AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?

ಅಥಿಯಾ ಹಾಗೂ ರಾಹುಲ್​ ಇತ್ತೀಚೆಗೆ ಜಾಹೀರಾತೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಜಾಹಿರಾತಿನಲ್ಲಿ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು.

ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?
ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?
TV9 Web
| Edited By: |

Updated on: Jul 16, 2021 | 9:04 PM

Share

ಟೀಂ ಇಂಡಿಯಾ ಆಟಗಾರ ಕೆ.ಎಲ್​. ರಾಹುಲ್​ ಹಾಗೂ ನಟ ಸುನೀಲ್​ ಶೆಟ್ಟಿ ಮಗಳು ಅಥಿಯಾ ಶೆಟ್ಟಿ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಈ ಜೋಡಿ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದು ಈ ಸುದ್ದಿಗೆ ಸಾಕ್ಷ್ಯ ಒದಗಿಸಿದೆ. ಈಗ ಈ ಜೋಡಿ ಬಗ್ಗೆ ಸುನೀಲ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ಮಗಳ ಚಾಯ್ಸ್​ ಬಗ್ಗೆ ಅವರು ಹೇಳಿದ್ದೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅಥಿಯಾ ಹಾಗೂ ರಾಹುಲ್​ ಇತ್ತೀಚೆಗೆ ಜಾಹೀರಾತೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಜಾಹಿರಾತಿನಲ್ಲಿ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ರಾಹುಲ್​-ಅಥಿಯಾ ಕಾಂಬಿನೇಷನ್​ ಸ್ವತಃ ಸುನೀಲ್​ ಶೆಟ್ಟಿಗೆ ಇಷ್ಟವಾಗಿದೆ. ಈ ಜೋಡಿಯನ್ನು ಅವರು  ಗುಡ್ ಲುಕಿಂಗ್​ ಕಪಲ್​ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್ ಪ್ರವಾಸದ ನಿಮಿತ್ತ ಟೀಂ ಇಂಡಿಯಾ ಆಂಗ್ಲರ ನಾಡಿಗೆ ತೆರಳಿದೆ. ರಾಹುಲ್​​ ಜತೆ ಅಥಿಯಾ ಕೂಡ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ, ಇಬ್ಬರೂ ಎಲ್ಲಿಯೂ ಫೋಟೋ ಹಂಚಿಕೊಂಡಿಲ್ಲ. ಈ ಬಗ್ಗೆ ಸುನೀಲ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಥಿಯಾ ಸಹೋದರ ಅಹಾನ್​ ಜತೆಗೆ ಲಂಡನ್​ಗೆ ತೆರಳಿದ್ದಾರೆ ಅಷ್ಟೆ ಎಂದು ಹೇಳುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಅಥಿಯಾ ಶೆಟ್ಟಿ ‘ಹೀರೋ’ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಫ್ಶಾನ್​ ಆಶಿಕ್​ ಬಯೋಪಿಕ್​ನಲ್ಲಿ ಅಥಿಯಾ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಯಾವುದೂ ಅಂತಿಮವಾಗಿಲ್ಲ.

ನ್ಯೂಜಿಲೆಂಡ್​ ಜತೆ ವಿಶ್ವ​​ ಟೆಸ್ಟ್​ ಚಾಂಪಿಯನ್​ ಶಿಪ್​ ಫೈನಲ್​ ಪಂದ್ಯ ಆಡೋಕೆ ಟೀಂ ಇಂಡಿಯಾ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿತ್ತು. ಇದು ಪೂರ್ಣಗೊಂಡಿದ್ದು, ಮುಂಬರುವ ಇಂಗ್ಲೆಂಡ್​ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದೆ.

ಇದನ್ನೂ ಓದಿ: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಇಂಗ್ಲೆಂಡ್ ಕೌಂಟಿ ತಂಡ ಪ್ರಕಟ; ಪಂತ್ ಬದಲು ರಾಹುಲ್​ಗೆ ತಂಡದಲ್ಲಿ ಅವಕಾಶ

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಅಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ