Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?

ಅಥಿಯಾ ಹಾಗೂ ರಾಹುಲ್​ ಇತ್ತೀಚೆಗೆ ಜಾಹೀರಾತೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಜಾಹಿರಾತಿನಲ್ಲಿ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು.

ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?
ಕೆ.ಎಲ್​. ರಾಹುಲ್​ ಹಾಗೂ ಅಥಿಯಾ ಜೋಡಿ ನೋಡಿ ಸುನೀಲ್​ ಶೆಟ್ಟಿ ಹೇಳಿದ್ದೇನು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 16, 2021 | 9:04 PM

ಟೀಂ ಇಂಡಿಯಾ ಆಟಗಾರ ಕೆ.ಎಲ್​. ರಾಹುಲ್​ ಹಾಗೂ ನಟ ಸುನೀಲ್​ ಶೆಟ್ಟಿ ಮಗಳು ಅಥಿಯಾ ಶೆಟ್ಟಿ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಈ ಜೋಡಿ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದು ಈ ಸುದ್ದಿಗೆ ಸಾಕ್ಷ್ಯ ಒದಗಿಸಿದೆ. ಈಗ ಈ ಜೋಡಿ ಬಗ್ಗೆ ಸುನೀಲ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ಮಗಳ ಚಾಯ್ಸ್​ ಬಗ್ಗೆ ಅವರು ಹೇಳಿದ್ದೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅಥಿಯಾ ಹಾಗೂ ರಾಹುಲ್​ ಇತ್ತೀಚೆಗೆ ಜಾಹೀರಾತೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಜಾಹಿರಾತಿನಲ್ಲಿ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ರಾಹುಲ್​-ಅಥಿಯಾ ಕಾಂಬಿನೇಷನ್​ ಸ್ವತಃ ಸುನೀಲ್​ ಶೆಟ್ಟಿಗೆ ಇಷ್ಟವಾಗಿದೆ. ಈ ಜೋಡಿಯನ್ನು ಅವರು  ಗುಡ್ ಲುಕಿಂಗ್​ ಕಪಲ್​ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್ ಪ್ರವಾಸದ ನಿಮಿತ್ತ ಟೀಂ ಇಂಡಿಯಾ ಆಂಗ್ಲರ ನಾಡಿಗೆ ತೆರಳಿದೆ. ರಾಹುಲ್​​ ಜತೆ ಅಥಿಯಾ ಕೂಡ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ, ಇಬ್ಬರೂ ಎಲ್ಲಿಯೂ ಫೋಟೋ ಹಂಚಿಕೊಂಡಿಲ್ಲ. ಈ ಬಗ್ಗೆ ಸುನೀಲ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಥಿಯಾ ಸಹೋದರ ಅಹಾನ್​ ಜತೆಗೆ ಲಂಡನ್​ಗೆ ತೆರಳಿದ್ದಾರೆ ಅಷ್ಟೆ ಎಂದು ಹೇಳುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಅಥಿಯಾ ಶೆಟ್ಟಿ ‘ಹೀರೋ’ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಫ್ಶಾನ್​ ಆಶಿಕ್​ ಬಯೋಪಿಕ್​ನಲ್ಲಿ ಅಥಿಯಾ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಯಾವುದೂ ಅಂತಿಮವಾಗಿಲ್ಲ.

ನ್ಯೂಜಿಲೆಂಡ್​ ಜತೆ ವಿಶ್ವ​​ ಟೆಸ್ಟ್​ ಚಾಂಪಿಯನ್​ ಶಿಪ್​ ಫೈನಲ್​ ಪಂದ್ಯ ಆಡೋಕೆ ಟೀಂ ಇಂಡಿಯಾ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿತ್ತು. ಇದು ಪೂರ್ಣಗೊಂಡಿದ್ದು, ಮುಂಬರುವ ಇಂಗ್ಲೆಂಡ್​ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದೆ.

ಇದನ್ನೂ ಓದಿ: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಇಂಗ್ಲೆಂಡ್ ಕೌಂಟಿ ತಂಡ ಪ್ರಕಟ; ಪಂತ್ ಬದಲು ರಾಹುಲ್​ಗೆ ತಂಡದಲ್ಲಿ ಅವಕಾಶ

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಅಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ
ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ
ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ
ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ
ದೆಹಲಿ: ಗೋಡೆ ಕುಸಿದು ವ್ಯಕ್ತಿ ಸಾವು, ಹಲವರಿಗೆ ಗಾಯ
ದೆಹಲಿ: ಗೋಡೆ ಕುಸಿದು ವ್ಯಕ್ತಿ ಸಾವು, ಹಲವರಿಗೆ ಗಾಯ
ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ
ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ
ಭರ್ಜರಿ ಸೆಂಚುರಿ ಸಿಡಿಸಿದ ರಿಝ್ವಾನ್: ತಂಡಕ್ಕೆ ಸೋಲು..!
ಭರ್ಜರಿ ಸೆಂಚುರಿ ಸಿಡಿಸಿದ ರಿಝ್ವಾನ್: ತಂಡಕ್ಕೆ ಸೋಲು..!
ವಿನಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಜತ್ ಹೇಳಿದ್ದೇನು? ವಿಡಿಯೋ ನೋಡಿ
ವಿನಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಜತ್ ಹೇಳಿದ್ದೇನು? ವಿಡಿಯೋ ನೋಡಿ