Tokyo Olympics: ಒಲಿಂಪಿಕ್ಸ್​ಗೆ ಮತ್ತೆ ಕೊರೊನಾ ಕರಿನೆರಳು: ಇಬ್ಬರು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು

ಕೋವಿಡ್ ಸೋಂಕು ಪಾಸಿಟಿವ್ ಬಂದಿರುವ ಇಬ್ಬರಲ್ಲಿ ಒಬ್ಬರು ಸೌತ್ ಕೊರಿಯಾದ ಇಂಟರ್ ನ್ಯಾಷನಲ್ ಒಲಿಂಪಿಕ್ ಕಮಿಟಿ (ಐಒಸಿ) ಸದಸ್ಯ ಎಂದು ತಿಳಿದು ಬಂದಿದೆ. ಸೋಂಕಿಗೀಡಾಗಿರುವವರು ಈಗ ಐಸೊಲೇಶನ್‌ನಲ್ಲಿದ್ದಾರೆ.

Tokyo Olympics: ಒಲಿಂಪಿಕ್ಸ್​ಗೆ ಮತ್ತೆ ಕೊರೊನಾ ಕರಿನೆರಳು: ಇಬ್ಬರು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು
ಟೋಕಿಯೊ ಒಲಿಂಪಿಕ್ಸ್‌
Follow us
| Updated By: Vinay Bhat

Updated on: Jul 18, 2021 | 12:29 PM

ಟೋಕಿಯೊ ಒಲಿಂಪಿಕ್ಸ್ (Tokyo Olympics) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ ಅತಿ ದೊಡ್ಡ ಕ್ರೀಡಾಕೂಟಕ್ಕೆ ಕೊರೊನಾ (Corona) ಕರಿ ನೆರಳು ಮತ್ತೆ ಆವರಿಸಿದೆ. ಕ್ರೀಡಾಪ್ರದೇಶದಲ್ಲಿ ಇಬ್ಬರು ಅಥ್ಲೀಟ್​ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಧಿಕಾರಿಗಳು ಈ ವಿಚಾರವನ್ನು ಖಾತರಿಪಡಿಸಿದ್ದಾರೆ.

ಕ್ರೀಡಾ ಪ್ರದೇಶದಲ್ಲಿ ಸೋಂಕು ಪತ್ತೆಯಾದ ಮೊದಲ ಪ್ರಕರಣ ಇದಾಗಿದ್ದು ಟೋಕಿಯೊ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮತ್ತೋರ್ವ ಕ್ರೀಡಾಪಟುವಿಗೂ ಕೋವಿಡ್ ಸೋಂಕು ದೃಢವಾಗಿದೆ. ಆದರೆ ಆತ ಕ್ರೀಡಾ ಪ್ರದೇಶ ಪ್ರವೇಶಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಲಿಂಪಿಕ್ಸ್ ಸಂಘಟಕರು ಶನಿವಾರ ಕ್ರೀಡಾಪಟುಗಳ ಹಳ್ಳಿಯಲ್ಲಿ ಕೋವಿಡ್ -19 ರ ಮೊದಲ ಪ್ರಕರಣವನ್ನು ವರದಿ ಮಾಡಿದ್ದರು.

ಕೋವಿಡ್-19 ಸೋಂಕು ಪಾಸಿಟಿವ್ ಬಂದಿರುವ ಇಬ್ಬರಲ್ಲಿ ಒಬ್ಬರು ಸೌತ್ ಕೊರಿಯಾದ ಇಂಟರ್ ನ್ಯಾಷನಲ್ ಒಲಿಂಪಿಕ್ ಕಮಿಟಿ (ಐಒಸಿ) ಸದಸ್ಯ ಎಂದು ತಿಳಿದು ಬಂದಿದೆ. ಸೋಂಕಿಗೀಡಾಗಿರುವವರು ಈಗ ಐಸೊಲೇಶನ್‌ನಲ್ಲಿದ್ದಾರೆ. ಮುಂದಿನ ವಾರ ಪ್ರಾರಂಭವಾಗುವ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 14 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸುರಕ್ಷಿತ ಒಲಿಂಪಿಕ್​ನ ಭರವಸೆಗಳ ಬಗ್ಗೆ ಅನುಮಾನ ಮೂಡುತ್ತಿದೆ.

ಟೋಕಿಯೊ ಒಲಿಂಪಿಕ್ಸ್‌ ಮೇಲೆ ಕೊರೊನಾ ವೈರಸ್‌ ಪರಿಣಾಮ ಬೀರುತ್ತಲೇ ಇದೆ. ಕಳೆದ ವರ್ಷವೂ ಕೊರೊನಾದಿಂದಾಗಿ ಈ ಆಟಗಳನ್ನು ಒಂದು ವರ್ಷ ಮುಂದೂಡಲಾಯಿತು. ಈ ವರ್ಷ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ, ಆದರೆ ಕೊರೊನಾಂತಕ ಕಡಿಮೆಯಾಗಿಲ್ಲ.

ಈ ಮೊದಲು ಘಾನಾದ ಆಟಗಾರ ಕೊರೊನಾ ಪಾಸಿಟಿವ್ ಎಂಬ ಸುದ್ದಿ ಬಂದಿತ್ತು. ಅದೇ ಸಮಯದಲ್ಲಿ, ಒಲಿಂಪಿಕ್ ನಿರಾಶ್ರಿತರ ತಂಡವು ಕೊರೊನಾ ಸೋಂಕಿಗೆ ಒಳಗಾದ ಸುದ್ದಿ ಕೂಡ ಕೇಳಿ ಬಂದಿತ್ತು. ಟೋಕಿಯೊಗೆ ತೆರಳುವ ಮೊದಲು, ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರಾಶ್ರಿತರ ತಂಡದ ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.

IND vs SL: ಲಂಕಾ ಕೊನೆಯದಾಗಿ ಏಕದಿನ ಸರಣಿ ಗೆದ್ದಾಗ ಭಾರತದ ಈ ಸ್ಟಾರ್ ಪ್ಲೇಯರ್ ಹುಟ್ಟಿಯೇ ಇರಲಿಲ್ಲ!

India vs Sri Lanka 1st ODI: ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯ ಎಲ್ಲಿ?, ಯಾವುದರಲ್ಲಿ ನೇರಪ್ರಸಾರ?, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ

(Tokyo Games Two Athletes Positive For COVID-19 In Olympic Village Say Officials)

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ