AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rafael Nadal: ಟೆನಿಸ್ ತಾರೆ ರಾಫೆಲ್​ ನಡಾಲ್​ಗೆ ಕೊರೊನಾ ಸೋಂಕು ದೃಢ! ಮನೆಯಲ್ಲಿ ಕ್ವಾರಂಟೈನ್‌

Rafael Nadal: ಯುಎಇಯಲ್ಲಿ ಇತ್ತೀಚೆಗೆ ನಡೆದ ಪ್ರದರ್ಶನ ಸಮಾರಂಭದಲ್ಲಿ ಗಾಯಗೊಂಡ ನಡಾಲ್ ಸ್ಪೇನ್‌ಗೆ ಹಿಂದಿರುಗಿದ್ದರು. ಈ ವೇಳೆ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು ವರದಿಯಲ್ಲಿ ನಡಾಲ್​ಗೆ ಕೊರೊನಾ ತಗುಲಿರುವುದು ಖಚಿತವಾಗಿದೆ.

Rafael Nadal: ಟೆನಿಸ್ ತಾರೆ ರಾಫೆಲ್​ ನಡಾಲ್​ಗೆ ಕೊರೊನಾ ಸೋಂಕು ದೃಢ! ಮನೆಯಲ್ಲಿ ಕ್ವಾರಂಟೈನ್‌
ರಾಫೆಲ್ ನಡಾಲ್
TV9 Web
| Updated By: ಪೃಥ್ವಿಶಂಕರ|

Updated on:Dec 20, 2021 | 5:21 PM

Share

ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಇತ್ತೀಚೆಗೆ ನಡೆದ ಪ್ರದರ್ಶನ ಸಮಾರಂಭದಲ್ಲಿ ಗಾಯಗೊಂಡ ನಡಾಲ್ ಸ್ಪೇನ್‌ಗೆ ಹಿಂದಿರುಗಿದ್ದರು. ಈ ವೇಳೆ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು ವರದಿಯಲ್ಲಿ ನಡಾಲ್​ಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಸ್ವತಃ ನಡಾಲ್ ಅವರೇ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ.

ಈ ಮಾಹಿತಿಯನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ನಡಾಲ್, ಅಬುಧಾಬಿ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ನಾನು ಮನೆಗೆ ಆಗಮಿಸಿದ ನಂತರ ನಡೆಸಿದ ಆರ್​ಟಿ ಪಿಸಿಆರ್ ಪರೀಕ್ಷೆಯಲ್ಲಿ ನನಗೆ ಕೋವಿಡ್ ತಗುಲಿರುವುದು ಖಚಿತವಾಗಿದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

ಮೆಲ್ಬೋರ್ನ್‌ಗೆ ಹಾರಬೇಕಿತ್ತು ಸ್ಪ್ಯಾನಿಷ್‌ನ ಮಾಜಿ ವಿಶ್ವ ನಂಬರ್ ಒನ್ ಆಟಗಾರ ಈ ತಿಂಗಳ ಕೊನೆಯಲ್ಲಿ ಆಸ್ಟ್ರೇಲಿಯನ್ ಓಪನ್‌ಗೆ ಮುಂಚಿತವಾಗಿ ATP ಈವೆಂಟ್‌ನಲ್ಲಿ ಸ್ಪರ್ಧಿಸಲು ಮೆಲ್ಬೋರ್ನ್‌ಗೆ ಹಾರಬೇಕಿತ್ತು. 20 ಬಾರಿಯ ಮೇಜರ್ ಚಾಂಪಿಯನ್ ಕಳೆದ ಆರು ತಿಂಗಳುಗಳಿಂದ ಕಾಲಿನ ಗಾಯದಿಂದ ಬಳಲುತ್ತಿದ್ದರು. ಇದರಿಂದ ಅವರು ವಿಂಬಲ್ಡನ್ ಮತ್ತು US ಓಪನ್ ಎರಡರಿಂದಲೂ ಹಿಂದೆ ಸರಿಯಬೇಕಾಯಿತು.

ನಡಾಲ್ ಅಬುಧಾಬಿಯಲ್ಲಿ ಶುಕ್ರವಾರ ನಡೆದ ಪ್ರದರ್ಶನ ಪಂದ್ಯದಲ್ಲಿ ವಿಶ್ವದ ಮಾಜಿ ನಂಬರ್ ಒನ್ ಆಂಡಿ ಮುರ್ರೆ ವಿರುದ್ಧ ಸೋತರು, ಇದು ಆಗಸ್ಟ್ ನಂತರ ಅವರ ಮೊದಲ ಪಂದ್ಯವಾಗಿದೆ. ನಂತರ ಶನಿವಾರ ನಡೆದ ಪಂದ್ಯದಲ್ಲಿ ವಿಂಬಲ್ಡನ್ ಸೆಮಿಫೈನಲಿಸ್ಟ್ ಕೆನಡಾದ ಡೆನಿಸ್ ಶಪೊವಾಲೊವ್ ವಿರುದ್ಧ ಕೂಡ ನಡಾಲ್​ಗೆ ಗೆಲುವು ಸಿಗಲಿಲ್ಲ.

ಅನಾರೋಗ್ಯದಿಂದ ಸುಮಾರು ಅರ್ಧದಷ್ಟು ಋತುವನ್ನು ಕಳೆದುಕೊಂಡಿದ್ದರೂ, ಬಾರ್ಸಿಲೋನಾ ಮತ್ತು ರೋಮ್‌ನಲ್ಲಿ ಎರಡು ಪ್ರಶಸ್ತಿಗಳನ್ನು ಗೆಲ್ಲುವಲ್ಲಿ ನಡಾಲ್ ಯಶಸ್ವಿಯಾಗಿದ್ದಾರೆ. ನಂತರ ಫ್ರೆಂಚ್ ಓಪನ್‌ನಲ್ಲಿ ಸೆಮಿ-ಫೈನಲ್ ಮತ್ತು ಆಸ್ಟ್ರೇಲಿಯನ್ ಓಪನ್‌ನಲ್ಲಿ ಕ್ವಾರ್ಟರ್ಸ್ ಹಂತಕ್ಕೂ ತಲುಪಿದರು. ಹೀಗಾಗಿ 2021 ರ ವಿಶ್ವ ರ್ಯಾಕಿಂಗ್​ನಲ್ಲಿ ಅವರು 6ನೇ ಸ್ಥಾನಕ್ಕೇರಿದ್ದಾರೆ.

Published On - 5:01 pm, Mon, 20 December 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ