AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಹೈದರಾಬಾದ್​ಗೆ ಆಘಾತ! ಮೊಣಕಾಲಿನ ಗಾಯದಿಂದಾಗಿ ಯಾರ್ಕರ್​ ಕಿಂಗ್ ಟಿ. ನಟರಾಜನ್ ಐಪಿಎಲ್​ನಿಂದ ಔಟ್

IPL 2021: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಟರಾಜನ್ ಐಪಿಎಲ್ 2021 ರ ಆವೃತ್ತಿಯಿಂದ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ನಟರಾಜನ್​ಗೆ ಮೊಣಕಾಲಿನ ಗಾಯವು ಗಂಭೀರವಾದ ಸ್ವರೂಪ ಪಡೆದುಕೊಂಡಿದೆ.

IPL 2021: ಹೈದರಾಬಾದ್​ಗೆ ಆಘಾತ! ಮೊಣಕಾಲಿನ ಗಾಯದಿಂದಾಗಿ ಯಾರ್ಕರ್​ ಕಿಂಗ್ ಟಿ. ನಟರಾಜನ್ ಐಪಿಎಲ್​ನಿಂದ ಔಟ್
ಟಿ.ನಟರಾಜನ್
ಪೃಥ್ವಿಶಂಕರ
|

Updated on:Apr 22, 2021 | 10:12 PM

Share

ಹೈದರಾಬಾದ್​ ತಂಡದ ಎಡಗೈ ಮಧ್ಯಮ ವೇಗಿ ಟಿ ನಟರಾಜನ್‌ಗೆ ಸಂಬಂಧಿಸಿದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಟರಾಜನ್ ಐಪಿಎಲ್ 2021 ರ ಆವೃತ್ತಿಯಿಂದ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ನಟರಾಜನ್​ಗೆ ಮೊಣಕಾಲಿನ ಗಾಯವು ಗಂಭೀರವಾದ ಸ್ವರೂಪ ಪಡೆದುಕೊಂಡಿದೆ. ಈ ಕಾರಣದಿಂದಾಗಿ ಅವರು ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ. 30 ವರ್ಷದ ಬೌಲರ್‌ಗೆ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ. ಈಆವೃತ್ತಿಯಲ್ಲಿ ಅವರು ಎರಡು ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ ಏಪ್ರಿಲ್ 11 ರಂದು ಚೆನ್ನೈನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಡಿದ್ದರು. ಇದರ ನಂತರ ಅವರು ಹೈದರಾಬಾದ್‌ನ ಕೊನೆಯ ಎರಡು ಪಂದ್ಯಗಳಿಗೆ ಹಾಜರಾಗಲಿಲ್ಲ. ಸನ್‌ರೈಸರ್ಸ್ ಹೈದರಾಬಾದ್ ಅವರ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ತವಕದಲ್ಲಿದೆ.

ನಟರಾಜನನ್ನು ತಂಡದಿಂದ ಕೈಬಿಡುವಂತೆ ಮನವಿ ನಟರಾಜನ್ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಬಹುದು ಎಂದು ಬಿಸಿಸಿಐ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅವನ ಗಾಯ ಯಾವಾಗ ಮತ್ತು ಎಷ್ಟು ಗಂಭೀರವಾಯಿತು ಎಂಬುದು ಇನ್ನೂ ತಿಳಿದುಬಂದಿಲ್ಲ. ನಟರಾಜನ್ ಆಸ್ಟ್ರೇಲಿಯಾ ಪ್ರವಾಸದಿಂದ ಬಂದ ನಂತರ ಎರಡು ತಿಂಗಳು ಎನ್‌ಸಿಎಯಲ್ಲಿದ್ದರು. ಎನ್‌ಸಿಎ ಫಿಸಿಯೋ, ನಟರಾಜನ್​ ಅವರ ಫಿಟ್‌ನೆಸ್ ಅನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಟರಾಜನ್ ಗಾಯದ ಗಂಭೀರತೆಯ ಬಗ್ಗೆ ಅವರು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ. ನಟರಾಜನನ್ನು ತಂಡದಿಂದ ಕೈಬಿಡುವಂತೆ ಬಿಸಿಸಿಐ ಈಗ ಹೈದರಾಬಾದ್ ಫ್ರಾಂಚೈಸಿಯನ್ನು ಕೇಳಬಹುದು ಎಂದು ಹೇಳಲಾಗಿದೆ.

ನಟರಾಜನ್ ಪ್ರಸ್ತುತ ಹೈದರಾಬಾದ್ ತಂಡದೊಂದಿಗೆ ಚೆನ್ನೈನಲ್ಲಿದ್ದಾರೆ. ಮೂಲಗಳ ಪ್ರಕಾರ, ನಾವು ಇನ್ನೂ ಪೂರ್ಣ ವರದಿಯನ್ನು ಸ್ವೀಕರಿಸಿಲ್ಲ ಆದರೆ ಅವರಿಗೆ ಮೊಣಕಾಲು ನೋವು ಇದೆ ಎಂದು ತಿಳಿಸಲಾಗಿದೆ. ಅವರು ಪುನರ್ವಸತಿಯಲ್ಲಿ ಎನ್‌ಸಿಎಗೆ ಹೋಗುತ್ತಾರೆ ಎಂದು ಪ್ರಾಂಚೈಸಿ ತಿಳಿಸಿದೆ.

ನಟರಾಜನ್ ಬಗ್ಗೆ ವಾರ್ನರ್ ಈ ಹೇಳಿಕೆ ನೀಡಿದ್ದಾರೆ ಇದಕ್ಕೂ ಮೊದಲು ಏಪ್ರಿಲ್ 21 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ನಟರಾಜನ್ ಅವರ ಗಾಯದ ಬಗ್ಗೆ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಅವರನ್ನು ಕೇಳಿದಾಗ, ಈ ಬೌಲರ್ ಪಂದ್ಯಾವಳಿಯಿಂದ ಹೊರಗುಳಿಯುವ ಯಾವುದೇ ಸೂಚನೆಯನ್ನು ಅವರು ನೀಡಿಲ್ಲ. ವಾರ್ನರ್ ಹೇಳಿದರು, ಅವನ ಮೊಣಕಾಲಿನ ಮೇಲೆ ಸ್ವೆಲಿಂಗ್ ಇದೆ. ಹೀಗಾಗಿ ನಟರಾಜನ್ ಏಳು ದಿನಗಳ ಕಾಲ ಆಟದಿಂದ ಹೊರಗುಳಿಯಬೇಕಾಗುತ್ತದೆ ಎಂದಿದ್ದರು.

Published On - 10:09 pm, Thu, 22 April 21

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ