AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kusal Mendis: ಫೀಲ್ಡಿಂಗ್ ವೇಳೆ ಎದೆನೋವು: ಲಂಕಾ ಆಟಗಾರ ಆಸ್ಪತ್ರೆಗೆ ದಾಖಲು

Sri Lanka's Kusal Mendis: ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಅರ್ಧಶತಕ ಬಾರಿಸಿದ್ದ ಮೆಂಡಿಸ್, ಎರಡನೇ ಇನ್ನಿಂಗ್ಸ್‌ನಲ್ಲಿ ಅಬ್ಬರದ 48 ರನ್ ಗಳಿಸಿದರು.

Kusal Mendis: ಫೀಲ್ಡಿಂಗ್ ವೇಳೆ ಎದೆನೋವು: ಲಂಕಾ ಆಟಗಾರ ಆಸ್ಪತ್ರೆಗೆ ದಾಖಲು
Kusal Mendis
TV9 Web
| Edited By: |

Updated on: May 23, 2022 | 9:08 PM

Share

ಶ್ರೀಲಂಕಾ ಮತ್ತು ಬಾಂಗ್ಲಾದೇಶ (SL vs BAN 2nd Test) ನಡುವಿನ ಮಿರ್‌ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ದಿನದಂದು ಶ್ರೀಲಂಕಾದ ಬ್ಯಾಟ್ಸ್‌ಮನ್ ಕುಶಾಲ್ ಮೆಂಡಿಸ್ (Kusal Mendis) ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಢಾಕಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂದ್ಯದ ಫೀಲ್ಡಿಂಗ್ ವೇಳೆ ಎದೆನೋವು ಕಾಣಿಸಿಕೊಂಡಿದ್ದರಿಂದ ಮೆಂಡಿಸ್ ಮೈದಾನದಿಂದ ಹೊರನಡೆದಿದ್ದರು. ಇದಾಗ್ಯೂ ಮುನ್ನೆಚ್ಚರಿಕೆಯ ಸಲುವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಪಂದ್ಯದ 23 ನೇ ಓವರ್‌ ವೇಳೆ ದಿಢೀರಣೆ ಮೆಂಡಿಸ್ ಮೈದಾನದಲ್ಲಿ ಮಲಗಿದಾಗ ಎಲ್ಲರಿಗೂ ಆಘಾತವಾಯಿತು. ಕೂಡಲೇ ಮೈದಾನಕ್ಕೆ ಓಡಿ ಬಂದ ವೈದ್ಯಕೀಯ ತಂಡ ತಪಾಸಣೆ ನಡೆಸಿ ಮೈದಾನದಿಂದ ಕರೆದುಕೊಂಡು ಹೋದರು. ಇನ್ನು ಮೈದಾನದಿಂದ ಡ್ರೆಸ್ಸಿಂಗ್ ರೂಮ್‌ಗೆ ತೆರಳುವ ಮಾರ್ಗದಲ್ಲಿ ಮೆಂಡಿಸ್ ಅವರಿಗೆ ಮತ್ತೆ ಎದೆನೋವು ಹೆಚ್ಚಾಗಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಸಿಬಿ ವೈದ್ಯ ಮಂಜೂರ್ ಹುಸೇನ್ ಚೌಧರಿ ಹೇಳಿದ್ದಾರೆ.

ಚೌಧರಿ ಪ್ರಕಾರ, ಪಂದ್ಯಕ್ಕೂ ಮುನ್ನ ಮೆಂಡಿಸ್ ನಿರ್ಜಲೀಕರಣದಿಂದ ಬಳಲುತ್ತಿದ್ದರು. ಎದೆನೋವಿಗೆ ಇದೂ ಒಂದು ಕಾರಣವಾಗಿರಬಹುದು. ಅದೇ ಸಮಯದಲ್ಲಿ, ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಿಂದಲೂ ಇದು ಸಂಭವಿಸಬಹುದು. ಆದರೆ, ಅವರು ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಮತ್ತು ಮೀರ್‌ಪುರ ಟೆಸ್ಟ್‌ನಲ್ಲಿ ಮತ್ತಷ್ಟು ಆಡಲು ಸಾಧ್ಯವಾಗುತ್ತದೆಯೇ ಎಂಬುದು ತಿಳಿದಿಲ್ಲ.

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಮೆಂಡಿಸ್ ಮೊದಲ ಟೆಸ್ಟ್‌ನಲ್ಲಿ ಅರ್ಧಶತಕ ಗಳಿಸಿದ್ದರು. ಈ ಪಂದ್ಯವನ್ನು ಶ್ರೀಲಂಕಾ ತಂಡ ಡ್ರಾ ಮಾಡಿಕೊಳ್ಳುವಲ್ಲಿ ಮೆಂಡಿಸ್ ಪ್ರಮುಖ ಪಾತ್ರ ವಹಿಸಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಅರ್ಧಶತಕ ಬಾರಿಸಿದ್ದ ಮೆಂಡಿಸ್, ಎರಡನೇ ಇನ್ನಿಂಗ್ಸ್‌ನಲ್ಲಿ ಅಬ್ಬರದ 48 ರನ್ ಗಳಿಸಿದರು. ಇದೀಗ ಕುಸಾಲ್ ಮೆಂಡಿಸ್ 2ನೇ ಪಂದ್ಯದಲ್ಲಿ ಆಡಲಿದ್ದಾರಾ ಎಂಬುದು ಇನ್ನೂ ಕೂಡ ಖಚಿತವಾಗಿಲ್ಲ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!