AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympic: ಯೂನಿವರ್ಸಿಟಿ ಕೋಟಾದಲ್ಲಿ ಒಲಿಂಪಿಕ್ಸ್​ ಟಿಕೆಟ್ ಪಡೆದ ಈಜುಗಾರ್ತಿ ಮಾನ ಪಟೇಲ್​! ಕ್ರೀಡಾ ಸಚಿವರ ಶ್ಲಾಘನೆ

Tokyo Olympic: ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಮಹಿಳೆ ಮತ್ತು ಮೂರನೇ ಭಾರತೀಯ ಈಜುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾನಾಗೆ ವಿಶ್ವವಿದ್ಯಾಲಯದ ಕೋಟಾದಡಿಯಲ್ಲಿ ಒಲಿಂಪಿಕ್ಸ್‌ನಲ್ಲಿ ಪ್ರವೇಶ ಸಿಕ್ಕಿದೆ.

Tokyo Olympic: ಯೂನಿವರ್ಸಿಟಿ ಕೋಟಾದಲ್ಲಿ ಒಲಿಂಪಿಕ್ಸ್​ ಟಿಕೆಟ್ ಪಡೆದ ಈಜುಗಾರ್ತಿ ಮಾನ ಪಟೇಲ್​! ಕ್ರೀಡಾ ಸಚಿವರ ಶ್ಲಾಘನೆ
ಮಾನ ಪಟೇಲ್
ಪೃಥ್ವಿಶಂಕರ
|

Updated on: Jul 02, 2021 | 4:37 PM

Share

ಭಾರತೀಯ ಮಹಿಳಾ ಈಜುಪಟು ಮಾನ ಪಟೇಲ್ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಈಜು ಫೆಡರೇಶನ್ ಆಫ್ ಇಂಡಿಯಾ ಶುಕ್ರವಾರ ಇದನ್ನು ದೃಢಪಡಿಸಿದೆ. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಮಹಿಳೆ ಮತ್ತು ಮೂರನೇ ಭಾರತೀಯ ಈಜುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾನಾಗೆ ವಿಶ್ವವಿದ್ಯಾಲಯದ ಕೋಟಾದಡಿಯಲ್ಲಿ ಒಲಿಂಪಿಕ್ಸ್‌ನಲ್ಲಿ ಪ್ರವೇಶ ಸಿಕ್ಕಿದೆ. 21 ವರ್ಷದ ಮನ 100 ಮೀಟರ್ ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಶ್ರೀಹರಿ ನಟರಾಜ ಮತ್ತು ಸಜನ್ ಪ್ರಕಾಶ್ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಕ್ಸ್​ಗೆ ಟಿಕೆಟ್ ಪಡೆದ ದೇಶದ ಮೂರನೇ ಈಜುಗಾರ್ತಿಯಾಗಿದ್ದಾರೆ. ಸಾಜನ್ ಪ್ರಕಾಶ್ 200 ಮೀಟರ್ ಬಟರ್​​ಫ್ಲೈ ವಿಭಾಗದಲ್ಲಿ ‘ಎ’ ಅಂಕ ಮತ್ತು 100 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶ್ರೀಹಾರಿ ನಟರಾಜ್ ಸ್ಥಾನ ಪಡೆದಿದ್ದರು. ಯೂನಿವರ್ಸಿಟಿ ಕೋಟಾವು ಒಂದು ದೇಶದ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಸ್ಪರ್ಧಿಯನ್ನು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ.

ಕ್ರೀಡಾ ಸಚಿವರ ಅಭಿನಂದನೆ ಟೋಕಿಯೊಗೆ ಭೇಟಿ ನೀಡಿದ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಶುಕ್ರವಾರ, ಬ್ಯಾಕ್‌ಸ್ಟ್ರೋಕ್ ಈಜುಗಾರ್ತಿ ಮಾನ ಪಟೇಲ್, ಟೋಕಿಯೊ 2020 ಗೆ ಅರ್ಹತೆ ಪಡೆದ ಮೊದಲ ಮಹಿಳೆ ಮತ್ತು ಮೂರನೇ ಭಾರತೀಯ ಈಜುಗಾರ್ತಿ. ಯೂನಿವರ್ಸಿಟಿ ಕೋಟಾ ಮೂಲಕ ಅರ್ಹತೆ ಪಡೆದ ಮನ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

2019 ರ ನಂತರ ಮಾನ ಈ ವರ್ಷ ಪುನರಾಗಮನ ಮಾಡಿದರು ಮಾನ ಒಲಿಂಪಿಕ್ಸ್ ಡಾಟ್ ಕಾಮ್​ಗೆ ನೀಡಿದ ಸಮದರ್ಶನದಲ್ಲಿ, ಇದು ಅದ್ಭುತ ಭಾವನೆ. ನಾನು ಸಹ ಈಜುಗಾರರಿಂದ ಒಲಿಂಪಿಕ್ಸ್ ಬಗ್ಗೆ ಕೇಳಿದ್ದೇನೆ ಮತ್ತು ಅವರನ್ನು ದೂರದರ್ಶನದಲ್ಲಿ ನೋಡಿದ್ದೇನೆ. ಆದರೆ ಈ ಬಾರಿ ಅಲ್ಲಿಗೆ ಬಂದಿರುವುದು, ವಿಶ್ವದ ಅತ್ಯುತ್ತಮ ಸ್ಪರ್ಧೆಗಳೊಂದಿಗೆ ಸ್ಪರ್ಧಿಸಲು ನಾನು ರೋಮಾಂಚನಗೊಂಡಿದ್ದೇನೆ. 21 ವರ್ಷದ ಈಜುಗಾರ್ತಿ 2019 ರಲ್ಲಿ ಪಾದದ ಗಾಯದಿಂದ ಬಳಲುತ್ತಿದ್ದರು ಮತ್ತು ಈ ವರ್ಷದ ಆರಂಭದಲ್ಲಿ ಪುನರಾಗಮನ ಮಾಡಿದರು.

ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ