AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympic: ಟೋಕಿಯೊ ಒಲಿಂಪಿಕ್ಸ್ ನಡೆಯುವ ಪ್ರದೇಶದಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲು

ಟೋಕಿಯೊ ಒಲಿಂಪಿಂಕ್ ನಡೆಯಲಿರುವ ಪ್ರದೇಶದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸ್ಕ್ರೀನಿಂಗ್ ನಡೆಸುವ ವೇಳೆ ಈ ವಿಚಾರ ತಿಳಿದುಬಂದಿದೆ.

Tokyo Olympic: ಟೋಕಿಯೊ ಒಲಿಂಪಿಕ್ಸ್ ನಡೆಯುವ ಪ್ರದೇಶದಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲು
ಟೋಕಿಯೊ ಒಲಿಂಪಿಕ್ಸ್‌
TV9 Web
| Edited By: |

Updated on:Jul 17, 2021 | 10:01 AM

Share

ಬಹುನಿರೀಕ್ಷಿತ ಟೋಕಿಯೊ ಒಲಿಂಪಿಕ್ಸ್ಗೆ(Tokyo Olympics) ಮತ್ತೆ ಕೊರೊನಾ (Corona virus) ಕರಿನೆರಳು ಆವರಿಸಿದೆ. ಕ್ರೀಡಾಕೂಟ ಆರಂಭಕ್ಕೆ ಇನ್ನೇನು ಆರು ದಿನಗಳು ಇರುವಾಗಲೇ ಟೋಕಿಯೊ ಒಲಿಂಪಿಂಕ್ ನಡೆಯಲಿರುವ ಸ್ಥಳದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಟೋಕಿಯೊ ಸಂಘಟನಾ ಸಮಿತಿ ಮಾಹಿತಿ ನೀಡಿದೆ.

ಟೋಕಿಯೊ ಒಲಿಂಪಿಕ್ಸ್ ನಡೆಯಲಿರುವ ಪ್ರದೇಶದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸ್ಕ್ರೀನಿಂಗ್ ನಡೆಸುವ ವೇಳೆ ಈ ವಿಚಾರ ತಿಳಿದುಬಂದಿದೆ” ಎಂದು ಟೋಕಿಯೊ ಸಂಘಟನಾ ಸಮಿತಿಯ ಮಸಾ ಟಕಾಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿ ಯಾರು, ಯಾವ ದೇಶದವರು ಎಂಬುದು ಇನ್ನೂ ಬಹಿರಂಗ ಪಡಿಸಿಲ್ಲ.

ಟೋಕಿಯೊ ಒಲಿಂಪಿಕ್ಸ್‌ ಮೇಲೆ ಕೊರೊನಾ ವೈರಸ್‌ ಪರಿಣಾಮ ಬೀರುತ್ತಲೇ ಇದೆ. ಕಳೆದ ವರ್ಷವೂ ಕೊರೊನಾದಿಂದಾಗಿ ಈ ಆಟಗಳನ್ನು ಒಂದು ವರ್ಷ ಮುಂದೂಡಲಾಯಿತು. ಈ ವರ್ಷ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ, ಆದರೆ ಕೊರೊನಾಂತಕ ಕಡಿಮೆಯಾಗಿಲ್ಲ.

ಈ ಮೊದಲು ಘಾನಾದ ಆಟಗಾರ ಕೊರೊನಾ ಪಾಸಿಟಿವ್ ಎಂಬ ಸುದ್ದಿ ಬಂದಿತ್ತು. ಅದೇ ಸಮಯದಲ್ಲಿ, ಒಲಿಂಪಿಕ್ ನಿರಾಶ್ರಿತರ ತಂಡವು ಕೊರೊನಾ ಸೋಂಕಿಗೆ ಒಳಗಾದ ಸುದ್ದಿ ಕೂಡ ಕೇಳಿ ಬಂದಿತ್ತು. ಟೋಕಿಯೊಗೆ ತೆರಳುವ ಮೊದಲು, ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರಾಶ್ರಿತರ ತಂಡದ ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.

India vs Sri lanka: ಹಾರ್ದಿಕ್-ಧವನ್ ಅಲ್ಲ: ಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ಗೇಮ್ ಚೇಂಜರ್ ಈತನಂತೆ!

ಟಿ-20 ವಿಶ್ವಕಪ್​ನಲ್ಲಿ ಭಾರತಕ್ಕೆ ಪಾಕ್ ಎದುರಾಳಿ! ಚುಟುಕು ಸಮರದಲ್ಲಿ ಬದ್ಧವೈರಿ ಎದುರು ಭಾರತವೇ ಬೆಸ್ಟ್

(First COVID-19 Case In Tokyo Olympic Village: Organisers)

Published On - 9:55 am, Sat, 17 July 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?