AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?

ಅಥಿಯಾ ಹಾಗೂ ರಾಹುಲ್​ ಇತ್ತೀಚೆಗೆ ಜಾಹೀರಾತೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಜಾಹಿರಾತಿನಲ್ಲಿ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು.

ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?
ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?
TV9 Web
| Edited By: |

Updated on: Jul 16, 2021 | 9:04 PM

Share

ಟೀಂ ಇಂಡಿಯಾ ಆಟಗಾರ ಕೆ.ಎಲ್​. ರಾಹುಲ್​ ಹಾಗೂ ನಟ ಸುನೀಲ್​ ಶೆಟ್ಟಿ ಮಗಳು ಅಥಿಯಾ ಶೆಟ್ಟಿ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಈ ಜೋಡಿ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದು ಈ ಸುದ್ದಿಗೆ ಸಾಕ್ಷ್ಯ ಒದಗಿಸಿದೆ. ಈಗ ಈ ಜೋಡಿ ಬಗ್ಗೆ ಸುನೀಲ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ಮಗಳ ಚಾಯ್ಸ್​ ಬಗ್ಗೆ ಅವರು ಹೇಳಿದ್ದೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅಥಿಯಾ ಹಾಗೂ ರಾಹುಲ್​ ಇತ್ತೀಚೆಗೆ ಜಾಹೀರಾತೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಜಾಹಿರಾತಿನಲ್ಲಿ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ರಾಹುಲ್​-ಅಥಿಯಾ ಕಾಂಬಿನೇಷನ್​ ಸ್ವತಃ ಸುನೀಲ್​ ಶೆಟ್ಟಿಗೆ ಇಷ್ಟವಾಗಿದೆ. ಈ ಜೋಡಿಯನ್ನು ಅವರು  ಗುಡ್ ಲುಕಿಂಗ್​ ಕಪಲ್​ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್ ಪ್ರವಾಸದ ನಿಮಿತ್ತ ಟೀಂ ಇಂಡಿಯಾ ಆಂಗ್ಲರ ನಾಡಿಗೆ ತೆರಳಿದೆ. ರಾಹುಲ್​​ ಜತೆ ಅಥಿಯಾ ಕೂಡ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ, ಇಬ್ಬರೂ ಎಲ್ಲಿಯೂ ಫೋಟೋ ಹಂಚಿಕೊಂಡಿಲ್ಲ. ಈ ಬಗ್ಗೆ ಸುನೀಲ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಥಿಯಾ ಸಹೋದರ ಅಹಾನ್​ ಜತೆಗೆ ಲಂಡನ್​ಗೆ ತೆರಳಿದ್ದಾರೆ ಅಷ್ಟೆ ಎಂದು ಹೇಳುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಅಥಿಯಾ ಶೆಟ್ಟಿ ‘ಹೀರೋ’ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಫ್ಶಾನ್​ ಆಶಿಕ್​ ಬಯೋಪಿಕ್​ನಲ್ಲಿ ಅಥಿಯಾ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಯಾವುದೂ ಅಂತಿಮವಾಗಿಲ್ಲ.

ನ್ಯೂಜಿಲೆಂಡ್​ ಜತೆ ವಿಶ್ವ​​ ಟೆಸ್ಟ್​ ಚಾಂಪಿಯನ್​ ಶಿಪ್​ ಫೈನಲ್​ ಪಂದ್ಯ ಆಡೋಕೆ ಟೀಂ ಇಂಡಿಯಾ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿತ್ತು. ಇದು ಪೂರ್ಣಗೊಂಡಿದ್ದು, ಮುಂಬರುವ ಇಂಗ್ಲೆಂಡ್​ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದೆ.

ಇದನ್ನೂ ಓದಿ: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಇಂಗ್ಲೆಂಡ್ ಕೌಂಟಿ ತಂಡ ಪ್ರಕಟ; ಪಂತ್ ಬದಲು ರಾಹುಲ್​ಗೆ ತಂಡದಲ್ಲಿ ಅವಕಾಶ

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಅಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?