರ್ಸ್​ ಹೈದರಾಬಾದ್ ಹಾಗೂ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ನಡುವಿನ ಮ್ಯಾಚ್​ ವೇಳೆ ಹೆಚ್ಚು ಗಮನ ಸೆಳೆದಿದ್ದು ಪೆವಿಲಿಯನ್​ನಲ್ಲಿ ಕುಳಿತು ಸನ್​​ ರೈಸರ್ಸ್​ ಹೈದರಾಬಾದ್​ ತಂಡವನ್ನು ಬೆಂಬಲಿಸುತ್ತಿದ್ದಈ ಸುಂದರಿ. ಪ್ರತೀ ಬಾರಿ ಎಸ್​ಆರ್​ಎಚ್​ ಪಂದ್ಯದ ವೇಳೆ ಇವರು ಹೆಚ್ಚು ಗಮನ ಸೆಳೆಯುತ್ತಾರೆ. ಕ್ಯಾಮೆರಾ ಕಣ್ಣಿಗೂ ಬೀಳುತ್ತಾರೆ. ಅಷ್ಟಕ್ಕೂ ಯಾರು ಇವರು? ಇವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ. ಇವರ ಹೆಸರು ಕವಿಯಾ ಮಾರನ್​. ಇವರು ಸನ್​​ ರೈಸರ್ಸ್​ ಹೈದರಾಬಾದ್ ತಂಡದ ಸಿಇಒ! ವಯಸ್ಸು 29 ವರ್ಷ. ಕವಿಯಾ ಸನ್​ ನೆಟ್ವರ್ಕ್​ ಮಾಲೀಕ ಕಲಾನಿಧಿ ಮಾರನ್​ ಅವರ ಮಗಳು. ಸನ್​ ರೈಸರ್ಸ್​ ಹೈದರಾಬಾದ್ ತಂಡದ ಮಾಲಿಕತ್ವವನ್ನು ಸನ್​ ನೆಟ್ವರ್ಕ್​ ಹೊಂದಿದೆ. ಹೀಗಾಗಿ, ತಮ್ಮ ತಂಡವನ್ನು ಬೆಂಬಲಿಸೋಕೆ ಪ್ರತಿ ಪಂದ್ಯಕ್ಕೂ ಕವಿಯಾ ಆಗಮಿಸುತ್ತಾರೆ.

ಆರ್​ಸಿಬಿ ಹಾಗೂ ಎಸ್​ಆರ್​ಎಚ್​ ನಡುವಣ ಪಂದ್ಯದ 16ನೇ ಓವರ್​ ವರೆಗೂ ಗೆಲುವು ಹೈದರಾಬಾದ್ ಕಡೆಗೇ ಇತ್ತು. ಹೈದರಾಬಾದ್ ತಂಡದ ನಾಯಕ ಡೇವಿಡ್​ ವಾರ್ನರ್​ ಬೌಂಡರಿ ಬಾರಿಸಿದಾಗೆಲ್ಲ ಕವಿಯಾ ಮೊಗದಲ್ಲಿ ಮಂದಹಾಸ ಮೂಡುತ್ತಿತ್ತು. ಆದರೆ, 17ನೇ ಓವರ್​ನಲ್ಲಿ ಶಹಬಾಜ್​ ಅಹ್ಮದ್​ ಮೂರು ವಿಕೆಟ್​ ಕೀಳುವ ಮೂಲಕ ಎಸ್​ಆರ್​ಎಚ್​ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಆಗ ಕವಿಯಾ ಬೇಸರ ಹೊರ ಹಾಕಿದ್ದರು. ಈ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.‘

ಅಂದಹಾಗೆ, ಈ ಮೊದಲು ಕೂಡ ಕವಿಯಾ ಸಾಕಷ್ಟು ಬಾರಿ ಹೈಲೈಟ್​ ಆಗಿದ್ದಾರೆ. 2021ರ ಐಪಿಎಲ್​ ಹರಾಜಿನ ವೇಳೆಯೂ ಕವಿಯಾ ಕ್ಯಾಮೆರಾ ಕಣ್ಣಿಗೆ ಬಿದ್ದು ಸಾಕಷ್ಟು ವೈರಲ್​ ಆಗಿದ್ದರು. ನಿನ್ನೆಯ ಪಂದ್ಯದಲ್ಲೂ ಅವರು ಸಾಕಷ್ಟು ಹೈಲೈಟ್​ ಆಗಿದ್ದಾರೆ.

ಇದನ್ನೂ ಓದಿ: SRH vs RCB: ಕೈತಪ್ಪಿ ಹೋಗಿದ್ದ ಪಂದ್ಯಕ್ಕೆ ಟರ್ನ್​ ನೀಡಿದ್ದು ಶಹಬಾಜ್​ ಮಾಡಿದ ಆ ಒಂದು ಓವರ್​!

Published On - 3:53 pm, Thu, 15 April 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ