AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಕನ್ನಡಿಗ ಕೆಎಲ್​ ರಾಹುಲ್​ಗೆ ವಿಶ್ರಾಂತಿ ನೀಡಲಾಗಿದೆ.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Dec 16, 2020 | 6:51 PM

Share

ನಾಳೆಯಿಂದ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಮೊದಲ ಟೆಸ್ಟ್​ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟ ಮಾಡಿದೆ. ಕನ್ನಡಿಗ ಕೆಎಲ್​ ರಾಹುಲ್​ ಅವರನ್ನು ತಂಡದಿಂದ ಹೊರಗಿಡಲಾಗಿದೆ.

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಮಯಾಂಕ್​ ಅಗರ್​ವಾಲ್​, ಪೃಥ್ವಿ ಶಾ, ಚೇತೇಶ್ವರ ಪೂಜಾರಾ​, ಹನುಮ ವಿಹಾರಿ, ವೃದ್ಧಿಮಾನ್​ ಸಾಹಾ, ರವಿಚಂದ್ರನ್​ ಅಶ್ವಿನ್​, ಉಮೇಶ್​ ಯಾದವ್​, ಮೊಹ್ಮದ್​ ಶಮಿ ಹಾಗೂ ಜಸ್ಪ್ರೀತ್​ ಬೂಮ್ರಾ ಪ್ಲೇಯಿಂಗ್​ 11 ನಲ್ಲಿದ್ದಾರೆ.

ಇನಅಇದ

ಶುಭ್​ ಮನ್ ಗಿಲ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ರಿಷಭ್ ಪಂತ್, ನವದೀಪ್ ಸೈನಿ, ಮೊಹ್ಮದ್​ ಸಿರಾಜ್, ರವೀಂದ್ರ ಜಡೇಜಾ ಬೆಂಚ್​ನಲ್ಲಿರುವ ಆಟಗಾರರಾಗಿದ್ದಾರೆ.

ಕನ್ನಡಿಗ ಕೆಎಲ್​ ರಾಹುಲ್​ ಮೊದಲ ಟೆಸ್ಟ್​ನಲ್ಲಿ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಕೆಲ್​ ರಾಹುಲ್​ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿಯ ಅಗತ್ಯತೆ ಇದೆ. ಅಲ್ಲದೆ, ಎರಡನೇ ಟೆಸ್ಟ್​ನಿಂದ ವಿರಾಟ್​ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ.

ಮೊದಲ ಟೆಸ್ಟ್​ಗೆ ಮಾತ್ರ ವಿರಾಟ್​ ಕೊಹ್ಲಿ ಆಡಲಿದ್ದಾರೆ. ಎರಡನೇ ಟೆಸ್ಟ್​ ನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ರೋಹಿತ್​ ಶರ್ಮಾ ಫಿಟ್​ ಎಂದು ಘೋಷಣೆ ಆಗಿದ್ದು, ಮೂರನೇ ಟೆಸ್ಟ್​​ಗೆ ಅವರು ಮರಳುವ ಸಾಧ್ಯತೆ ಇದೆ. ಏಕದಿನ ಸರಣಿ ಆಸ್ಟ್ರೇಲಿಯಾ ಪಾಲಾದರೆ, ಟಿ-20 ಕಪ್​ಅನ್ನು ಭಾರತ ಎತ್ತಿದೆ.

Published On - 2:38 pm, Wed, 16 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ