AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್ ಪ್ರವಾಸ: ಕೊಹ್ಲಿ ವಾಸ್ತವ್ಯಕ್ಕೆ ರಗ್ಬಿ ದಿಗ್ಗಜನ ಪೆಂಟ್​ಹೌಸ್

ಯುಎಇನಲ್ಲಿ ಐಪಿಎಲ್ ಮುಗಿಸಿರೋ ಟೀಮ್ ಇಂಡಿಯಾ ಆಟಗಾರರು, ದುಬೈನಿಂದಲೇ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಈಗಾಗಲೇ ಕೊಹ್ಲಿ ಬಾಯ್ಸ್ ಆಸ್ಟ್ರೇಲಿಯಾದ ಸಿಡ್ನಿಯನ್ನ ತಲುಪಿದ್ದಾರೆ. ಗುರುವಾರ ಸಿಡ್ನಿಗೆ ಬಂದಿಳಿದಿರುವ ಕೊಹ್ಲಿ ನಾಯಕತ್ವದ 25 ಆಟಗಾರರ ಭಾರತ ತಂಡವನ್ನು ಕೋವಿಡ್ ತಡೆ ನಿಯಮದ ಪ್ರಕಾರ ಪ್ರತ್ಯೇಕವಾಸಕ್ಕೆ ಒಳಪಡಿಸಲಾಗಿದೆ. ಪುಲ್​ಮ್ಯಾನ್ ಹೋಟೆಲ್‌ನಲ್ಲಿ pullman hotel ಟೀಮ್ ಇಂಡಿಯಾದ ಎಲ್ಲಾ ಆಟಗಾರರಿಗೂ ಪ್ರತ್ಯೇಕ ವಾಸದ ವ್ಯವಸ್ಥೆ ಮಾಡಲಾಗಿದೆ. ಅದ್ರಲ್ಲೂ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ರಗ್ಬಿ ದಂತಕತೆ ಬ್ರಾಡ್ ಪಿಟ್ಲರ್ ವಿಶೇಷ ಪೆಂಟ್‌ಹೌಸ್‌ ಅನ್ನು […]

ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್ ಪ್ರವಾಸ: ಕೊಹ್ಲಿ ವಾಸ್ತವ್ಯಕ್ಕೆ ರಗ್ಬಿ ದಿಗ್ಗಜನ ಪೆಂಟ್​ಹೌಸ್
ಸಾಧು ಶ್ರೀನಾಥ್​
|

Updated on: Nov 13, 2020 | 3:56 PM

Share

ಯುಎಇನಲ್ಲಿ ಐಪಿಎಲ್ ಮುಗಿಸಿರೋ ಟೀಮ್ ಇಂಡಿಯಾ ಆಟಗಾರರು, ದುಬೈನಿಂದಲೇ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಈಗಾಗಲೇ ಕೊಹ್ಲಿ ಬಾಯ್ಸ್ ಆಸ್ಟ್ರೇಲಿಯಾದ ಸಿಡ್ನಿಯನ್ನ ತಲುಪಿದ್ದಾರೆ. ಗುರುವಾರ ಸಿಡ್ನಿಗೆ ಬಂದಿಳಿದಿರುವ ಕೊಹ್ಲಿ ನಾಯಕತ್ವದ 25 ಆಟಗಾರರ ಭಾರತ ತಂಡವನ್ನು ಕೋವಿಡ್ ತಡೆ ನಿಯಮದ ಪ್ರಕಾರ ಪ್ರತ್ಯೇಕವಾಸಕ್ಕೆ ಒಳಪಡಿಸಲಾಗಿದೆ.

ಪುಲ್​ಮ್ಯಾನ್ ಹೋಟೆಲ್‌ನಲ್ಲಿ pullman hotel ಟೀಮ್ ಇಂಡಿಯಾದ ಎಲ್ಲಾ ಆಟಗಾರರಿಗೂ ಪ್ರತ್ಯೇಕ ವಾಸದ ವ್ಯವಸ್ಥೆ ಮಾಡಲಾಗಿದೆ. ಅದ್ರಲ್ಲೂ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ರಗ್ಬಿ ದಂತಕತೆ ಬ್ರಾಡ್ ಪಿಟ್ಲರ್ ವಿಶೇಷ ಪೆಂಟ್‌ಹೌಸ್‌ ಅನ್ನು penthouse ಕೊಹ್ಲಿಗೆ ನೀಡಲಾಗಿದೆ. ಪುಲ್​ಮ್ಯಾನ್ ಹೊಟೇಲ್​ನಲ್ಲಿ ಬ್ರಾಡ್ ಪಿಟ್ಲರ್​ಗಾಗಿ ಪೆಂಟ್​ಹೌಸ್​ ಒಂದನ್ನ ಮೀಸಲಿಡಲಾಗಿತ್ತು. ಇದನ್ನ ಈಗ ನಾಯಕ ಕೊಹ್ಲಿಗೆ ನೀಡಲಾಗಿದೆ ಎಂದು ಆಸ್ಟ್ರೇಲಿಯಾ ಇಂಗ್ಲೀಷ್ ಪತ್ರಿಕೆ ವರದಿ ಮಾಡಿದೆ.

ಟೀಮ್ ಇಂಡಿಯಾ ಆಟಗಾರರು ಸಿಡ್ನಿಯಲ್ಲಿ ಎರಡು ವಾರಗಳ ಕಾಲ ಅಂದ್ರೆ, 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿರಲಿದ್ದಾರೆ. ಸದ್ಯ ಬಯೊ ಬಬಲ್ ನಿಯಮದಲ್ಲಿರೋ bio bubble ಟೀಮ್ ಇಂಡಿಯಾ ಆಟಗಾರರಿಗೆ, ಬ್ಲ್ಯಾಕ್‌ಟೌನ್ ಅಂತಾರಾಷ್ಟ್ರೀಯ ಸ್ಪೋರ್ಟ್ಸ್‌ ಪಾರ್ಕ್‌ನಲ್ಲಿ ಪ್ರಾಕ್ಟೀಸ್ ಮಾಡೋದಕ್ಕೆ ಅವಕಾಶ ನೀಡಲಾಗಿದೆ.

ಹಾಗೇ ಐಪಿಎಲ್‌ನಲ್ಲಿ ಆಡಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಪ್ಯಾಟ್ ಕಮಿನ್ಸ್‌, ಌಡಮ್ ಜಂಪಾ, ಆರೋನ್ ಫಿಂಚ್ ಕೂಡ ಆಸ್ಟ್ರೇಲಿಯಾ ತಲುಪಿದ್ದಾರೆ. ಟೀಮ್ ಇಂಡಿಯಾ ನಾಯಕ ಕೊಹ್ಲಿ, ಜನವರಿಯಲ್ಲಿ ತಂದೆಯಾಗುತ್ತಿರೋ ಹಿನ್ನೆಲೆಯಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾತ್ರ ಟೀಮ್ ಇಂಡಿಯಾವನ್ನ ಪ್ರತಿನಿಧಿಸಲಿದ್ದಾರೆ. ಬಳಿಕ ಪಿತೃತ್ವದ ರಜೆ ಮೇಲೆ ಕೊಹ್ಲಿ ತವರಿಗೆ ಬರಲಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ