Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympic: ಯೂನಿವರ್ಸಿಟಿ ಕೋಟಾದಲ್ಲಿ ಒಲಿಂಪಿಕ್ಸ್​ ಟಿಕೆಟ್ ಪಡೆದ ಈಜುಗಾರ್ತಿ ಮಾನ ಪಟೇಲ್​! ಕ್ರೀಡಾ ಸಚಿವರ ಶ್ಲಾಘನೆ

Tokyo Olympic: ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಮಹಿಳೆ ಮತ್ತು ಮೂರನೇ ಭಾರತೀಯ ಈಜುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾನಾಗೆ ವಿಶ್ವವಿದ್ಯಾಲಯದ ಕೋಟಾದಡಿಯಲ್ಲಿ ಒಲಿಂಪಿಕ್ಸ್‌ನಲ್ಲಿ ಪ್ರವೇಶ ಸಿಕ್ಕಿದೆ.

Tokyo Olympic: ಯೂನಿವರ್ಸಿಟಿ ಕೋಟಾದಲ್ಲಿ ಒಲಿಂಪಿಕ್ಸ್​ ಟಿಕೆಟ್ ಪಡೆದ ಈಜುಗಾರ್ತಿ ಮಾನ ಪಟೇಲ್​! ಕ್ರೀಡಾ ಸಚಿವರ ಶ್ಲಾಘನೆ
ಮಾನ ಪಟೇಲ್
Follow us
ಪೃಥ್ವಿಶಂಕರ
|

Updated on: Jul 02, 2021 | 4:37 PM

ಭಾರತೀಯ ಮಹಿಳಾ ಈಜುಪಟು ಮಾನ ಪಟೇಲ್ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಈಜು ಫೆಡರೇಶನ್ ಆಫ್ ಇಂಡಿಯಾ ಶುಕ್ರವಾರ ಇದನ್ನು ದೃಢಪಡಿಸಿದೆ. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಮಹಿಳೆ ಮತ್ತು ಮೂರನೇ ಭಾರತೀಯ ಈಜುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾನಾಗೆ ವಿಶ್ವವಿದ್ಯಾಲಯದ ಕೋಟಾದಡಿಯಲ್ಲಿ ಒಲಿಂಪಿಕ್ಸ್‌ನಲ್ಲಿ ಪ್ರವೇಶ ಸಿಕ್ಕಿದೆ. 21 ವರ್ಷದ ಮನ 100 ಮೀಟರ್ ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಶ್ರೀಹರಿ ನಟರಾಜ ಮತ್ತು ಸಜನ್ ಪ್ರಕಾಶ್ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಕ್ಸ್​ಗೆ ಟಿಕೆಟ್ ಪಡೆದ ದೇಶದ ಮೂರನೇ ಈಜುಗಾರ್ತಿಯಾಗಿದ್ದಾರೆ. ಸಾಜನ್ ಪ್ರಕಾಶ್ 200 ಮೀಟರ್ ಬಟರ್​​ಫ್ಲೈ ವಿಭಾಗದಲ್ಲಿ ‘ಎ’ ಅಂಕ ಮತ್ತು 100 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶ್ರೀಹಾರಿ ನಟರಾಜ್ ಸ್ಥಾನ ಪಡೆದಿದ್ದರು. ಯೂನಿವರ್ಸಿಟಿ ಕೋಟಾವು ಒಂದು ದೇಶದ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಸ್ಪರ್ಧಿಯನ್ನು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ.

ಕ್ರೀಡಾ ಸಚಿವರ ಅಭಿನಂದನೆ ಟೋಕಿಯೊಗೆ ಭೇಟಿ ನೀಡಿದ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಶುಕ್ರವಾರ, ಬ್ಯಾಕ್‌ಸ್ಟ್ರೋಕ್ ಈಜುಗಾರ್ತಿ ಮಾನ ಪಟೇಲ್, ಟೋಕಿಯೊ 2020 ಗೆ ಅರ್ಹತೆ ಪಡೆದ ಮೊದಲ ಮಹಿಳೆ ಮತ್ತು ಮೂರನೇ ಭಾರತೀಯ ಈಜುಗಾರ್ತಿ. ಯೂನಿವರ್ಸಿಟಿ ಕೋಟಾ ಮೂಲಕ ಅರ್ಹತೆ ಪಡೆದ ಮನ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

2019 ರ ನಂತರ ಮಾನ ಈ ವರ್ಷ ಪುನರಾಗಮನ ಮಾಡಿದರು ಮಾನ ಒಲಿಂಪಿಕ್ಸ್ ಡಾಟ್ ಕಾಮ್​ಗೆ ನೀಡಿದ ಸಮದರ್ಶನದಲ್ಲಿ, ಇದು ಅದ್ಭುತ ಭಾವನೆ. ನಾನು ಸಹ ಈಜುಗಾರರಿಂದ ಒಲಿಂಪಿಕ್ಸ್ ಬಗ್ಗೆ ಕೇಳಿದ್ದೇನೆ ಮತ್ತು ಅವರನ್ನು ದೂರದರ್ಶನದಲ್ಲಿ ನೋಡಿದ್ದೇನೆ. ಆದರೆ ಈ ಬಾರಿ ಅಲ್ಲಿಗೆ ಬಂದಿರುವುದು, ವಿಶ್ವದ ಅತ್ಯುತ್ತಮ ಸ್ಪರ್ಧೆಗಳೊಂದಿಗೆ ಸ್ಪರ್ಧಿಸಲು ನಾನು ರೋಮಾಂಚನಗೊಂಡಿದ್ದೇನೆ. 21 ವರ್ಷದ ಈಜುಗಾರ್ತಿ 2019 ರಲ್ಲಿ ಪಾದದ ಗಾಯದಿಂದ ಬಳಲುತ್ತಿದ್ದರು ಮತ್ತು ಈ ವರ್ಷದ ಆರಂಭದಲ್ಲಿ ಪುನರಾಗಮನ ಮಾಡಿದರು.

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್