AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೇರಳದಲ್ಲಿ ಫುಟ್‌ಬಾಲ್ ಪಂದ್ಯ ವೀಕ್ಷಣೆ ವೇಳೆ ಗ್ಯಾಲರಿ ಕುಸಿದು 200 ಜನರಿಗೆ ಗಾಯ; ಐವರ ಸ್ಥಿತಿ ಗಂಭೀರ

ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆಗಾಗಿ ತಾತ್ಕಾಲಿಕವಾಗಿ ನಿರ್ಮಿಸಿದದ್ದ ಗ್ಯಾಲರಿ ಕುಸಿದು ಈ ಅವಘಡ ಸಂಭವಿಸಿದೆ. ಇದರಲ್ಲಿ ಸುಮಾರು 200 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Video: ಕೇರಳದಲ್ಲಿ ಫುಟ್‌ಬಾಲ್ ಪಂದ್ಯ ವೀಕ್ಷಣೆ ವೇಳೆ ಗ್ಯಾಲರಿ ಕುಸಿದು 200 ಜನರಿಗೆ ಗಾಯ; ಐವರ ಸ್ಥಿತಿ ಗಂಭೀರ
ಗ್ಯಾಲರಿ ಕುಸಿತದ ಫೋಟೋ
TV9 Web
| Edited By: |

Updated on:Mar 20, 2022 | 11:48 AM

Share

ಕೇರಳದಲ್ಲಿ ಫುಟ್ಬಾಲ್ ಪಂದ್ಯದ (football match) ವೇಳೆ ಈ ಅವಘಡ ಸಂಭವಿಸಿದ್ದು, ಮಲಪ್ಪುರಂ ಜಿಲ್ಲೆಯ ವಂದೂರು ಬಳಿ ಈ ದುರ್ಘಟನೆ ನಡೆದಿದೆ. ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆಗಾಗಿ ತಾತ್ಕಾಲಿಕವಾಗಿ ನಿರ್ಮಿಸಿದದ್ದ ಗ್ಯಾಲರಿ ಕುಸಿದು (gallery collapsed) ಈ ಅವಘಡ ಸಂಭವಿಸಿದೆ. ಇದರಲ್ಲಿ ಸುಮಾರು 200 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ಇದೇ ವೇಳೆ ವಿದ್ಯುತ್ ಸರಬರಾಜಿಗಾಗಿ ಅಲವಡಿಸಲಾಗಿದ್ದ ಪೋಲ್ ಬಿದ್ದು ಐವರ ಸ್ಥಿತಿ ಗಂಭೀರವಾಗಿದೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಘಡ ಸಂಭವಿಸಿದಾಗ ಪಂದ್ಯ ವೀಕ್ಷಿಸಲು 2 ಸಾವಿರಕ್ಕೂ ಹೆಚ್ಚು ಮಂದಿ ಗ್ಯಾಲರಿಯಲ್ಲಿ ಸೇರಿದ್ದರು ಎಂದು ವರದಿಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಎರಡು ಸ್ಥಳೀಯ ತಂಡಗಳ ನಡುವಿನ ಫೈನಲ್ ಪಂದ್ಯ ವೀಕ್ಷಿಸಲು ಜನರು ಬಂದಿದ್ದರು.

ಕಾಳಿಕಾವು-ವಂದೂರು ರಸ್ತೆಯ ಪೂಂಗೋಡು ಫುಟ್ಬಾಲ್ ಮೈದಾನದಲ್ಲಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ವಂಡೂರು ಮತ್ತು ಸುತ್ತಮುತ್ತಲಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೂವರನ್ನು ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9.30ರ ಸುಮಾರಿಗೆ ಗ್ಯಾಲರಿ ಕುಸಿದು ಬಿದ್ದಾಗ ಅದರಲ್ಲಿ 1000ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಿದಿರು ಮತ್ತು ಅಡಿಕೆ ಮರದ ಹಲಗೆಗಳಿಂದ ಗ್ಯಾಲರಿಯನ್ನು ನಿರ್ಮಿಸಲಾಗಿತ್ತು. ಕಳೆದ ಎರಡು ದಿನಗಳಲ್ಲಿ ಈ ಪ್ರದೇಶದಲ್ಲಿ ಬಿದ್ದ ಬೇಸಿಗೆಯ ತುಂತುರು ಮಳೆಯಿಂದಾಗಿ ಭಾರ ತಡೆಯಲಾಗಿದೆ ಈ ಗ್ಯಾಲರಿ ಕುಸಿದು ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಗಾಯಗೊಂಡವರಲ್ಲಿ ಹಲವರಿಗೆ ಕಾಲು ಮತ್ತು ಕೈಗಳು ಮುರಿದಿದ್ದು, ಇವರಲ್ಲಿ 100 ಕ್ಕೂ ಅಧಿಕವಾಗಿ ಮಕ್ಕಳೇ ಇದ್ದಾರೆ ಎಂದು ಹೇಳಲಾಗುತ್ತಿದೆ.

ಸಂಘಟಕರ ಅಜಾಗೂರಕತೆ ಗ್ಯಾಲರಿ ಸಂಪೂರ್ಣ ಭರ್ತಿಯಾಗಿದ್ದರೂ ವೀಕ್ಷಕರು ಬರುವುದನ್ನು ತಡೆಯಲು ಸಂಘಟಕರಿಂದ ಆಗದ ಕಾರಣ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದರಲ್ಲಿ ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:ರಷ್ಯಾ- ಉಕ್ರೇನ್ ಯುದ್ಧ; ಶಿಕ್ಷಣ ವಂಚಿತ ಉಕ್ರೇನ್ ಮಕ್ಕಳ ನೆರವಿಗೆ ಬಂದ ಟೆನಿಸ್ ಲೆಜೆಂಡ್ ರೋಜರ್ ಫೆಡರರ್

Published On - 11:37 am, Sun, 20 March 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ