AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧದ ಹೋರಾಟಕ್ಕೆ 30 ಕೋಟಿ ರೂ. ದೇಣಿಗೆ ನೀಡಲಿದೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ

ಕೊರೊನಾ ವೈರಸ್‌ನ ಎರಡನೇ ಅಲೆಯಿಂದ ಬಳಲುತ್ತಿರುವ ಜನರಿಗೆ ಪರಿಹಾರ ಒದಗಿಸಲು ಸನ್ ಟಿವಿ (ಸನ್‌ರೈಸರ್ಸ್ ಹೈದರಾಬಾದ್) 30 ಕೋಟಿ ರೂ ನೀಡಲು ಮುಂದೆ ಬಂದಿದೆ.

ಕೊರೊನಾ ವಿರುದ್ಧದ ಹೋರಾಟಕ್ಕೆ 30 ಕೋಟಿ ರೂ. ದೇಣಿಗೆ ನೀಡಲಿದೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ
ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸ್ ಒಡತಿ
ಪೃಥ್ವಿಶಂಕರ
| Updated By: Skanda|

Updated on: May 11, 2021 | 7:32 AM

Share

ಕೊರೊನಾವೈರಸ್ ವಿರುದ್ಧ ಹೋರಾಡುವ ಜನರಿಗೆ ಸಹಾಯ ಮಾಡಲು ಐಪಿಎಲ್ ತಂಡ ಸನ್‌ರೈಸರ್ಸ್ ಹೈದರಾಬಾದ್ 30 ಕೋಟಿ ರೂ. ಹಣವನ್ನು ನೀಡುವುದಾಗಿ ತಿಳಿಸಿದೆ. ಈ ಹಣವನ್ನು ತಂಡದ ಸ್ವಾಮ್ಯ ಹೊಂದಿರುವ ಕಂಪನಿ ಸನ್ ಟಿವಿ ನೀಡಲಿದೆ. ಸನ್‌ರೈಸರ್ಸ್ ಹೈದರಾಬಾದ್ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದೆ. ಕೊರೊನಾ ವೈರಸ್‌ನ ಎರಡನೇ ಅಲೆಯಿಂದ ಬಳಲುತ್ತಿರುವ ಜನರಿಗೆ ಪರಿಹಾರ ಒದಗಿಸಲು ಸನ್ ಟಿವಿ (ಸನ್‌ರೈಸರ್ಸ್ ಹೈದರಾಬಾದ್) 30 ಕೋಟಿ ರೂ ನೀಡಲು ಮುಂದೆ ಬಂದಿರುವುದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ದೆಹಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಇತರ ತಂಡಗಳು ಸಹ ಕೊರೊನಾ ವಿರುದ್ಧ ಹೋರಾಡಲು ಹಣವನ್ನು ನೀಡಿದ್ದವು. ಇದೀಗ ಎಸ್​ಆರ್​ಹೆಚ್​ ಫ್ರಾಂಚೈಸಿ ಆಮ್ಲಜನಕ, ವೆಂಟಿಲೇಟರ್‌ಗಳು ಮತ್ತು ಅಗತ್ಯ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿಯೂ ಘೋಷಿಸಿದೆ.

ಈ ಹೋರಾಟದ ವಿರುದ್ಧ, ತಮ್ಮ ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುವ ಸುಮಾರು ಆರು ಸಾವಿರ ಜನರು ತಮ್ಮ ಒಂದು ದಿನದ ವೇತನವನ್ನು ಸಹ ದಾನ ಮಾಡುತ್ತಾರೆ ಎಂದು ಸನ್ ಟಿವಿ ಹೇಳಿದೆ. ಸನ್‌ರೈಸರ್ಸ್ ಹೈದರಾಬಾದ್ ಜೊತೆಗೆ, ಸನ್‌ಟಿವಿ ಭಾರತದಲ್ಲಿ 33 ಟೆಲಿವಿಷನ್ ಚಾನೆಲ್‌ಗಳು ಮತ್ತು 45 ಎಫ್‌ಎಮ್​ ರೇಡಿಯೋ ಚಾನೆಲ್‌ಗಳನ್ನು ಹೊಂದಿದೆ. ಇದಲ್ಲದೆ, ಅವರಿಗೆ ಎರಡು ದಿನಪತ್ರಿಕೆಗಳು ಮತ್ತು ಐದು ನಿಯತಕಾಲಿಕೆಗಳಿವೆ.

ದೇಶಾದ್ಯಂತ ಜಾಗೃತಿ ಮೂಡಿಸಲಿದೆ ಸನ್‌ರೈಸರ್ಸ್ ಹೈದರಾಬಾದ್ ನೀಡಲಿರುವ 30 ಕೋಟಿ ರೂ.ಗಳನ್ನು ಭಾರತೀಯ ಮತ್ತು ರಾಜ್ಯ ಸರ್ಕಾರಗಳು ನಡೆಸುವ ಪ್ರತ್ಯೇಕ ಸಂಸ್ಥೆಗಳಿಗೆ ನೀಡಲಾಗುವುದು. ಅಲ್ಲದೆ, ಆಮ್ಲಜನಕ ಸಿಲಿಂಡರ್‌ಗಳು ಮತ್ತು ಔಷಧಿಗಳನ್ನು ಒದಗಿಸುವ ಎನ್‌ಜಿಒಗಳಿಗೆ ಸಹ ಸಹಾಯ ಮಾಡಲಾಗುವುದು. ಕಂಪನಿಯು ತನ್ನ ಮಾಧ್ಯಮಗಳ ಮೂಲಕ ಜನರಲ್ಲಿ ಕೊರೊನಾದ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದು ಹೇಳಲಾಗಿದೆ.

ಅನೇಕ ತಂಡಗಳು ಸಹಾಯಕ್ಕಾಗಿ ಮುಂದೆ ಬಂದಿವೆ ರಾಜಸ್ಥಾನ್ ರಾಯಲ್ಸ್ ಸಹ ಕೊರೊನಾದೊಂದಿಗೆ ಹೆಣಗಾಡುತ್ತಿರುವ ಜನರಿಗೆ ಸಹಾಯ ಮಾಡಲು ಕೈ ಚಾಚಿದೆ. ಒಟ್ಟು 7.5 ಕೋಟಿ ರೂಪಾಯಿಗಳನ್ನು ನೀಡುವುದಾಗಿ ರಾಜಸ್ಥಾನ ನಿರ್ಧರಿಸಿದೆ. ಈ ಮಾಹಿತಿಯನ್ನು ರಾಜಸ್ಥಾನ್ ಟ್ವೀಟ್ ಮೂಲಕ ಜನರಲ್ಲಿ ಹಂಚಿಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್, ಕೋವಿಡ್ 19 ಸಾಂಕ್ರಾಮಿಕ ವಿರುದ್ಧದ ಹೋರಾಟಕ್ಕೆ ಕೊಡುಗೆ ನೀಡುತ್ತಿದ್ದು, ತಮಿಳುನಾಡಿನಲ್ಲಿ ಪೀಡಿತ ರೋಗಿಗಳಿಗೆ 450 ಆಮ್ಲಜನಕ ಸಾಂದ್ರಕಗಳನ್ನು ವ್ಯವಸ್ಥೆಗೊಳಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಲಿಮಿಟೆಡ್ ನಿರ್ದೇಶಕ ಆರ್.ಶ್ರೀನಿವಾಸನ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಶನಿವಾರ ಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಿದರು. ಕೊರೊನಾ ಸಾಂಕ್ರಾಮಿಕ ವಿರುದ್ಧದ ದೆಹಲಿಯ ಯುದ್ಧದಲ್ಲಿ ಸಹಾಯ ಮಾಡಲು ದೆಹಲಿ ತಂಡ ಒಂದೂವರೆ ಕೋಟಿ ರೂ ಹಣವನ್ನು ನೀಡಿದೆ. ಈ ಹಣವನ್ನು ಅಗತ್ಯ ವೈದ್ಯಕೀಯ ಸರಬರಾಜು, ಆಮ್ಲಜನಕ ಸಿಲಿಂಡರ್‌ಗಳು ಮತ್ತು ಕೋವಿಡ್ ಕಿಟ್‌ಗಳನ್ನು ಖರೀದಿಸಲು ಬಳಸಲಾಗುತ್ತದೆ.

ಇದನ್ನೂ ಓದಿ: ನಿನ್ನ ದೇಣಿಗೆ ಹಣದಲ್ಲಿ ಒಂದು ವೆಂಟಿಲೇಟರ್ ಸಹ ಬರುವುದಿಲ್ಲ; ದೇಣಿಗೆ ನೀಡಿ ಟ್ರೋಲ್ ಆದ ಯಜ್ವೇಂದ್ರ ಚಹಲ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ