AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣ; ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಸಿಸಿಟಿವಿ ಸಾಕ್ಷ್ಯ..ಆರೋಪಿ ಸುಳಿವು ಕೊಟ್ಟ ಮೀರತ್ ಟೋಲ್​​ಪ್ಲಾಜಾ

Sushil Kumar: ಮರಣೋತ್ತರ ವರದಿಯ ಪ್ರಕಾರ, ಸಾಗರ್ ಅವರ ಎದೆಯ ಹೊರತಾಗಿ ದೇಹದ ಮೇಲೆ ಇರಿತದ ಗಾಯಗಳಿದ್ದವು. ಅವರ ದೇಹದ ಮೇಲೆ 50 ಕ್ಕೂ ಹೆಚ್ಚು ಗಾಯಗಳಿವೆ.

ಕೊಲೆ ಪ್ರಕರಣ; ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಸಿಸಿಟಿವಿ ಸಾಕ್ಷ್ಯ..ಆರೋಪಿ ಸುಳಿವು ಕೊಟ್ಟ ಮೀರತ್ ಟೋಲ್​​ಪ್ಲಾಜಾ
ಪರಾರಿಯಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್
ಪೃಥ್ವಿಶಂಕರ
|

Updated on:May 22, 2021 | 10:21 PM

Share

ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ 23 ವರ್ಷದ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ರಣಕಹಳೆ ಊದಿದ್ದಾರೆ. ಆರೋಪಿಗಳ ಬಂಧನಕ್ಕೆ ಕಾರಣವಾದ ಮಾಹಿತಿಗಾಗಿ ಪೊಲೀಸರು ಬಹುಮಾನವನ್ನೂ ಘೋಷಿಸಿದರು. ಹೀಗಾಗಿ ಸುಶೀಲ್ ಕುಮಾರ್ ಅವರಿಗೆ ಪೊಲೀಸರ ಕಾಟ ಹೆಚ್ಚುತ್ತಿವೆ. ಫೋರೆನ್ಸಿಕ್ ಸೈನ್ಸ್ ಲ್ಯಾಬ್ ತನ್ನ ವರದಿಯಲ್ಲಿ ಮೊಬೈಲ್‌ನಲ್ಲಿನ ವೀಡಿಯೊ ತುಣುಕುಗಳು ಸತ್ಯಕ್ಕೆ ಹತ್ತಿರವಾಗಿವೆ ಎಂದು ಹೇಳಿದೆ. ಈ ವಿಡಿಯೋದಲ್ಲಿ ಸುಶೀಲ್ ಕುಮಾರ್ ಅವರು ತಮ್ಮ ಸಹಚರರೊಂದಿಗೆ ಸಾಗರ್ ರಾಣಾ ಅವರನ್ನು ತಳಿಸುತ್ತಿರುವುದು ಕಂಡುಬರುತ್ತದೆ.

ಸುಶೀಲ್‌ಕುಮಾರ್ ವಿರುದ್ಧ ದೃಢವಾದ ಸಾಕ್ಷ್ಯಗಳು ಛತ್ರಸಾಲ್ ಕ್ರೀಡಾಂಗಣದ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳಲ್ಲಿ ಸುಶೀಲ್ ಕುಮಾರ್ ಮತ್ತು ಅವರ 20 ರಿಂದ 25 ಸಹಚರರು ಸಾಗರ್ ಮತ್ತು ಇತರ ಇಬ್ಬರನ್ನು ಥಳಿಸುತ್ತಿರುವುದು ಕಂಡುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸುಶೀಲ್ ಕುಮಾರ್ ಮತ್ತು ಸಂಗಡಿಗರು, ಸಾಗರ್ ಹಾಗೂ ಇತರ ಇಬ್ಬರು ವ್ಯಕ್ತಿಗಳಿಗೆ ಹಾಕಿ ಸ್ಟಿಕ್ಗಳಿಂದ ಹೊಡೆಯುತ್ತಿರುವುದು ಕಂಡುಬಂದಿದೆ. ಫೋರೆನ್ಸಿಕ್ ಸೈನ್ಸ್ ಲ್ಯಾಬ್ ಸಹ ವೀಡಿಯೊ ನಿಜ ಎಂದು ಹೇಳಿದೆ.

ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಕುಸ್ತಿಪಟು ಸಾಗರ್ ರಾಣಾ ಹತ್ಯೆಯಾದಾಗಿನಿಂದ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಸಂಗಡಿಗರು ತಲೆಮರಿಸಿಕೊಂಡಿದ್ದಾರೆ. ಆತ ಮತ್ತು ಇತರ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ ಎಂದು ಪೊಲೀಸರು ಊಹಿಸಿದ್ದರು. ಅದೇ ಸಮಯದಲ್ಲಿ, ಸುಶೀಲ್ ಕುಮಾರ್ ತನ್ನ ಬಂಧನವನ್ನು ತಪ್ಪಿಸಲು ನ್ಯಾಯಾಲಯದಲ್ಲಿ ಪೂರ್ವ ಬಂಧನ ಜಾಮೀನು ಅರ್ಜಿ ಸಲ್ಲಿಸಿದ್ದರು. ದೆಹಲಿ ಪೊಲೀಸರು ಸುಶೀಲ್ (1ಲಕ್ಷ) ಹಾಗೂ ಆತನ ಸಂಗಡಿಗರ (ಅಜಯ್​ಗೆ 50000) ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ್ದಾರೆ.

ಸಾಗರ್ ದೇಹದ ಮೇಲೆ 50 ಕ್ಕೂ ಹೆಚ್ಚು ಗಾಯಗಳು ಸುಶೀಲ್ ಕುಮಾರ್ ಇತರ ಕುಸ್ತಿಪಟುಗಳೊಂದಿಗೆ, ಪೂರ್ಣ ಸಿದ್ಧತೆ ಮಾಡಿಕೊಂಡು ಕುಸ್ತಿಪಟು ಸಾಗರ್ ರಾಣಾ ಅವರ ಮೇಲೆ ಆಕ್ರಮಣ ಮಾಡಿದ್ದಾರೆ. ಮರಣೋತ್ತರ ವರದಿಯ ಪ್ರಕಾರ, ಸಾಗರ್ ಅವರ ಎದೆಯ ಹೊರತಾಗಿ ದೇಹದ ಮೇಲೆ ಇರಿತದ ಗಾಯಗಳಿದ್ದವು. ಅವರ ದೇಹದ ಮೇಲೆ 50 ಕ್ಕೂ ಹೆಚ್ಚು ಗಾಯಗಳಿವೆ. ಸಾಗರ್​ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆಯಲ್ಪಟ್ಟಿರುವುದು ಸಹ ವರದಿಯಾಗಿದೆ.

Published On - 6:20 pm, Sat, 22 May 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ