R. Praggnanandhaa: ವಿಶ್ವ ಚಾಂಪಿಯನ್​ಗೆ ಸೋಲುಣಿಸಿ ಅಗ್ರಸ್ಥಾನಕ್ಕೇರಿದ ಆರ್​. ಪ್ರಜ್ಞಾನಂದ

Tata Steel Masters 2024: ನೆದರ್​ಲೆಂಡ್ಸ್​ನ ವಿಜ್ಕ್ ಆನ್ ಝೀಯಲ್ಲಿ ನಡೆದ ಟಾಟಾ ಸ್ಟೀಲ್ ಮಾಸ್ಟರ್ಸ್‌ ಚೆಸ್ ಸ್ಪರ್ಧೆಯಲ್ಲಿ ಆರ್​. ಪ್ರಜ್ಞಾನಂದ ಜಾಣ ನಡೆಗಳ ಮೂಲಕ ಗಮನ ಸೆಳೆದರು. ಹಾಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರ ತಂತ್ರಗಳಿಗೆ ಪ್ರತಿ ಹೆಣೆದ ಪ್ರಜ್ಞಾನಂದ ನಾಲ್ಕನೇ ಸುತ್ತಿನಲ್ಲಿ ಸೋಲುಣಿಸುವಲ್ಲಿ ಯಶಸ್ವಿಯಾದರು.

R. Praggnanandhaa: ವಿಶ್ವ ಚಾಂಪಿಯನ್​ಗೆ ಸೋಲುಣಿಸಿ ಅಗ್ರಸ್ಥಾನಕ್ಕೇರಿದ ಆರ್​. ಪ್ರಜ್ಞಾನಂದ
R. Praggnanandhaa
Follow us
| Updated By: ಝಾಹಿರ್ ಯೂಸುಫ್

Updated on:Jan 17, 2024 | 1:27 PM

ಭಾರತದ ಚೆಸ್ ಚತುರ ಆರ್​. ಪ್ರಜ್ಞಾನಂದ (R. Praggnanandhaa) ಅವರು 2024 ರ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್‌ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರಿಗೆ ಸೋಲುಣಿಸಿದ್ದಾರೆ. ಈ ಗೆಲುವಿನೊಂದಿಗೆ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರನ್ನು ಹಿಂದಿಕ್ಕಿ ಆರ್​. ಪ್ರಜ್ಞಾನಂದ ಭಾರತದ ಅಗ್ರ ಶ್ರೇಯಾಂಕಿತ ಚೆಸ್ ಪಟುವಾಗಿ ಹೊರಹೊಮ್ಮಿದ್ದಾರೆ.

ಜನವರಿ 16 ರಂದು ನೆದರ್​ಲೆಂಡ್ಸ್​ನ ವಿಜ್ಕ್ ಆನ್ ಝೀಯಲ್ಲಿ ನಡೆದ ಟಾಟಾ ಸ್ಟೀಲ್ ಮಾಸ್ಟರ್ಸ್‌ ಚೆಸ್ ಸ್ಪರ್ಧೆಯಲ್ಲಿ ಆರ್​. ಪ್ರಜ್ಞಾನಂದ ಜಾಣ ನಡೆಗಳ ಮೂಲಕ ಗಮನ ಸೆಳೆದರು. ಹಾಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರ ತಂತ್ರಗಳಿಗೆ ಪ್ರತಿ ಹೆಣೆದ ಪ್ರಜ್ಞಾನಂದ ನಾಲ್ಕನೇ ಸುತ್ತಿನಲ್ಲಿ ಸೋಲುಣಿಸುವಲ್ಲಿ ಯಶಸ್ವಿಯಾದರು.

ಈ ಮೂಲಕ ವರ್ಲ್ಡ್ ಕ್ಲಾಸಿಕ್ ಚೆಸ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್‌ನನ್ನು ಸೋಲಿಸಿದ ಎರಡನೇ ಭಾರತೀಯ ಎನಿಸಿಕೊಂಡರು. ಇದಕ್ಕೂ ಮುನ್ನ ವಿಶ್ವನಾಥನ್ ಆನಂದ್ ಈ ಸಾಧನೆ ಮಾಡಿದ್ದರು. ಇದೀಗ ನಾಲ್ಕನೇ ಶ್ರೇಯಾಂಕಿತ ಚೀನಾದ ಲಿರೆನ್ ವಿರುದ್ಧ ಗೆಲ್ಲುವ ಮೂಲಕ ಆರ್​. ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ.

ನಂಬರ್-1 ಸ್ಥಾನಕ್ಕೇರಿದ ಪ್ರಜ್ಞಾನಂದ:

ಡಿಂಗ್ ಲಿರೆನ್ ವಿರುದ್ಧದ ಈ ಐತಿಹಾಸಿಕ ಗೆಲುವಿನೊಂದಿಗೆ ಆರ್​. ಪ್ರಜ್ಞಾನಂದ FIDE ರ್ಯಾಂಕಿಂಗ್​ನಲ್ಲಿ ಭಾರತದ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರನ್ನು ಹಿಂದಿಕ್ಕಿದ್ದಾರೆ. ಆನಂದ್ ಅವರು ಪ್ರಸ್ತುತ ಶ್ರೇಯಾಂಕ ಪಟ್ಟಿಯಲ್ಲಿ 2748 ರೇಟಿಂಗ್​ನೊಂದಿಗೆ 11ನೇ ಸ್ಥಾನದಲ್ಲಿದ್ದರೆ, ಪ್ರಜ್ಞಾನಂದ 2748.3 ರೇಟಿಂಗ್‌ನೊಂದಿಗೆ ಮೇಲೇರಿದ್ದಾರೆ.

ಇದನ್ನೂ ಓದಿ: NZ vs PAK: 2 ಓವರ್​ಗಳಲ್ಲಿ 51 ರನ್ಸ್​: ಪಾಕ್ ಬೌಲರ್​ಗಳ ಬೆಂಡೆತ್ತಿದ ಫಿನ್ ಅಲೆನ್

ಈ ಮೂಲಕ ಅಂತಾರಾಷ್ಟ್ರೀಯ ಚೆಸ್ ಫೆಡರೇಷನ್ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ನಂಬರ್ ಚೆಸ್ ಪಟುವಾಗಿ ಆರ್​. ಪ್ರಜ್ಞಾನಂದ ಹೊರಹೊಮ್ಮಿದ್ದಾರೆ. ಇನ್ನು ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮ್ಯಾಗ್ನಸ್ ಕಾರ್ಲ್‌ಸೆನ್. ನಾರ್ವೆಯ ಚೆಸ್ ತಾರೆ ಒಟ್ಟು 2830 ರೇಟಿಂಗ್ ಪಡೆಯುವ ಮೂಲಕ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Published On - 1:23 pm, Wed, 17 January 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್