AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಕನ್ನಡಿಗ ಕೆಎಲ್​ ರಾಹುಲ್​ಗೆ ವಿಶ್ರಾಂತಿ ನೀಡಲಾಗಿದೆ.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Dec 16, 2020 | 6:51 PM

Share

ನಾಳೆಯಿಂದ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಮೊದಲ ಟೆಸ್ಟ್​ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟ ಮಾಡಿದೆ. ಕನ್ನಡಿಗ ಕೆಎಲ್​ ರಾಹುಲ್​ ಅವರನ್ನು ತಂಡದಿಂದ ಹೊರಗಿಡಲಾಗಿದೆ.

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಮಯಾಂಕ್​ ಅಗರ್​ವಾಲ್​, ಪೃಥ್ವಿ ಶಾ, ಚೇತೇಶ್ವರ ಪೂಜಾರಾ​, ಹನುಮ ವಿಹಾರಿ, ವೃದ್ಧಿಮಾನ್​ ಸಾಹಾ, ರವಿಚಂದ್ರನ್​ ಅಶ್ವಿನ್​, ಉಮೇಶ್​ ಯಾದವ್​, ಮೊಹ್ಮದ್​ ಶಮಿ ಹಾಗೂ ಜಸ್ಪ್ರೀತ್​ ಬೂಮ್ರಾ ಪ್ಲೇಯಿಂಗ್​ 11 ನಲ್ಲಿದ್ದಾರೆ.

ಇನಅಇದ

ಶುಭ್​ ಮನ್ ಗಿಲ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ರಿಷಭ್ ಪಂತ್, ನವದೀಪ್ ಸೈನಿ, ಮೊಹ್ಮದ್​ ಸಿರಾಜ್, ರವೀಂದ್ರ ಜಡೇಜಾ ಬೆಂಚ್​ನಲ್ಲಿರುವ ಆಟಗಾರರಾಗಿದ್ದಾರೆ.

ಕನ್ನಡಿಗ ಕೆಎಲ್​ ರಾಹುಲ್​ ಮೊದಲ ಟೆಸ್ಟ್​ನಲ್ಲಿ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಕೆಲ್​ ರಾಹುಲ್​ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿಯ ಅಗತ್ಯತೆ ಇದೆ. ಅಲ್ಲದೆ, ಎರಡನೇ ಟೆಸ್ಟ್​ನಿಂದ ವಿರಾಟ್​ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ.

ಮೊದಲ ಟೆಸ್ಟ್​ಗೆ ಮಾತ್ರ ವಿರಾಟ್​ ಕೊಹ್ಲಿ ಆಡಲಿದ್ದಾರೆ. ಎರಡನೇ ಟೆಸ್ಟ್​ ನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ರೋಹಿತ್​ ಶರ್ಮಾ ಫಿಟ್​ ಎಂದು ಘೋಷಣೆ ಆಗಿದ್ದು, ಮೂರನೇ ಟೆಸ್ಟ್​​ಗೆ ಅವರು ಮರಳುವ ಸಾಧ್ಯತೆ ಇದೆ. ಏಕದಿನ ಸರಣಿ ಆಸ್ಟ್ರೇಲಿಯಾ ಪಾಲಾದರೆ, ಟಿ-20 ಕಪ್​ಅನ್ನು ಭಾರತ ಎತ್ತಿದೆ.

Published On - 2:38 pm, Wed, 16 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ