AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಲವ್ಲಿನಾ, ಪಿ.ವಿ.ಸಿಂಧು, ಮೀರಾಬಾಯಿ ಚಾನುರಿಗೆ ಅಮುಲ್​ ಅಭಿನಂದನೆ..

Tokyo Olympics 2020: ಈ ಬಾರಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್​ಗಳು ಅದ್ಭುತ ಸಾಧನೆ ಮಾಡುತ್ತಿದ್ದಾರೆ. ಮೀರಾಬಾಯಿ ಚಾನು ಅವರಿಂದ ಶುರುವಾದ ಪದಕ ಬೇಟೆ ಮುಂದುವರಿದಿದೆ. ಅದರಲ್ಲೂ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವಲ್ಲಿ ಮಹಿಳೆಯರೇ ಒಂದು ಕೈ ಮುಂದಿದ್ದಾರೆ.

ಒಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಲವ್ಲಿನಾ, ಪಿ.ವಿ.ಸಿಂಧು, ಮೀರಾಬಾಯಿ ಚಾನುರಿಗೆ ಅಮುಲ್​ ಅಭಿನಂದನೆ..
ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಲವ್ಲಿನಾ ಬಾರ್ಗೋಹೈನ್, ಪಿ.ವಿ.ಸಿಂಧು ​ ಮತ್ತು ಮೀರಾಬಾಯಿ ಚಾನು
TV9 Web
| Edited By: |

Updated on:Aug 05, 2021 | 6:43 PM

Share

ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ (Tokyo Olympics)​ನಲ್ಲಿ ಭಾರತದ ಯುವ ಬಾಕ್ಸರ್​​ ಲವ್ಲಿನಾ ಬಾರ್ಗೋಹೈನ್(Lovlina Borgohain)​ ಕಂಚಿನ ಪದಕ (Bronze) ಗೆದ್ದಿದ್ದಾರೆ. ಸೆಮಿಫೈನಲ್​ನಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋತಿದ್ದರಿಂದ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು. ಆದರೆ ಅದ್ಭುತ ಫೈಟ್​ಕೊಟ್ಟ ಲವ್ಲಿನಾರನ್ನು ಇಡೀ ದೇಶ ಹೊಗಳುತ್ತಿದೆ. ಈಗ ಭಾರತದ ಡೇರಿ ಉತ್ಪನ್ನಗಳ ಪ್ರಮುಖ ಕಂಪನಿಯಾದ ಅಮುಲ್ (Amul) ಕೂಡ ಕಾರ್ಟೂನ್​ ಮೂಲಕ ಲವ್ಲಿನಾರಿಗೆ ವಿಶೇಷ ಗೌರವ, ಅಭಿನಂದನೆ ಸಲ್ಲಿಸಿದೆ. ಕೈಯಲ್ಲಿ ಬೊಕ್ಕೆ ಹಿಡಿದು, ತನ್ನ ಪದಕವನ್ನು ಎತ್ತಿ ತೋರಿಸುತ್ತಿರುವ ಲವ್ಲಿನಾ ಬಾರ್ಗೋಹೈನ್ ಅವರಿಗೆ ಅಮುಲ್ ಬೇಬಿ ಶುಭಾಶಯ ಹೇಳುತ್ತಿರುವಂಥ ಕಾರ್ಟೂನ್​ ತುಂಬ ಮುದ್ದಾಗಿದೆ.

ಅಮುಲ್​ ಕೇವಲ ಲವ್ಲಿನಾರಿಗೆ ಅಷ್ಟೇ ಅಲ್ಲದೆ, ಒಲಿಂಪಿಕ್ಸ್​ನಲ್ಲಿ ಸಾಧನೆ ಮಾಡಿದ ಪ್ರತಿಯೊಬ್ಬರಿಗೂ ತನ್ನದೇ ರೀತಿಯಲ್ಲಿ ಅಭಿನಂದನೆ ಸಲ್ಲಿಸುತ್ತಿದೆ. ಹಾಗೇ ಈಗಾಗಲೇ ಕಂಚು ಗೆದ್ದಿರುವ ಬ್ಯಾಡ್ಮಿಂಟನ್​ ತಾರೆ ಪಿ.ವಿ.ಸಿಂಧು, ಬೆಳ್ಳಿ ಗೆದ್ದ ಮೀರಾಬಾಯಿ ಚಾನು ಅವರಿಗೂ ಕಾರ್ಟೂನ್​ ಮೂಲಕ ಅಮುಲ್ ಶುಭಾಶಯ ಕೋರಿದೆ. ಅಷ್ಟೇ ಅಲ್ಲ, 41 ವರ್ಷದ ಬಳಿಕ ಕಂಚಿನ ಪದಕ ಗೆದ್ದು, ಐತಿಹಾಸಿಕ ಸಾಧನೆ ಮಾಡಿದ ಪುರುಷರ ಹಾಕಿ ತಂಡಕ್ಕೂ ಅಭಿನಂದನೆ ಸಲ್ಲಿದೆ. ಇದೀಗ ಬೆಳ್ಳಿ ಗೆದ್ದಿರುವ ಕುಸ್ತಿಪಟು ರವಿಕುಮಾರ್ ದಹಿಯಾ ಅವರಿಗೂ ಶುಭಕೋರಿದೆ.

ಈ ಬಾರಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್​ಗಳು ಅದ್ಭುತ ಸಾಧನೆ ಮಾಡುತ್ತಿದ್ದಾರೆ. ಮೀರಾಬಾಯಿ ಚಾನು ಅವರಿಂದ ಶುರುವಾದ ಪದಕ ಬೇಟೆ ಮುಂದುವರಿದಿದೆ. ಅದರಲ್ಲೂ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವಲ್ಲಿ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು, ಪ್ರತಿಯೊಬ್ಬ ಭಾರತೀಯರೂ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: Tokyo Olympics: ಕೊನೆಯ 10 ಸೆಕೆಂಡುಗಳಲ್ಲಿ ಪಂದ್ಯ ಕೈಚೆಲ್ಲಿದ ಕುಸ್ತಿಪಟು ದೀಪಕ್ ಪೂನಿಯಾ; ಕಂಚಿನ ಪದಕದ ಪಂದ್ಯದಲ್ಲಿ ಸೋಲು

Amul celebrates women power at Tokyo Olympics with beautiful cartoons

Published On - 6:31 pm, Thu, 5 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ