AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

IPL Sunrisers Hyderabad vs Rajasthan Royals in Kannada Playing XI: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಬ್ರಿಜೇಶ್ ಶರ್ಮಾ ಮತ್ತು ಶಿಮ್ರಾನ್ ಹೆಟ್ಮೈರ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ.

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ
Srh Vs Rr Toss
ಪೃಥ್ವಿಶಂಕರ
|

Updated on:Apr 13, 2026 | 7:22 PM

Share

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ, ರಾಜಸ್ಥಾನದ ಗೆಲುವಿನ ಓಟವನ್ನು ನಿಲ್ಲಿಸಿ ಗೆಲುವಿನ ಹಾದಿಗೆ ಮರಳಲು ಹೈದರಾಬಾದ್‌ಗೆ ದೊಡ್ಡ ಸವಾಲು ಎದುರಾಗಿದೆ. ಆದ್ದರಿಂದ, ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುತ್ತಾ ಅಥವಾ ರಾಜಸ್ಥಾನ ಸತತ ಐದನೇ ಗೆಲ್ಲುವು ಸಾಧಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಟಾಸ್ ಗೆದ್ದ ರಾಜಸ್ಥಾನ

ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಬ್ರಿಜೇಶ್ ಶರ್ಮಾ ಮತ್ತು ಶಿಮ್ರಾನ್ ಹೆಟ್ಮೈರ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ. ಹಾಗೆಯೇ ತವರು ನೆಲದಲ್ಲಿ ಆಡುತ್ತಿರುವ ಹೈದರಾಬಾದ್ ತಂಡ ಕೂಡ ಎರಡು ಬದಲಾವಣೆಗಳನ್ನು ಮಾಡಿ ಪ್ರಫುಲ್ ಹಿಂಗೆ ಮತ್ತು ಹರ್ಷಲ್ ಪಟೇಲ್‌ಗೆ ವಿಶ್ರಾಂತಿ ನೀಡಿದೆ.

ಹೆಡ್ ಟು ಹೆಡ್ ದಾಖಲೆ

ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 21 ಬಾರಿ ಮುಖಾಮುಖಿಯಾಗಿವೆ. ಈ 21 ಪಂದ್ಯಗಳಲ್ಲಿ ಹೈದರಾಬಾದ್ 12 ಪಂದ್ಯಗಳಲ್ಲಿ ರಾಜಸ್ಥಾನವನ್ನು ಸೋಲಿಸಿದೆ. ಇತ್ತ ರಾಜಸ್ಥಾನ 9 ಪಂದ್ಯಗಳಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಿದೆ. ಈಗ 22 ನೇ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಪಾಯಿಂಟ್ ಪಟ್ಟಿಯಲ್ಲಿ 2 ತಂಡಗಳ ಸ್ಥಾನ

ಆಡಿದ ನಾಲ್ಕು ಪಂದ್ಯಗಳಲ್ಲೂ ರಾಜಸ್ಥಾನ ಜಯ ಸಾಧಿಸಿದ್ದು, +2.055 ರ ನೆಟ್ ರನ್​ರೇಟ್​ನಲ್ಲಿ ತನ್ನ ಖಾತೆಯಲ್ಲಿ 8 ಅಂಕಗಳನ್ನು ಹೊಂದಿದೆ. ಇತ್ತ ಹೈದರಾಬಾದ್ 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು -0.024 ನೆಟ್ ರನ್​ರೇಟ್​ ಹಾಗೂ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್/ನಾಯಕ), ಹೆನ್ರಿಚ್ ಕ್ಲಾಸೆನ್, ಸಲಿಲ್ ಅರೋರಾ, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಶಿವಂಗ್ ಕುಮಾರ್, ಪ್ರಫುಲ್ ಹಿಂಗೆ, ಇಶಾನ್ ಮಾಲಿಂಗ.

ಇಂಪ್ಯಾಕ್ಟ್ ಪ್ಲೇಯರ್: ಆರ್ ಸ್ಮರಣ್, ಸಾಕಿಬ್ ಹುಸೇನ್, ಲಿಯಾಮ್ ಲಿವಿಂಗ್ಸ್ಟೋನ್, ಶಿವಂ ಮಾವಿ, ಹರ್ಷಲ್ ಪಟೇಲ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.

ಇಂಪ್ಯಾಕ್ಟ್ ಪ್ಲೇಯರ್: ವೈಭವ್ ಸೂರ್ಯವಂಶಿ, ಶಿಮ್ರಾನ್ ಹೆಟ್ಮೆಯರ್, ರವಿ ಸಿಂಗ್, ಶುಭಂ ದುಬೆ, ಬ್ರಿಜೇಶ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Mon, 13 April 26

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ