ಕರ್ನಾಟಕ ಉತ್ತಮ ಬ್ಯಾಟ್ಸ್​ಮನ್​ಗಳನ್ನು ನೀಡುವ ಫ್ಯಾಕ್ಟರಿಯಿದ್ದಂತೆ! ಈತ ಇಷ್ಟರಲ್ಲೇ ಟೀಂ ಇಂಡಿಯಾದ ಕದ ತಟ್ಟಲಿದ್ದಾನೆ; ಗಾವಸ್ಕರ್

ಪಡಿಕ್ಕಲ್ ಶೀಘ್ರದಲ್ಲೇ ಯಾವುದೇ ಒಂದು ಸ್ವರೂಪದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಆಡುತ್ತಾನೆ ಎಂಬುದರಲ್ಲಿ ನನಗೆ ಆಶ್ಚರ್ಯವಾಗುವುದಿಲ್ಲ. ಪಡಿಕ್ಕಲ್​ ಆ ಸಾಮರ್ಥ್ಯವನ್ನು ಹೊಂದಿರುವುದೇ ಇದಕ್ಕೆ ಕಾರಣ.

ಕರ್ನಾಟಕ ಉತ್ತಮ ಬ್ಯಾಟ್ಸ್​ಮನ್​ಗಳನ್ನು ನೀಡುವ ಫ್ಯಾಕ್ಟರಿಯಿದ್ದಂತೆ! ಈತ ಇಷ್ಟರಲ್ಲೇ ಟೀಂ ಇಂಡಿಯಾದ ಕದ ತಟ್ಟಲಿದ್ದಾನೆ; ಗಾವಸ್ಕರ್
ಸುನಿಲ್ ಗವಾಸ್ಕರ್
Follow us
|

Updated on: Apr 23, 2021 | 3:53 PM

ಭಾರತೀಯ ಕ್ರಿಕೆಟ್ ತಂಡದಲ್ಲಿ, ಯುವ ಆಟಗಾರರು ನಿರಂತರವಾಗಿ ಅವಕಾಶಗಳನ್ನು ಪಡೆಯುತ್ತಿದ್ದಾರೆ ಮತ್ತು ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ಸಾಮಥ್ರ್ಯವನ್ನು ತೋರಿಸುತ್ತಿದ್ದಾರೆ. ಟೀಮ್ ಇಂಡಿಯಾದ ತಂಡದ ಸಾಮರ್ಥ್ಯವು ತುಂಬಾ ಬಲವಾಗಿರಲು ಇದು ಒಂದು ಕಾರಣವಾಗಿದೆ. ಒಳ್ಳೆಯ ವಿಷಯವೆನೆಂದರೆ, ದೇಶೀಯ ಕ್ರಿಕೆಟ್‌ನಲ್ಲಿ ಸತತ ಉತ್ತಮ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾದ ಕದ ತಟ್ಟುತ್ತಿರುವ ಇನ್ನೂ ಅನೇಕ ಯುವ ಆಟಗಾರರಿದ್ದಾರೆ. ಇದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಅವರಿಗೆ ಉತ್ತಮ ವೇದಿಕೆಯಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂಬಂತೆ ಭಾರತೀಯ ಬ್ಯಾಟ್ಸ್‌ಮನ್ ಐಪಿಎಲ್ ವೇದಿಕೆಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾಕ್ಕೆ ಕಾಲಿಡುವ ಸೂಚನೆ ನೀಡಿದ್ದಾರೆ. ಶೀಘ್ರದಲ್ಲೇ 20 ವರ್ಷದ ಭಾರತೀಯ ಬ್ಯಾಟ್ಸ್‌ಮನ್ ಟೀಮ್ ಇಂಡಿಯಾದಲ್ಲಿ ಆಡಲಿದ್ದಾರೆ ಎಂದು ಸುನಿಲ್ ಗಾವಸ್ಕರ್ ಕೂಡ ಭವಿಷ್ಯ ನುಡಿದ್ದಿದ್ದಾರೆ.

ಸತತ ನಾಲ್ಕು ಶತಕಗಳನ್ನು ಮತ್ತು ಮೂರು ಅರ್ಧಶತಕ ವಾಸ್ತವವಾಗಿ, ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಗುರುವಾರ ರನ್ ಸುನಾಮಿಯೇ ನಡೆಯಿತು. ದೇವದತ್ ಪಡಿಕ್ಕಲ್ ಅವರ ಶತಕ ಮತ್ತು ವಿರಾಟ್ ಕೊಹ್ಲಿಯ ಅರ್ಧಶತಕದ ಸಹಾಯದಿಂದ ಆರ್‌ಸಿಬಿ ರಾಜಸ್ಥಾನ ನೀಡಿದ 178 ರನ್ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು. ದೇವದತ್ತ್ 52 ಎಸೆತಗಳಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ ಅಜೇಯ 101 ರನ್ ಗಳಿಸಿದರು. ದೇವದತ್ ಅವರ ಈ ಆಟದಿಂದಾಗಿ ಸುನಿಲ್ ಗವಾಸ್ಕರ್ ತುಂಬಾ ಪ್ರಭಾವಿತರಾಗಿದ್ದಾರೆ. ದೇವದತ್ತ ಪಡಿಕ್ಕಲ್ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿಯ ಏಳು ಪಂದ್ಯಗಳಲ್ಲಿ ಸತತ ನಾಲ್ಕು ಶತಕಗಳನ್ನು ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದರು.

ಕರ್ನಾಟಕ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ನೀಡುವ ಫ್ಯಾಕ್ಟರಿ ಸುನಿಲ್ ಗಾವಸ್ಕರ್ ಮಾತನಾಡಿ, ಪಡಿಕ್ಕಲ್ ಶೀಘ್ರದಲ್ಲೇ ಯಾವುದೇ ಒಂದು ಸ್ವರೂಪದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಆಡುತ್ತಾನೆ ಎಂಬುದರಲ್ಲಿ ನನಗೆ ಆಶ್ಚರ್ಯವಾಗುವುದಿಲ್ಲ. ಪಡಿಕ್ಕಲ್​ ಆ ಸಾಮರ್ಥ್ಯವನ್ನು ಹೊಂದಿರುವುದೇ ಇದಕ್ಕೆ ಕಾರಣ. ದೇವ್ ದೇಶೀಯ ಕ್ರಿಕೆಟ್‌ನಲ್ಲಿ ಸತತವಾಗಿ ಸಾಕಷ್ಟು ರನ್ ಗಳಿಸಿದ್ದಾರೆ ಮತ್ತು ರಣಜಿ ಟ್ರೋಫಿಯಲ್ಲಿ ಅವರ ಹೆಸರಿನಲ್ಲಿ ದೊಡ್ಡ ಶತಕ ಕೂಡ ಸೇರಿದೆ. ದೇವ್ 50 ಓವರ್‌ಗಳ ಆಟದಲ್ಲಿ ಹಲವು ಶತಕಗಳನ್ನು ಮತ್ತು ರನ್ ಗಳಿಸಿದ್ದಾರೆ.

ಆದ್ದರಿಂದ, ಇಂದು ಇಲ್ಲದಿದ್ದರೆ, ನಾಳೆ ಅವರು ಟೀಮ್ ಇಂಡಿಯಾ ಪರ ಆಡುತ್ತಾರೆ ಎಂದು ಗಾವಸ್ಕರ್​ ಭವಿಷ್ಯ ನುಡಿದರು. ಜೊತೆಗೆ ಕರ್ನಾಟಕ ಯಾವಾಗಲೂ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ನೀಡಿದೆ. ಗುಂಡಪ್ಪ ವಿಶ್ವನಾಥ್, ರಾಹುಲ್ ದ್ರಾವಿಡ್ ಮತ್ತು ನಂತರ ಕೆ.ಎಲ್. ರಾಹುಲ್. ಇದರ ನಂತರ ತ್ರಿವಳಿ ಶತಕ ಗಳಿಸಿದ ಮಾಯಾಂಕ್ ಅಗರ್‌ವಾಲ್ ಮತ್ತು ಕರುಣ್ ನಾಯರ್. ದೇವದತ್ತ ಪಡಿಕ್ಕಲ್ ಈ ಸಂಚಿಕೆಯಲ್ಲಿ ಮುಂದಿನ ಹೆಸರು, ಅವರು ತಮ್ಮ ಆಟದಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ ಎಂದು ಗಾವಸ್ಕರ್​ ಹೇಳಿದರು.

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್