AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಶಾಟ್ ಪುಟ್​ನಲ್ಲಿ ಸ್ವರ್ಣ ಪದಕ ಗೆದ್ದ ತೇಜಿಂದರ್‌ಪಾಲ್ ಸಿಂಗ್

Asian Games: ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 13 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

Asian Games: ಶಾಟ್ ಪುಟ್​ನಲ್ಲಿ ಸ್ವರ್ಣ ಪದಕ ಗೆದ್ದ ತೇಜಿಂದರ್‌ಪಾಲ್ ಸಿಂಗ್
Tajinderpal Singh Toor
TV9 Web
| Edited By: |

Updated on:Oct 01, 2023 | 8:01 PM

Share

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಶಾಟ್‌ ಪುಟ್‌ ಸ್ಪರ್ಧೆಯಲ್ಲಿ ಭಾರತದ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನದ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತದ ಸ್ವರ್ಣದ ಪದಕದ ಸಂಖ್ಯೆ 13 ಕ್ಕೇರಿದೆ. ಈ ಪಂದ್ಯದಲ್ಲಿ ತೇಜಿಂದರ್ ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ಆ ಬಳಿಕ ಕಂಬ್ಯಾಕ್ ಮಾಡಿ ಚಿನ್ನದ ಪದಕ ಗೆದ್ದಿದ್ದು ವಿಶೇಷ. ಬರೋಬ್ಬರಿ 20.36 ಮೀಟರ್ ದೂರಕ್ಕೆ ಎಸೆಯುವ ಮೂಲಕ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.

ಮತ್ತೊಂದೆಡೆ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಅಥ್ಲೆಟಿಕ್ಸ್‌ನಲ್ಲಿ ಅವಿನಾಶ್ ಸಬ್ಲೆ ಭಾರತಕ್ಕೆ ಚಿನ್ನದ ಪದಕ ಗೆದ್ದರು. ಈ ಪದಕವು ಐತಿಹಾಸಿಕ ಎಂಬುದು ವಿಶೇಷ. ಏಕೆಂದರೆ ಭಾರತವು ಈ ಹಿಂದೆ ಏಷ್ಯನ್ ಗೇಮ್ಸ್‌ನಲ್ಲಿ ಈ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದಿರಲಿಲ್ಲ. ಈ ಬಾರಿ ಅವಿನಾಶ್ 8:19:53 ನಿಮಿಷಗಳಲ್ಲಿ ಓಟ ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದರು.

ನಾಲ್ಕನೇ ಸ್ಥಾನದಲ್ಲಿ ಭಾರತ:

ಪ್ರಸ್ತುತ ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 13 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಇನ್ನು 120 ಚಿನ್ನ, 71 ಬೆಳ್ಳಿ, 37 ಕಂಚಿನ ಪದಕಗಳೊಂದಿಗೆ ಒಟ್ಟು 228 ಪದಕಗಳನ್ನು ಗೆದ್ದಿರುವ ಆತಿಥೇಯ ಚೀನಾ (ಗಣತಂತ್ರ) ದೇಶವು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Published On - 7:08 pm, Sun, 1 October 23

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ