AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಹೈದರಾಬಾದ್​ಗೆ ಆಘಾತ! ಮೊಣಕಾಲಿನ ಗಾಯದಿಂದಾಗಿ ಯಾರ್ಕರ್​ ಕಿಂಗ್ ಟಿ. ನಟರಾಜನ್ ಐಪಿಎಲ್​ನಿಂದ ಔಟ್

IPL 2021: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಟರಾಜನ್ ಐಪಿಎಲ್ 2021 ರ ಆವೃತ್ತಿಯಿಂದ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ನಟರಾಜನ್​ಗೆ ಮೊಣಕಾಲಿನ ಗಾಯವು ಗಂಭೀರವಾದ ಸ್ವರೂಪ ಪಡೆದುಕೊಂಡಿದೆ.

IPL 2021: ಹೈದರಾಬಾದ್​ಗೆ ಆಘಾತ! ಮೊಣಕಾಲಿನ ಗಾಯದಿಂದಾಗಿ ಯಾರ್ಕರ್​ ಕಿಂಗ್ ಟಿ. ನಟರಾಜನ್ ಐಪಿಎಲ್​ನಿಂದ ಔಟ್
ಟಿ.ನಟರಾಜನ್
ಪೃಥ್ವಿಶಂಕರ
|

Updated on:Apr 22, 2021 | 10:12 PM

Share

ಹೈದರಾಬಾದ್​ ತಂಡದ ಎಡಗೈ ಮಧ್ಯಮ ವೇಗಿ ಟಿ ನಟರಾಜನ್‌ಗೆ ಸಂಬಂಧಿಸಿದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಟರಾಜನ್ ಐಪಿಎಲ್ 2021 ರ ಆವೃತ್ತಿಯಿಂದ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ನಟರಾಜನ್​ಗೆ ಮೊಣಕಾಲಿನ ಗಾಯವು ಗಂಭೀರವಾದ ಸ್ವರೂಪ ಪಡೆದುಕೊಂಡಿದೆ. ಈ ಕಾರಣದಿಂದಾಗಿ ಅವರು ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ. 30 ವರ್ಷದ ಬೌಲರ್‌ಗೆ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ. ಈಆವೃತ್ತಿಯಲ್ಲಿ ಅವರು ಎರಡು ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ ಏಪ್ರಿಲ್ 11 ರಂದು ಚೆನ್ನೈನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಡಿದ್ದರು. ಇದರ ನಂತರ ಅವರು ಹೈದರಾಬಾದ್‌ನ ಕೊನೆಯ ಎರಡು ಪಂದ್ಯಗಳಿಗೆ ಹಾಜರಾಗಲಿಲ್ಲ. ಸನ್‌ರೈಸರ್ಸ್ ಹೈದರಾಬಾದ್ ಅವರ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ತವಕದಲ್ಲಿದೆ.

ನಟರಾಜನನ್ನು ತಂಡದಿಂದ ಕೈಬಿಡುವಂತೆ ಮನವಿ ನಟರಾಜನ್ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಬಹುದು ಎಂದು ಬಿಸಿಸಿಐ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅವನ ಗಾಯ ಯಾವಾಗ ಮತ್ತು ಎಷ್ಟು ಗಂಭೀರವಾಯಿತು ಎಂಬುದು ಇನ್ನೂ ತಿಳಿದುಬಂದಿಲ್ಲ. ನಟರಾಜನ್ ಆಸ್ಟ್ರೇಲಿಯಾ ಪ್ರವಾಸದಿಂದ ಬಂದ ನಂತರ ಎರಡು ತಿಂಗಳು ಎನ್‌ಸಿಎಯಲ್ಲಿದ್ದರು. ಎನ್‌ಸಿಎ ಫಿಸಿಯೋ, ನಟರಾಜನ್​ ಅವರ ಫಿಟ್‌ನೆಸ್ ಅನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಟರಾಜನ್ ಗಾಯದ ಗಂಭೀರತೆಯ ಬಗ್ಗೆ ಅವರು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ. ನಟರಾಜನನ್ನು ತಂಡದಿಂದ ಕೈಬಿಡುವಂತೆ ಬಿಸಿಸಿಐ ಈಗ ಹೈದರಾಬಾದ್ ಫ್ರಾಂಚೈಸಿಯನ್ನು ಕೇಳಬಹುದು ಎಂದು ಹೇಳಲಾಗಿದೆ.

ನಟರಾಜನ್ ಪ್ರಸ್ತುತ ಹೈದರಾಬಾದ್ ತಂಡದೊಂದಿಗೆ ಚೆನ್ನೈನಲ್ಲಿದ್ದಾರೆ. ಮೂಲಗಳ ಪ್ರಕಾರ, ನಾವು ಇನ್ನೂ ಪೂರ್ಣ ವರದಿಯನ್ನು ಸ್ವೀಕರಿಸಿಲ್ಲ ಆದರೆ ಅವರಿಗೆ ಮೊಣಕಾಲು ನೋವು ಇದೆ ಎಂದು ತಿಳಿಸಲಾಗಿದೆ. ಅವರು ಪುನರ್ವಸತಿಯಲ್ಲಿ ಎನ್‌ಸಿಎಗೆ ಹೋಗುತ್ತಾರೆ ಎಂದು ಪ್ರಾಂಚೈಸಿ ತಿಳಿಸಿದೆ.

ನಟರಾಜನ್ ಬಗ್ಗೆ ವಾರ್ನರ್ ಈ ಹೇಳಿಕೆ ನೀಡಿದ್ದಾರೆ ಇದಕ್ಕೂ ಮೊದಲು ಏಪ್ರಿಲ್ 21 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ನಟರಾಜನ್ ಅವರ ಗಾಯದ ಬಗ್ಗೆ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಅವರನ್ನು ಕೇಳಿದಾಗ, ಈ ಬೌಲರ್ ಪಂದ್ಯಾವಳಿಯಿಂದ ಹೊರಗುಳಿಯುವ ಯಾವುದೇ ಸೂಚನೆಯನ್ನು ಅವರು ನೀಡಿಲ್ಲ. ವಾರ್ನರ್ ಹೇಳಿದರು, ಅವನ ಮೊಣಕಾಲಿನ ಮೇಲೆ ಸ್ವೆಲಿಂಗ್ ಇದೆ. ಹೀಗಾಗಿ ನಟರಾಜನ್ ಏಳು ದಿನಗಳ ಕಾಲ ಆಟದಿಂದ ಹೊರಗುಳಿಯಬೇಕಾಗುತ್ತದೆ ಎಂದಿದ್ದರು.

Published On - 10:09 pm, Thu, 22 April 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​