AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಶಾಟ್ ಪುಟ್​ನಲ್ಲಿ ಸ್ವರ್ಣ ಪದಕ ಗೆದ್ದ ತೇಜಿಂದರ್‌ಪಾಲ್ ಸಿಂಗ್

Asian Games: ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 13 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

Asian Games: ಶಾಟ್ ಪುಟ್​ನಲ್ಲಿ ಸ್ವರ್ಣ ಪದಕ ಗೆದ್ದ ತೇಜಿಂದರ್‌ಪಾಲ್ ಸಿಂಗ್
Tajinderpal Singh Toor
TV9 Web
| Edited By: |

Updated on:Oct 01, 2023 | 8:01 PM

Share

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಶಾಟ್‌ ಪುಟ್‌ ಸ್ಪರ್ಧೆಯಲ್ಲಿ ಭಾರತದ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನದ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತದ ಸ್ವರ್ಣದ ಪದಕದ ಸಂಖ್ಯೆ 13 ಕ್ಕೇರಿದೆ. ಈ ಪಂದ್ಯದಲ್ಲಿ ತೇಜಿಂದರ್ ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ಆ ಬಳಿಕ ಕಂಬ್ಯಾಕ್ ಮಾಡಿ ಚಿನ್ನದ ಪದಕ ಗೆದ್ದಿದ್ದು ವಿಶೇಷ. ಬರೋಬ್ಬರಿ 20.36 ಮೀಟರ್ ದೂರಕ್ಕೆ ಎಸೆಯುವ ಮೂಲಕ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.

ಮತ್ತೊಂದೆಡೆ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಅಥ್ಲೆಟಿಕ್ಸ್‌ನಲ್ಲಿ ಅವಿನಾಶ್ ಸಬ್ಲೆ ಭಾರತಕ್ಕೆ ಚಿನ್ನದ ಪದಕ ಗೆದ್ದರು. ಈ ಪದಕವು ಐತಿಹಾಸಿಕ ಎಂಬುದು ವಿಶೇಷ. ಏಕೆಂದರೆ ಭಾರತವು ಈ ಹಿಂದೆ ಏಷ್ಯನ್ ಗೇಮ್ಸ್‌ನಲ್ಲಿ ಈ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದಿರಲಿಲ್ಲ. ಈ ಬಾರಿ ಅವಿನಾಶ್ 8:19:53 ನಿಮಿಷಗಳಲ್ಲಿ ಓಟ ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದರು.

ನಾಲ್ಕನೇ ಸ್ಥಾನದಲ್ಲಿ ಭಾರತ:

ಪ್ರಸ್ತುತ ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 13 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಇನ್ನು 120 ಚಿನ್ನ, 71 ಬೆಳ್ಳಿ, 37 ಕಂಚಿನ ಪದಕಗಳೊಂದಿಗೆ ಒಟ್ಟು 228 ಪದಕಗಳನ್ನು ಗೆದ್ದಿರುವ ಆತಿಥೇಯ ಚೀನಾ (ಗಣತಂತ್ರ) ದೇಶವು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Published On - 7:08 pm, Sun, 1 October 23

Follow Us
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ