AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣ; ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಸಿಸಿಟಿವಿ ಸಾಕ್ಷ್ಯ..ಆರೋಪಿ ಸುಳಿವು ಕೊಟ್ಟ ಮೀರತ್ ಟೋಲ್​​ಪ್ಲಾಜಾ

Sushil Kumar: ಮರಣೋತ್ತರ ವರದಿಯ ಪ್ರಕಾರ, ಸಾಗರ್ ಅವರ ಎದೆಯ ಹೊರತಾಗಿ ದೇಹದ ಮೇಲೆ ಇರಿತದ ಗಾಯಗಳಿದ್ದವು. ಅವರ ದೇಹದ ಮೇಲೆ 50 ಕ್ಕೂ ಹೆಚ್ಚು ಗಾಯಗಳಿವೆ.

ಕೊಲೆ ಪ್ರಕರಣ; ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಸಿಸಿಟಿವಿ ಸಾಕ್ಷ್ಯ..ಆರೋಪಿ ಸುಳಿವು ಕೊಟ್ಟ ಮೀರತ್ ಟೋಲ್​​ಪ್ಲಾಜಾ
ಪರಾರಿಯಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್
ಪೃಥ್ವಿಶಂಕರ
|

Updated on:May 22, 2021 | 10:21 PM

Share

ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ 23 ವರ್ಷದ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ರಣಕಹಳೆ ಊದಿದ್ದಾರೆ. ಆರೋಪಿಗಳ ಬಂಧನಕ್ಕೆ ಕಾರಣವಾದ ಮಾಹಿತಿಗಾಗಿ ಪೊಲೀಸರು ಬಹುಮಾನವನ್ನೂ ಘೋಷಿಸಿದರು. ಹೀಗಾಗಿ ಸುಶೀಲ್ ಕುಮಾರ್ ಅವರಿಗೆ ಪೊಲೀಸರ ಕಾಟ ಹೆಚ್ಚುತ್ತಿವೆ. ಫೋರೆನ್ಸಿಕ್ ಸೈನ್ಸ್ ಲ್ಯಾಬ್ ತನ್ನ ವರದಿಯಲ್ಲಿ ಮೊಬೈಲ್‌ನಲ್ಲಿನ ವೀಡಿಯೊ ತುಣುಕುಗಳು ಸತ್ಯಕ್ಕೆ ಹತ್ತಿರವಾಗಿವೆ ಎಂದು ಹೇಳಿದೆ. ಈ ವಿಡಿಯೋದಲ್ಲಿ ಸುಶೀಲ್ ಕುಮಾರ್ ಅವರು ತಮ್ಮ ಸಹಚರರೊಂದಿಗೆ ಸಾಗರ್ ರಾಣಾ ಅವರನ್ನು ತಳಿಸುತ್ತಿರುವುದು ಕಂಡುಬರುತ್ತದೆ.

ಸುಶೀಲ್‌ಕುಮಾರ್ ವಿರುದ್ಧ ದೃಢವಾದ ಸಾಕ್ಷ್ಯಗಳು ಛತ್ರಸಾಲ್ ಕ್ರೀಡಾಂಗಣದ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳಲ್ಲಿ ಸುಶೀಲ್ ಕುಮಾರ್ ಮತ್ತು ಅವರ 20 ರಿಂದ 25 ಸಹಚರರು ಸಾಗರ್ ಮತ್ತು ಇತರ ಇಬ್ಬರನ್ನು ಥಳಿಸುತ್ತಿರುವುದು ಕಂಡುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸುಶೀಲ್ ಕುಮಾರ್ ಮತ್ತು ಸಂಗಡಿಗರು, ಸಾಗರ್ ಹಾಗೂ ಇತರ ಇಬ್ಬರು ವ್ಯಕ್ತಿಗಳಿಗೆ ಹಾಕಿ ಸ್ಟಿಕ್ಗಳಿಂದ ಹೊಡೆಯುತ್ತಿರುವುದು ಕಂಡುಬಂದಿದೆ. ಫೋರೆನ್ಸಿಕ್ ಸೈನ್ಸ್ ಲ್ಯಾಬ್ ಸಹ ವೀಡಿಯೊ ನಿಜ ಎಂದು ಹೇಳಿದೆ.

ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಕುಸ್ತಿಪಟು ಸಾಗರ್ ರಾಣಾ ಹತ್ಯೆಯಾದಾಗಿನಿಂದ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಸಂಗಡಿಗರು ತಲೆಮರಿಸಿಕೊಂಡಿದ್ದಾರೆ. ಆತ ಮತ್ತು ಇತರ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ ಎಂದು ಪೊಲೀಸರು ಊಹಿಸಿದ್ದರು. ಅದೇ ಸಮಯದಲ್ಲಿ, ಸುಶೀಲ್ ಕುಮಾರ್ ತನ್ನ ಬಂಧನವನ್ನು ತಪ್ಪಿಸಲು ನ್ಯಾಯಾಲಯದಲ್ಲಿ ಪೂರ್ವ ಬಂಧನ ಜಾಮೀನು ಅರ್ಜಿ ಸಲ್ಲಿಸಿದ್ದರು. ದೆಹಲಿ ಪೊಲೀಸರು ಸುಶೀಲ್ (1ಲಕ್ಷ) ಹಾಗೂ ಆತನ ಸಂಗಡಿಗರ (ಅಜಯ್​ಗೆ 50000) ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ್ದಾರೆ.

ಸಾಗರ್ ದೇಹದ ಮೇಲೆ 50 ಕ್ಕೂ ಹೆಚ್ಚು ಗಾಯಗಳು ಸುಶೀಲ್ ಕುಮಾರ್ ಇತರ ಕುಸ್ತಿಪಟುಗಳೊಂದಿಗೆ, ಪೂರ್ಣ ಸಿದ್ಧತೆ ಮಾಡಿಕೊಂಡು ಕುಸ್ತಿಪಟು ಸಾಗರ್ ರಾಣಾ ಅವರ ಮೇಲೆ ಆಕ್ರಮಣ ಮಾಡಿದ್ದಾರೆ. ಮರಣೋತ್ತರ ವರದಿಯ ಪ್ರಕಾರ, ಸಾಗರ್ ಅವರ ಎದೆಯ ಹೊರತಾಗಿ ದೇಹದ ಮೇಲೆ ಇರಿತದ ಗಾಯಗಳಿದ್ದವು. ಅವರ ದೇಹದ ಮೇಲೆ 50 ಕ್ಕೂ ಹೆಚ್ಚು ಗಾಯಗಳಿವೆ. ಸಾಗರ್​ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆಯಲ್ಪಟ್ಟಿರುವುದು ಸಹ ವರದಿಯಾಗಿದೆ.

Published On - 6:20 pm, Sat, 22 May 21

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ