AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

349 ರನ್ ಬಾರಿಸಿಯೂ ಅಫ್ಘನ್ ವಿರುದ್ಧ ಸೋತ ಟೀಂ ಇಂಡಿಯಾ

India A Loses to Afghanistan A: ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಎ ತಂಡ ಅಫ್ಘಾನಿಸ್ತಾನ ಎ ವಿರುದ್ಧ ಸೋತಿದೆ. ಭಾರತ 349 ರನ್ ಗಳಿಸಿದರೂ, ಮಳೆ ಅಡ್ಡಿಪಡಿಸಿದ ಕಾರಣ ಡಕ್ವರ್ತ್ ಲೂಯಿಸ್ ನಿಯಮದನ್ವಯ ಅಫ್ಘಾನಿಸ್ತಾನ ಎ ತಂಡವನ್ನು ವಿಜೇತರೆಂದು ಘೋಷಿಸಲಾಯಿತು. ಪ್ರಭ್ಸಿಮ್ರಾನ್ ಸಿಂಗ್, ರುತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಳೆಪೀಡಿತ ಪಂದ್ಯದಲ್ಲಿ ವ್ಯರ್ಥವಾಯಿತು.

349 ರನ್ ಬಾರಿಸಿಯೂ ಅಫ್ಘನ್ ವಿರುದ್ಧ ಸೋತ ಟೀಂ ಇಂಡಿಯಾ
India A
ಪೃಥ್ವಿಶಂಕರ
|

Updated on: Jun 11, 2026 | 7:21 PM

Share

ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ (Sri Lanka Triangular Series) ಭಾರತ ಎ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ಪಡೆ ( Afghanistan A vs India A) 349 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕಿದ ಹೊರತಾಗಿಯೂ ಸೋಲಿಗೆ ಕೊರಳೊಡ್ಡಬೇಕಾಯಿತು. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ ಮಳೆ ಪೀಡಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 49 ಓವರ್‌ಗಳಲ್ಲಿ 349 ರನ್ ಕಲೆಹಾಕಿತು. ಆದರೆ ಅಫ್ಘನ್ ಇನ್ನಿಂಗ್ಸ್ ಆರಂಭಕ್ಕೂ ಮುನ್ನ ಮಳೆ ಬಂದ ಕಾರಣ ಪಂದ್ಯವನ್ನು 38 ಓವರ್​ಗಳಿಗೆ ಸೀಮಿತಗೊಳಿಸಲಾಯಿತು.

38 ಓವರ್​ಗಳಲ್ಲಿ 294 ರನ್ ಗುರಿ

ಹೀಗಾಗಿ ಅಫ್ಘನ್ ತಂಡಕ್ಕೆ 38 ಓವರ್​ಗಳಲ್ಲಿ 294 ರನ್ ಗುರಿ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ಅಫ್ಘನ್ ತಂಡ 25.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿದ್ದಾಗ ಮತ್ತೆ ಮಳೆ ಆಟಕ್ಕೆ ಅಡ್ಡಿಪಡಿಸಿತು. ಎಷ್ಟೇ ಕಾದರೂ ಮಳೆ ನಿಲ್ಲದ ಕಾರಣ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ ಅಂಪೈರ್​ಗಳು ಅಫ್ಘಾನಿಸ್ತಾನ ತಂಡವನ್ನು ವಿಜಯಿ ಎಂದು ಘೋಷಿಸಿದರು.

ಭಾರತದ ಭರ್ಜರಿ ಬ್ಯಾಟಿಂಗ್

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಪರ ವೈಭವ್ 44 ರನ್ ಗಳಿಸಿದರೆ, ಪ್ರಿಯಾಂಶ್ ಆರ್ಯ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಪ್ರಭ್ಸಿಮ್ರಾನ್ ಸಿಂಗ್ 39 ಎಸೆತಗಳಲ್ಲಿ ಅರ್ಧಶತಕ ಗಳಿಸಿ 84 ರನ್​ಗಳ ಇನ್ನಿಂಗ್ಸ್ ಆಡಿದರು. ಅದ್ಭುತ ಫಾರ್ಮ್​ನಲ್ಲಿರುವ ರುತುರಾಜ್ ಗೈಕ್ವಾಡ್ 65 ಎಸೆತಗಳಲ್ಲಿ ಅರ್ಧಶತಕ ಗಳಿಸಿ 66 ರನ್ ಗಳಿಸಿ ಔಟಾದರು. ಆದರೆ ಆಯುಷ್ ಬದೋನಿ ತಮ್ಮ ಖಾತೆ ತೆರೆಯಲೂ ವಿಫಲರಾದರು. ನಾಯಕ ತಿಲಕ್ ವರ್ಮಾ 60 ಎಸೆತಗಳಲ್ಲಿ ಅರ್ಧಶತಕ ಪೂರೈಸಿ 66 ರನ್ ಗಳಿಸಿ ಔಟಾದರೆ, ವಿಪ್ರಜ್ ನಿಗಮ್ 8 ರನ್ ಗಳಿಸುವಷ್ಟರಲ್ಲಿ ವಿಕೆಟ್ ಕಳೆದುಕೊಂಡರು. ಇತ್ತ ಅಫ್ಘಾನಿಸ್ತಾನ ಪರ ಅಬ್ದುಲ್ಲಾ ಅಹ್ಮದ್‌ಜೈ 5 ವಿಕೆಟ್‌ಗಳ ಗೊಂಚಲು ಪಡೆದರು.

ಅಫ್ಘನ್ ತಂಡದಿಂದಲೂ ತಕ್ಕ ಹೋರಾಟ

ಮೇಲೆ ಹೇಳಿದಂತೆ ಮಳೆಯಿಂದಾಗಿ ಅಫ್ಘನ್ ತಂಡಕ್ಕೆ 38 ಓವರ್​ಗಳಲ್ಲಿ 294 ರನ್​ಗಳ ಗುರಿ ನಿಗಧಿಪಡಿಸಲಾಯಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ‘ಎ’ ಪರ ನಾಯಕ ಇಮ್ರಾನ್ ಮಿರ್ ಅಜೇಯ 75 ರನ್ ಗಳಿಸಿದರೆ, ಬಹೀರ್ ಶಾ ಅಜೇಯ 51 ರನ್ ಬಾರಿಸಿದರು. ಹಸನ್ ಇಸಾಖಿಲ್ 29 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಅಫ್ಘಾನ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಅಂತಿಮವಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಡಿಎಲ್ಎಸ್ ವಿಧಾನದ ಮೂಲಕ ಅಫ್ಘನ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಇತ್ತ ಭಾರತ ಎ ಪರ ಅರ್ಷದ್ ಖಾನ್ ಮತ್ತು ಅನುಕುಲ್ ರಾಯ್ ಮೊದಲ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್