AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thomas Cup: ಥಾಮಸ್ ಕಪ್ ವಿಜೇತರಿಗೆ ಕೇಂದ್ರದಿಂದ 1 ಕೋಟಿ, ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ ಘೋಷಣೆ

Thomas Cup 2022: ಥಾಮಸ್ ಮತ್ತು ಉಬರ್ ಕಪ್‌ನ ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಭಾರತೀಯ ಪುರುಷರ ತಂಡ ಐತಿಹಾಸಿಕ ಗೆಲುವು ದಾಖಲಿಸಿ ಬ್ಯಾಡ್ಮಿಂಟನ್​ನಲ್ಲಿ ಹೊಸ ಇತಿಹಾಸ ಬರೆದಿದೆ.

Thomas Cup: ಥಾಮಸ್ ಕಪ್ ವಿಜೇತರಿಗೆ ಕೇಂದ್ರದಿಂದ 1 ಕೋಟಿ, ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ ಘೋಷಣೆ
Indian Team
TV9 Web
| Updated By: ಝಾಹಿರ್ ಯೂಸುಫ್|

Updated on:May 17, 2022 | 2:22 PM

Share

ಚೊಚ್ಚಲ ಬಾರಿಗೆ ಥಾಮಸ್ ಕಪ್ (Thomas Cup 2022) ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ಬ್ಯಾಡ್ಮಿಂಟನ್ ತಂಡದ ಆಟಗಾರ ಲಕ್ಷ್ಯ ಸೇನ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ 5 ಲಕ್ಷ ರೂ. ಬಹುಮಾನ ಮೊತ್ತ ಘೋಷಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ, ಥಾಮಸ್ ಕಪ್​ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿದ ರಾಜ್ಯದ ಬ್ಯಾಡ್ಮಿಂಟನ್ ಆಟಗಾರನಿಗೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ ನೀಡುವುದಾಗಿ ತಿಳಿಸಿದರು. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು 1 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಿದೆ. 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಟ್ವೀಟ್ ನಲ್ಲಿ ನಗದು ಬಹುಮಾನವನ್ನು ಘೋಷಿಸಿದ್ದರು. ಇದೀಗ ರಾಜ್ಯ ಸರ್ಕಾರ ಕೂಡ ಥಾಮಸ್ ಕಪ್ ವಿಜೇತರಿಗೆ ನಗದು ಬಹುಮಾನ ನೀಡಲು ಮುಂದಾಗಿದೆ.

ಭಾನುವಾರ ಬ್ಯಾಂಕಾಕ್‌ನಲ್ಲಿ ನಡೆದ ಥಾಮಸ್ ಮತ್ತು ಉಬರ್ ಕಪ್‌ನ ಫೈನಲ್‌ನಲ್ಲಿ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಭಾರತ ತಂಡವು ಹೊಸ ಇತಿಹಾಸ ಬರೆಯಿತು.ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತೆ ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್ ಮತ್ತು ವಿಶ್ವದ 8ನೇ ಶ್ರೇಯಾಂಕದ ಡಬಲ್ಸ್ ಜೋಡಿಯ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಸ್ಪೂರ್ತಿದಾಯಕ ಪ್ರಯತ್ನದೊಂದಿಗೆ ಎದುರಾಳಿಯ ವಿರುದ್ಧ ಪ್ರಬಲ ಪ್ರದರ್ಶನ ನೀಡಿದರು. ಈ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದ್ದರು. ಈ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

“ಭಾರತೀಯ ಬ್ಯಾಡ್ಮಿಂಟನ್ ತಂಡವು ಇತಿಹಾಸವನ್ನು ಬರೆದಿದೆ! ಥಾಮಸ್ ಕಪ್ ಗೆದ್ದ ಭಾರತ ತಂಡದಿಂದಾಗಿ ಇಡೀ ದೇಶವೇ ಸಂಭ್ರಮಿಸಿದೆ! ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗಾಗಿ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದರು.

ಥಾಮಸ್ ಮತ್ತು ಉಬರ್ ಕಪ್‌ನ ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಭಾರತೀಯ ಪುರುಷರ ತಂಡ ಐತಿಹಾಸಿಕ ಗೆಲುವು ದಾಖಲಿಸಿ ಬ್ಯಾಡ್ಮಿಂಟನ್​ನಲ್ಲಿ ಹೊಸ ಚರಿತ್ರೆ ಬರೆದಿದೆ. ಈ ಮೂಲಕ ಚೀನಾ, ಇಂಡೋನೇಷ್ಯಾ, ಜಪಾನ್, ಡೆನ್ಮಾರ್ಕ್ ನಂತರ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎನಿಸಿಕೊಂಡಿದೆ.

ಲಕ್ಷ್ಯ ಸೇನ್, ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತು ಕಿಡಂಬಿ ಶ್ರೀಕಾಂತ್ ಅವರು ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ಇತಿಹಾಸ ಬರೆದಿದ್ದು, ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವು ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಕಿರೀಟವನ್ನು ತನ್ನದಾಗಿಸಿಕೊಂಡಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:16 pm, Mon, 16 May 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್