AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಕನ್ನಡಿಗ ಕೆಎಲ್​ ರಾಹುಲ್​ಗೆ ವಿಶ್ರಾಂತಿ ನೀಡಲಾಗಿದೆ.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Dec 16, 2020 | 6:51 PM

Share

ನಾಳೆಯಿಂದ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಮೊದಲ ಟೆಸ್ಟ್​ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟ ಮಾಡಿದೆ. ಕನ್ನಡಿಗ ಕೆಎಲ್​ ರಾಹುಲ್​ ಅವರನ್ನು ತಂಡದಿಂದ ಹೊರಗಿಡಲಾಗಿದೆ.

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಮಯಾಂಕ್​ ಅಗರ್​ವಾಲ್​, ಪೃಥ್ವಿ ಶಾ, ಚೇತೇಶ್ವರ ಪೂಜಾರಾ​, ಹನುಮ ವಿಹಾರಿ, ವೃದ್ಧಿಮಾನ್​ ಸಾಹಾ, ರವಿಚಂದ್ರನ್​ ಅಶ್ವಿನ್​, ಉಮೇಶ್​ ಯಾದವ್​, ಮೊಹ್ಮದ್​ ಶಮಿ ಹಾಗೂ ಜಸ್ಪ್ರೀತ್​ ಬೂಮ್ರಾ ಪ್ಲೇಯಿಂಗ್​ 11 ನಲ್ಲಿದ್ದಾರೆ.

ಇನಅಇದ

ಶುಭ್​ ಮನ್ ಗಿಲ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ರಿಷಭ್ ಪಂತ್, ನವದೀಪ್ ಸೈನಿ, ಮೊಹ್ಮದ್​ ಸಿರಾಜ್, ರವೀಂದ್ರ ಜಡೇಜಾ ಬೆಂಚ್​ನಲ್ಲಿರುವ ಆಟಗಾರರಾಗಿದ್ದಾರೆ.

ಕನ್ನಡಿಗ ಕೆಎಲ್​ ರಾಹುಲ್​ ಮೊದಲ ಟೆಸ್ಟ್​ನಲ್ಲಿ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಕೆಲ್​ ರಾಹುಲ್​ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿಯ ಅಗತ್ಯತೆ ಇದೆ. ಅಲ್ಲದೆ, ಎರಡನೇ ಟೆಸ್ಟ್​ನಿಂದ ವಿರಾಟ್​ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ.

ಮೊದಲ ಟೆಸ್ಟ್​ಗೆ ಮಾತ್ರ ವಿರಾಟ್​ ಕೊಹ್ಲಿ ಆಡಲಿದ್ದಾರೆ. ಎರಡನೇ ಟೆಸ್ಟ್​ ನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ರೋಹಿತ್​ ಶರ್ಮಾ ಫಿಟ್​ ಎಂದು ಘೋಷಣೆ ಆಗಿದ್ದು, ಮೂರನೇ ಟೆಸ್ಟ್​​ಗೆ ಅವರು ಮರಳುವ ಸಾಧ್ಯತೆ ಇದೆ. ಏಕದಿನ ಸರಣಿ ಆಸ್ಟ್ರೇಲಿಯಾ ಪಾಲಾದರೆ, ಟಿ-20 ಕಪ್​ಅನ್ನು ಭಾರತ ಎತ್ತಿದೆ.

Published On - 2:38 pm, Wed, 16 December 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ