AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಉತ್ತಮ ಬ್ಯಾಟ್ಸ್​ಮನ್​ಗಳನ್ನು ನೀಡುವ ಫ್ಯಾಕ್ಟರಿಯಿದ್ದಂತೆ! ಈತ ಇಷ್ಟರಲ್ಲೇ ಟೀಂ ಇಂಡಿಯಾದ ಕದ ತಟ್ಟಲಿದ್ದಾನೆ; ಗಾವಸ್ಕರ್

ಪಡಿಕ್ಕಲ್ ಶೀಘ್ರದಲ್ಲೇ ಯಾವುದೇ ಒಂದು ಸ್ವರೂಪದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಆಡುತ್ತಾನೆ ಎಂಬುದರಲ್ಲಿ ನನಗೆ ಆಶ್ಚರ್ಯವಾಗುವುದಿಲ್ಲ. ಪಡಿಕ್ಕಲ್​ ಆ ಸಾಮರ್ಥ್ಯವನ್ನು ಹೊಂದಿರುವುದೇ ಇದಕ್ಕೆ ಕಾರಣ.

ಕರ್ನಾಟಕ ಉತ್ತಮ ಬ್ಯಾಟ್ಸ್​ಮನ್​ಗಳನ್ನು ನೀಡುವ ಫ್ಯಾಕ್ಟರಿಯಿದ್ದಂತೆ! ಈತ ಇಷ್ಟರಲ್ಲೇ ಟೀಂ ಇಂಡಿಯಾದ ಕದ ತಟ್ಟಲಿದ್ದಾನೆ; ಗಾವಸ್ಕರ್
ಸುನಿಲ್ ಗವಾಸ್ಕರ್
ಪೃಥ್ವಿಶಂಕರ
|

Updated on: Apr 23, 2021 | 3:53 PM

Share

ಭಾರತೀಯ ಕ್ರಿಕೆಟ್ ತಂಡದಲ್ಲಿ, ಯುವ ಆಟಗಾರರು ನಿರಂತರವಾಗಿ ಅವಕಾಶಗಳನ್ನು ಪಡೆಯುತ್ತಿದ್ದಾರೆ ಮತ್ತು ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ಸಾಮಥ್ರ್ಯವನ್ನು ತೋರಿಸುತ್ತಿದ್ದಾರೆ. ಟೀಮ್ ಇಂಡಿಯಾದ ತಂಡದ ಸಾಮರ್ಥ್ಯವು ತುಂಬಾ ಬಲವಾಗಿರಲು ಇದು ಒಂದು ಕಾರಣವಾಗಿದೆ. ಒಳ್ಳೆಯ ವಿಷಯವೆನೆಂದರೆ, ದೇಶೀಯ ಕ್ರಿಕೆಟ್‌ನಲ್ಲಿ ಸತತ ಉತ್ತಮ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾದ ಕದ ತಟ್ಟುತ್ತಿರುವ ಇನ್ನೂ ಅನೇಕ ಯುವ ಆಟಗಾರರಿದ್ದಾರೆ. ಇದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಅವರಿಗೆ ಉತ್ತಮ ವೇದಿಕೆಯಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂಬಂತೆ ಭಾರತೀಯ ಬ್ಯಾಟ್ಸ್‌ಮನ್ ಐಪಿಎಲ್ ವೇದಿಕೆಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾಕ್ಕೆ ಕಾಲಿಡುವ ಸೂಚನೆ ನೀಡಿದ್ದಾರೆ. ಶೀಘ್ರದಲ್ಲೇ 20 ವರ್ಷದ ಭಾರತೀಯ ಬ್ಯಾಟ್ಸ್‌ಮನ್ ಟೀಮ್ ಇಂಡಿಯಾದಲ್ಲಿ ಆಡಲಿದ್ದಾರೆ ಎಂದು ಸುನಿಲ್ ಗಾವಸ್ಕರ್ ಕೂಡ ಭವಿಷ್ಯ ನುಡಿದ್ದಿದ್ದಾರೆ.

ಸತತ ನಾಲ್ಕು ಶತಕಗಳನ್ನು ಮತ್ತು ಮೂರು ಅರ್ಧಶತಕ ವಾಸ್ತವವಾಗಿ, ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಗುರುವಾರ ರನ್ ಸುನಾಮಿಯೇ ನಡೆಯಿತು. ದೇವದತ್ ಪಡಿಕ್ಕಲ್ ಅವರ ಶತಕ ಮತ್ತು ವಿರಾಟ್ ಕೊಹ್ಲಿಯ ಅರ್ಧಶತಕದ ಸಹಾಯದಿಂದ ಆರ್‌ಸಿಬಿ ರಾಜಸ್ಥಾನ ನೀಡಿದ 178 ರನ್ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು. ದೇವದತ್ತ್ 52 ಎಸೆತಗಳಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ ಅಜೇಯ 101 ರನ್ ಗಳಿಸಿದರು. ದೇವದತ್ ಅವರ ಈ ಆಟದಿಂದಾಗಿ ಸುನಿಲ್ ಗವಾಸ್ಕರ್ ತುಂಬಾ ಪ್ರಭಾವಿತರಾಗಿದ್ದಾರೆ. ದೇವದತ್ತ ಪಡಿಕ್ಕಲ್ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿಯ ಏಳು ಪಂದ್ಯಗಳಲ್ಲಿ ಸತತ ನಾಲ್ಕು ಶತಕಗಳನ್ನು ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದರು.

ಕರ್ನಾಟಕ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ನೀಡುವ ಫ್ಯಾಕ್ಟರಿ ಸುನಿಲ್ ಗಾವಸ್ಕರ್ ಮಾತನಾಡಿ, ಪಡಿಕ್ಕಲ್ ಶೀಘ್ರದಲ್ಲೇ ಯಾವುದೇ ಒಂದು ಸ್ವರೂಪದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಆಡುತ್ತಾನೆ ಎಂಬುದರಲ್ಲಿ ನನಗೆ ಆಶ್ಚರ್ಯವಾಗುವುದಿಲ್ಲ. ಪಡಿಕ್ಕಲ್​ ಆ ಸಾಮರ್ಥ್ಯವನ್ನು ಹೊಂದಿರುವುದೇ ಇದಕ್ಕೆ ಕಾರಣ. ದೇವ್ ದೇಶೀಯ ಕ್ರಿಕೆಟ್‌ನಲ್ಲಿ ಸತತವಾಗಿ ಸಾಕಷ್ಟು ರನ್ ಗಳಿಸಿದ್ದಾರೆ ಮತ್ತು ರಣಜಿ ಟ್ರೋಫಿಯಲ್ಲಿ ಅವರ ಹೆಸರಿನಲ್ಲಿ ದೊಡ್ಡ ಶತಕ ಕೂಡ ಸೇರಿದೆ. ದೇವ್ 50 ಓವರ್‌ಗಳ ಆಟದಲ್ಲಿ ಹಲವು ಶತಕಗಳನ್ನು ಮತ್ತು ರನ್ ಗಳಿಸಿದ್ದಾರೆ.

ಆದ್ದರಿಂದ, ಇಂದು ಇಲ್ಲದಿದ್ದರೆ, ನಾಳೆ ಅವರು ಟೀಮ್ ಇಂಡಿಯಾ ಪರ ಆಡುತ್ತಾರೆ ಎಂದು ಗಾವಸ್ಕರ್​ ಭವಿಷ್ಯ ನುಡಿದರು. ಜೊತೆಗೆ ಕರ್ನಾಟಕ ಯಾವಾಗಲೂ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ನೀಡಿದೆ. ಗುಂಡಪ್ಪ ವಿಶ್ವನಾಥ್, ರಾಹುಲ್ ದ್ರಾವಿಡ್ ಮತ್ತು ನಂತರ ಕೆ.ಎಲ್. ರಾಹುಲ್. ಇದರ ನಂತರ ತ್ರಿವಳಿ ಶತಕ ಗಳಿಸಿದ ಮಾಯಾಂಕ್ ಅಗರ್‌ವಾಲ್ ಮತ್ತು ಕರುಣ್ ನಾಯರ್. ದೇವದತ್ತ ಪಡಿಕ್ಕಲ್ ಈ ಸಂಚಿಕೆಯಲ್ಲಿ ಮುಂದಿನ ಹೆಸರು, ಅವರು ತಮ್ಮ ಆಟದಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ ಎಂದು ಗಾವಸ್ಕರ್​ ಹೇಳಿದರು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?