AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಲವ್ಲಿನಾ, ಪಿ.ವಿ.ಸಿಂಧು, ಮೀರಾಬಾಯಿ ಚಾನುರಿಗೆ ಅಮುಲ್​ ಅಭಿನಂದನೆ..

Tokyo Olympics 2020: ಈ ಬಾರಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್​ಗಳು ಅದ್ಭುತ ಸಾಧನೆ ಮಾಡುತ್ತಿದ್ದಾರೆ. ಮೀರಾಬಾಯಿ ಚಾನು ಅವರಿಂದ ಶುರುವಾದ ಪದಕ ಬೇಟೆ ಮುಂದುವರಿದಿದೆ. ಅದರಲ್ಲೂ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವಲ್ಲಿ ಮಹಿಳೆಯರೇ ಒಂದು ಕೈ ಮುಂದಿದ್ದಾರೆ.

ಒಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಲವ್ಲಿನಾ, ಪಿ.ವಿ.ಸಿಂಧು, ಮೀರಾಬಾಯಿ ಚಾನುರಿಗೆ ಅಮುಲ್​ ಅಭಿನಂದನೆ..
ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಲವ್ಲಿನಾ ಬಾರ್ಗೋಹೈನ್, ಪಿ.ವಿ.ಸಿಂಧು ​ ಮತ್ತು ಮೀರಾಬಾಯಿ ಚಾನು
TV9 Web
| Edited By: |

Updated on:Aug 05, 2021 | 6:43 PM

Share

ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ (Tokyo Olympics)​ನಲ್ಲಿ ಭಾರತದ ಯುವ ಬಾಕ್ಸರ್​​ ಲವ್ಲಿನಾ ಬಾರ್ಗೋಹೈನ್(Lovlina Borgohain)​ ಕಂಚಿನ ಪದಕ (Bronze) ಗೆದ್ದಿದ್ದಾರೆ. ಸೆಮಿಫೈನಲ್​ನಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋತಿದ್ದರಿಂದ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು. ಆದರೆ ಅದ್ಭುತ ಫೈಟ್​ಕೊಟ್ಟ ಲವ್ಲಿನಾರನ್ನು ಇಡೀ ದೇಶ ಹೊಗಳುತ್ತಿದೆ. ಈಗ ಭಾರತದ ಡೇರಿ ಉತ್ಪನ್ನಗಳ ಪ್ರಮುಖ ಕಂಪನಿಯಾದ ಅಮುಲ್ (Amul) ಕೂಡ ಕಾರ್ಟೂನ್​ ಮೂಲಕ ಲವ್ಲಿನಾರಿಗೆ ವಿಶೇಷ ಗೌರವ, ಅಭಿನಂದನೆ ಸಲ್ಲಿಸಿದೆ. ಕೈಯಲ್ಲಿ ಬೊಕ್ಕೆ ಹಿಡಿದು, ತನ್ನ ಪದಕವನ್ನು ಎತ್ತಿ ತೋರಿಸುತ್ತಿರುವ ಲವ್ಲಿನಾ ಬಾರ್ಗೋಹೈನ್ ಅವರಿಗೆ ಅಮುಲ್ ಬೇಬಿ ಶುಭಾಶಯ ಹೇಳುತ್ತಿರುವಂಥ ಕಾರ್ಟೂನ್​ ತುಂಬ ಮುದ್ದಾಗಿದೆ.

ಅಮುಲ್​ ಕೇವಲ ಲವ್ಲಿನಾರಿಗೆ ಅಷ್ಟೇ ಅಲ್ಲದೆ, ಒಲಿಂಪಿಕ್ಸ್​ನಲ್ಲಿ ಸಾಧನೆ ಮಾಡಿದ ಪ್ರತಿಯೊಬ್ಬರಿಗೂ ತನ್ನದೇ ರೀತಿಯಲ್ಲಿ ಅಭಿನಂದನೆ ಸಲ್ಲಿಸುತ್ತಿದೆ. ಹಾಗೇ ಈಗಾಗಲೇ ಕಂಚು ಗೆದ್ದಿರುವ ಬ್ಯಾಡ್ಮಿಂಟನ್​ ತಾರೆ ಪಿ.ವಿ.ಸಿಂಧು, ಬೆಳ್ಳಿ ಗೆದ್ದ ಮೀರಾಬಾಯಿ ಚಾನು ಅವರಿಗೂ ಕಾರ್ಟೂನ್​ ಮೂಲಕ ಅಮುಲ್ ಶುಭಾಶಯ ಕೋರಿದೆ. ಅಷ್ಟೇ ಅಲ್ಲ, 41 ವರ್ಷದ ಬಳಿಕ ಕಂಚಿನ ಪದಕ ಗೆದ್ದು, ಐತಿಹಾಸಿಕ ಸಾಧನೆ ಮಾಡಿದ ಪುರುಷರ ಹಾಕಿ ತಂಡಕ್ಕೂ ಅಭಿನಂದನೆ ಸಲ್ಲಿದೆ. ಇದೀಗ ಬೆಳ್ಳಿ ಗೆದ್ದಿರುವ ಕುಸ್ತಿಪಟು ರವಿಕುಮಾರ್ ದಹಿಯಾ ಅವರಿಗೂ ಶುಭಕೋರಿದೆ.

ಈ ಬಾರಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್​ಗಳು ಅದ್ಭುತ ಸಾಧನೆ ಮಾಡುತ್ತಿದ್ದಾರೆ. ಮೀರಾಬಾಯಿ ಚಾನು ಅವರಿಂದ ಶುರುವಾದ ಪದಕ ಬೇಟೆ ಮುಂದುವರಿದಿದೆ. ಅದರಲ್ಲೂ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವಲ್ಲಿ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು, ಪ್ರತಿಯೊಬ್ಬ ಭಾರತೀಯರೂ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: Tokyo Olympics: ಕೊನೆಯ 10 ಸೆಕೆಂಡುಗಳಲ್ಲಿ ಪಂದ್ಯ ಕೈಚೆಲ್ಲಿದ ಕುಸ್ತಿಪಟು ದೀಪಕ್ ಪೂನಿಯಾ; ಕಂಚಿನ ಪದಕದ ಪಂದ್ಯದಲ್ಲಿ ಸೋಲು

Amul celebrates women power at Tokyo Olympics with beautiful cartoons

Published On - 6:31 pm, Thu, 5 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ